‘ಕುಂಕೋವ ಗ್ರಾಮದ ತೋಟದ ಮನೆಯಲ್ಲಿ ವಾಸವಿದ್ದ ಲಕ್ಷ್ಮಮ್ಮ ಹಾಗೂ ಪಾಂಡುರಂಗಯ್ಯ ಅವರ ಮನೆಗೆ ರಾತ್ರಿ 11.30ರ ಸಮಯಕ್ಕೆ ಬಂದ ಮೂವರು ದುಷ್ಕರ್ಮಿಗಳು ಬಾಗಿಲು ಬಡಿದು ಎಬ್ಬಿಸಿ, ‘ಬೈಕ್ನಿಂದ ಬಿದ್ದು ಗಾಯವಾಗಿದೆ ಕುಡಿಯಲು ನೀರು ಕೊಡಿ’ ಎಂದು ಕೇಳಿದ್ದಾರೆ. ದಂಪತಿ ಕೊಟ್ಟ ನೀರನ್ನು ತೆಗೆದುಕೊಂಡು ಹೋದವರು ಸ್ವಲ್ಪ ಹೊತ್ತಿನಲ್ಲಿ ಮತ್ತೆ ಬಂದು ಸ್ವಲ್ಪ ಅರಿಶಿಣ ಕೊಡಿ ಎಂದು ಕೇಳಿದ್ದಾರೆ. ನಂತರ ಸಕ್ಕರೆ ಕೊಡಿ ಎಂದು ಕೇಳಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.