<p><strong>ದಾವಣಗೆರೆ:</strong> ಪಾದರಾಯನಪುರ ಘಟನೆ ನಡೆಯಲು ಕಿಡಿಗೇಡಿ ಶಾಸಕ ಜಮೀರ್ ಅಹ್ಮದ್ ಕಾರಣ. ಆತ ನೀಡಿದ ಕುಮ್ಮಕ್ಕಿನಿಂದ ಗಲಾಟೆ ಆಗಿದೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಆರೋಪಿಸಿದರು.</p>.<p>ಮಾಧ್ಯಮದವರ ಜೊತೆ ಮಾತನಾಡಿ, ‘ಜಮೀರ್ ಅಹ್ಮದ್ ವರ್ತನೆಯನ್ನ ನಾನು ಖಂಡಿಸುತ್ತೇನೆ. ಅವರ ಕುಮ್ಮಕ್ಕು ಇಲ್ಲದಿದ್ದರೆ ಈ ತರಹದ ಘಟನೆಗಳು ನಡೆಯುತ್ತಿರಲಿಲ್ಲ. ಸಾರಾಯಿ ಪಾಳ್ಯದಲ್ಲಿ ನಡೆದ ಘಟನೆಯನ್ನು ಖಂಡಿಸುವುದರ ಬದಲಾಗಿ ಧರ್ಮ ಮತ್ತು ಪೌರತ್ವದ ವಿಷಯವನ್ನು ಎಳೆದುತಂದರು. ಆಶಾ ಕಾರ್ಯಕರ್ತೆಯರಿಗೆ ಪೌರತ್ವದ ವಿಷಯದ ಬಗ್ಗೆ ಏನು ಗೊತ್ತು’ ಎಂದು ಪ್ರಶ್ನಿಸಿದರು.</p>.<p>ಆಶಾ ಕಾರ್ಯಕರ್ತೆಯರ ಕೆಲಸದ ಬಗ್ಗೆ ಅವರನ್ನು ಶ್ಲಾಘಿಸಬೇಕಿತ್ತು. ಅದರ ಬದಲು ಯಾರನ್ನು ಕೇಳಿ ಬಂದಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಅದೇನು ಜಮೀರ್ ಅಹ್ಮದ್ ಅವರ ಮಾವನ ಮನೆಯಾ? ಎಂದು ಪ್ರಶ್ನಿಸಿದರು.</p>.<p>ಜಮೀರ್ ಅಹ್ಮದ್ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವ ಕುರಿತ ಪ್ರಶ್ನೆಗೆ‘ ನಮ್ಮ ಸರ್ಕಾರ ಎಷ್ಟೇ ದೊಡ್ಡ ವ್ಯಕ್ತಿಯಾದರೂ ಕ್ರಮ ಜರುಗಿಸುತ್ತದೆ. ಈ ಕುರಿತು ಮುಖ್ಯಮಂತ್ರಿ ಹಾಗೂ ಗೃಹಸಚಿವರನ್ನು ಒತ್ತಾಯಿಸುತ್ತೇನೆ’ ಎಂದರು.</p>.<p>‘ಆರೋಪಿಗಳನ್ನು ರಾಮನಗರ ಜೈಲಿಗೆ ಕರೆದುಕೊಂಡು ಹೋಗಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರಾಜಕೀಯ ಮಾಡುವುದು ಬೇಡ. ಆರೋಪಿಗಳನ್ನ ಜೈಲಿಗೆ ಕಳುಹಿಸದೇ ಅವರನ್ನು ಮನೆಗೆ ಕಳುಹಿಸಬೇಕಿತ್ತಾ? ಕುಮಾರಸ್ವಾಮಿ ಅವರು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡಬಾರದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಪಾದರಾಯನಪುರ ಘಟನೆ ನಡೆಯಲು ಕಿಡಿಗೇಡಿ ಶಾಸಕ ಜಮೀರ್ ಅಹ್ಮದ್ ಕಾರಣ. ಆತ ನೀಡಿದ ಕುಮ್ಮಕ್ಕಿನಿಂದ ಗಲಾಟೆ ಆಗಿದೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಆರೋಪಿಸಿದರು.</p>.<p>ಮಾಧ್ಯಮದವರ ಜೊತೆ ಮಾತನಾಡಿ, ‘ಜಮೀರ್ ಅಹ್ಮದ್ ವರ್ತನೆಯನ್ನ ನಾನು ಖಂಡಿಸುತ್ತೇನೆ. ಅವರ ಕುಮ್ಮಕ್ಕು ಇಲ್ಲದಿದ್ದರೆ ಈ ತರಹದ ಘಟನೆಗಳು ನಡೆಯುತ್ತಿರಲಿಲ್ಲ. ಸಾರಾಯಿ ಪಾಳ್ಯದಲ್ಲಿ ನಡೆದ ಘಟನೆಯನ್ನು ಖಂಡಿಸುವುದರ ಬದಲಾಗಿ ಧರ್ಮ ಮತ್ತು ಪೌರತ್ವದ ವಿಷಯವನ್ನು ಎಳೆದುತಂದರು. ಆಶಾ ಕಾರ್ಯಕರ್ತೆಯರಿಗೆ ಪೌರತ್ವದ ವಿಷಯದ ಬಗ್ಗೆ ಏನು ಗೊತ್ತು’ ಎಂದು ಪ್ರಶ್ನಿಸಿದರು.</p>.<p>ಆಶಾ ಕಾರ್ಯಕರ್ತೆಯರ ಕೆಲಸದ ಬಗ್ಗೆ ಅವರನ್ನು ಶ್ಲಾಘಿಸಬೇಕಿತ್ತು. ಅದರ ಬದಲು ಯಾರನ್ನು ಕೇಳಿ ಬಂದಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಅದೇನು ಜಮೀರ್ ಅಹ್ಮದ್ ಅವರ ಮಾವನ ಮನೆಯಾ? ಎಂದು ಪ್ರಶ್ನಿಸಿದರು.</p>.<p>ಜಮೀರ್ ಅಹ್ಮದ್ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವ ಕುರಿತ ಪ್ರಶ್ನೆಗೆ‘ ನಮ್ಮ ಸರ್ಕಾರ ಎಷ್ಟೇ ದೊಡ್ಡ ವ್ಯಕ್ತಿಯಾದರೂ ಕ್ರಮ ಜರುಗಿಸುತ್ತದೆ. ಈ ಕುರಿತು ಮುಖ್ಯಮಂತ್ರಿ ಹಾಗೂ ಗೃಹಸಚಿವರನ್ನು ಒತ್ತಾಯಿಸುತ್ತೇನೆ’ ಎಂದರು.</p>.<p>‘ಆರೋಪಿಗಳನ್ನು ರಾಮನಗರ ಜೈಲಿಗೆ ಕರೆದುಕೊಂಡು ಹೋಗಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರಾಜಕೀಯ ಮಾಡುವುದು ಬೇಡ. ಆರೋಪಿಗಳನ್ನ ಜೈಲಿಗೆ ಕಳುಹಿಸದೇ ಅವರನ್ನು ಮನೆಗೆ ಕಳುಹಿಸಬೇಕಿತ್ತಾ? ಕುಮಾರಸ್ವಾಮಿ ಅವರು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡಬಾರದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>