ದಾವಣಗೆರೆ: ಮೈಸೂರಿನ ವರುಣಾ ವಿಧಾನಸಭಾ ಕ್ಷೇತ್ರದ ಆಯರಹಳ್ಳಿ ಗ್ರಾಮದ ಸರ್ವೆ ನಂಬರ್ 96,97,98,99 ರಲ್ಲಿ ಬರುವ ಪರಿಶಿಷ್ಟ ಜಾತಿ-ಪರಿಶಿಷ್ಟಪಂಗಡ, ಹಿಂದುಳಿದ ವರ್ಗಕ್ಕೆ ಸೇರಿದ 73 ಎಕರೆ ಜಮೀನನ್ನು ವಾಟಾಳ್ ನಾಗರಾಜ್ ಒತ್ತುವರಿ ಮಾಡಿಕೊಂಡಿದ್ದಾರೆ. ಅದನ್ನು ಮಾಡಿ ಮಗಳು–ಅಳಿಯನ ಹೆಸರಿನಲ್ಲಿ ನೋಂದಣಿ ಮಾಡಿಸಿದ್ದಾರೆ. ತೋಟ ಕಾಯಲು ತಮಿಳುನಾಡಿನವರನ್ನು ನೇಮಕ ಮಾಡಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಆರೋಪಿಸಿದರು.