ಮಾಧ್ಯಮದವರ ಜೊತೆ ಮಾತನಾಡಿ, ‘ಜಮೀರ್ ಅಹ್ಮದ್ ವರ್ತನೆಯನ್ನ ನಾನು ಖಂಡಿಸುತ್ತೇನೆ. ಅವರ ಕುಮ್ಮಕ್ಕು ಇಲ್ಲದಿದ್ದರೆ ಈ ತರಹದ ಘಟನೆಗಳು ನಡೆಯುತ್ತಿರಲಿಲ್ಲ. ಸಾರಾಯಿ ಪಾಳ್ಯದಲ್ಲಿ ನಡೆದ ಘಟನೆಯನ್ನು ಖಂಡಿಸುವುದರ ಬದಲಾಗಿ ಧರ್ಮ ಮತ್ತು ಪೌರತ್ವದ ವಿಷಯವನ್ನು ಎಳೆದುತಂದರು. ಆಶಾ ಕಾರ್ಯಕರ್ತೆಯರಿಗೆ ಪೌರತ್ವದ ವಿಷಯದ ಬಗ್ಗೆ ಏನು ಗೊತ್ತು’ ಎಂದು ಪ್ರಶ್ನಿಸಿದರು.