ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಫ್ರಿದಿ ಹೇಳಿಕೆಗೆ ಹಲವರ ತಿರುಗೇಟು

Last Updated 4 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಕಾಶ್ಮೀರದಲ್ಲಿ ಮುಗ್ಧರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗುತ್ತಿದ್ದು, ಅಲ್ಲಿನ ಸ್ಥಿತಿಯ ಬಗ್ಗೆ ಆತಂಕವಾಗುತ್ತಿದೆ ಎಂದು ಟ್ವೀಟ್‌ ಮಾಡಿದ್ದ ಪಾಕಿಸ್ತಾನ ಕ್ರಿಕೆಟ್‌ ತಂಡದ ಹಿರಿಯ ಆಟಗಾರ ಶಾಹೀದ್‌ ಆಫ್ರಿದಿ ಅವರ ಹೇಳಿಕೆಗೆ ಕ್ರಿಕೆಟಿಗ ವಿರಾಟ್‌ ಕೊಹ್ಲಿ ಮತ್ತು ಹಲವು ಗಣ್ಯರು ತಿರುಗೇಟು ನೀಡಿದ್ದಾರೆ.

‘ನನ್ನ ದೇಶದ ಹಿತಾಸಕ್ತಿ ನನಗೆ ಮುಖ್ಯ. ಅದಕ್ಕೆ ವಿರೋಧ ವ್ಯಕ್ತಪಡಿಸುವವರನ್ನು ಯಾವುದೇ ಕಾರಣಕ್ಕೂ ಬೆಂಬಲಿಸುವುದಿಲ್ಲ’ ಎಂದು ಭಾರತ ಕ್ರಿಕೆಟ್‌ ತಂಡದ ನಾಯಕ ಕೊಹ್ಲಿ ಕಟುವಾಗಿ ಪ್ರತಿಕ್ರಿಯಿಸಿದ್ದಾರೆ.

‘ಕಾಶ್ಮೀರ, ಭಾರತದ ಅವಿಭಾಜ್ಯ ಅಂಗ ಹಾಗೂ ಅದು ಹಾಗೆಯೇ ಉಳಿಯುತ್ತದೆ. ನನ್ನ ಪೂರ್ವಜರ ಪುಣ್ಯಭೂಮಿ ಕಾಶ್ಮೀರ.  ಅಲ್ಲಿ ನಡೆಸುತ್ತಿರುವ ಭಯೋತ್ಪಾದನೆಯನ್ನು ನಿಲ್ಲಿಸಲು ಆಫ್ರಿದಿ ಅವರು ತಮ್ಮ ದೇಶದ ಸೇನೆಗೆ ಹೇಳಲಿ. ನಮಗೆ ಶಾಂತಿ ಬೇಕಿದೆ. ಹಿಂಸೆಯಲ್ಲ’ ಎಂದು ಸುರೇಶ್‌ ರೈನಾ ಟ್ವಿಟರ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT