ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಿಯಾಂಕ್ ಖರ್ಗೆಗೆ ವಾಜಪೇಯಿ ಹೆಸರು ಹೇಳುವ ಯೋಗ್ಯತೆ ಇಲ್ಲ: .ರೇಣುಕಾಚಾರ್ಯ 

ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ
Last Updated 15 ಆಗಸ್ಟ್ 2021, 3:19 IST
ಅಕ್ಷರ ಗಾತ್ರ

ಹೊನ್ನಾಳಿ: ‘ವಾಜಪೇಯಿ ಹೆಸರು ಹೇಳುವ ಯೋಗ್ಯತೆ ಇಲ್ಲದವರು ಅವರ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ. ಕಾಂಗ್ರೆಸ್‌ ಮುಖಂಡ ಪ್ರಿಯಾಂಕ್‌ ಖರ್ಗೆಗೆ ಅವರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ’ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಹಾಗೂ ದಾವಣಗೆರೆ ಉಸ್ತುವಾರಿ ಸಚಿವ ಬೈರತಿ ಬಸವರಾಜ ಹರಿಹಾಯ್ದರು.

ಹೊನ್ನಾಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅಪಟ್ಟ ದೇಶಪ್ರೇಮಿ ಹಾಗೂ ಚತುಷ್ಪಥ ರಸ್ತೆಯ ಹರಿಕಾರ ವಾಜಪೇಯಿ ಬಗ್ಗೆ ಮಾತನಾಡುವ ಮೊದಲು ನಮ್ಮ ನೈತಿಕತೆ ಬಗ್ಗೆ ಪ್ರಶ್ನೆ ಮಾಡಿಕೊಳ್ಳಬೇಕು. ಬಾಯಿಗೆ ಬಂದ ಹಾಗೆ ಮಾತನಾಡಿದರೆ ಮುಂಬರುವ ಚುನಾವಣೆಗಳಲ್ಲಿ ಕ್ಷೇತ್ರದ ಜನರು ಅವರಿಗೆ ತಕ್ಕಪಾಠ ಕಲಿಸುತ್ತಾರೆ. ತಮ್ಮ ಹೇಳಿಕೆ ಬಗ್ಗೆ ರಾಜ್ಯದ ಜನರಲ್ಲಿ ಕ್ಷಮೆಯಾಚಿಸಬೇಕು’ ಎಂದು ಆಗ್ರಹಿಸಿದರು.

‘ಮಾಜಿ ಸಚಿವರು ದೆಹಲಿಗೆ ಹೋದರೆ ಬೇಡ ಅನ್ನಲು ನಾವ್ಯಾರು? ಹೋಗೋರು ಹೋಗಲಿ. ಬರೋರು ಬರಲಿ. ಬೇಡ ಎನ್ನುವುದಿಲ್ಲ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT