<p>ದಾವಣಗೆರೆ: ಅನ್ಯ ಜಾತಿಯ ಹುಡುಗನನ್ನು ಪ್ರೀತಿಸಿದ್ದ ಮಗಳನ್ನೇ ಕೊಂದ ಆರೋಪ ಹೊತ್ತು ಎರಡು ವರ್ಷದಿಂದ ಜೈಲು ಶಿಕ್ಷೆ ಅನುಭವಿಸುತ್ತಿದ್ದ ವ್ಯಕ್ತಿಯು ಮರ್ಯಾದಾ ಹತ್ಯೆ ಪ್ರಕರಣದಲ್ಲಿ ಆರೋಪ ಮುಕ್ತರಾಗಿದ್ದಾರೆ.</p>.<p>ಜಗಳೂರು ತಾಲ್ಲೂಕಿನ ಬಿಸ್ತುವಳ್ಳಿ ಗ್ರಾಮದ ನಿವಾಸಿ ಕಲ್ಲೇಶಪ್ಪ ಆರೋಪ ಮುಕ್ತರಾದವರು. ಸಾಕ್ಷ್ಯಾಧಾರಗಳ ಕೊರತೆಯಿಂದ ಒಂದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ನೀಡಿದ ತೀರ್ಪು ಆಧರಿಸಿ ಮಂಗಳವಾರ ಸಂಜೆ ಕಲ್ಲೇಶಪ್ಪ ಇಲ್ಲಿನ ಉಪ ಕಾರಾಗೃಹದಿಂದ ಬಿಡುಗಡೆಯಾದರು.</p>.<p>ಕಲ್ಲೇಶಪ್ಪ ಪುತ್ರಿ ಅನಿತಾ, ಅನ್ಯ ಜಾತಿಯ ಹುಡುಗನನ್ನು ಪ್ರೀತಿಸುತ್ತಿದ್ದರು. ಮಗಳ ಮದುವೆಗೆ ಅಡ್ಡಿಪಡಿಸಿ ಆಕೆಯನ್ನು ತನ್ನದೇ ಅಡಿಕೆ ತೋಟದಲ್ಲಿ ಹತ್ಯೆ ಮಾಡಿದ ಆರೋಪ ಕಲ್ಲೇಶಪ್ಪನ ಮೇಲಿತ್ತು. 2019ರ ಜ. 30ರಂದು ಅನಿತಾ, ತಮ್ಮ ಅಡಿಕೆ ತೋಟದಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.</p>.<p>ಈ ನಿಗೂಢ ಸಾವಿನ ಬಗ್ಗೆ ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಜಗಳೂರು ಪೊಲೀಸರು, ಮೃತಳ ತಂದೆಯನ್ನು<br />ಬಂಧಿಸಿದ್ದರು. ತನಿಖೆಯ ನಂತರ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ನ್ಯಾಯಾಲಯದಲ್ಲಿ ಕಲ್ಲೇಶಪ್ಪ ಪರವಾಗಿ ವಕೀಲ<br />ಬಿ. ಸಿದ್ದೇಶ್ವರ ವಾದ<br />ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದಾವಣಗೆರೆ: ಅನ್ಯ ಜಾತಿಯ ಹುಡುಗನನ್ನು ಪ್ರೀತಿಸಿದ್ದ ಮಗಳನ್ನೇ ಕೊಂದ ಆರೋಪ ಹೊತ್ತು ಎರಡು ವರ್ಷದಿಂದ ಜೈಲು ಶಿಕ್ಷೆ ಅನುಭವಿಸುತ್ತಿದ್ದ ವ್ಯಕ್ತಿಯು ಮರ್ಯಾದಾ ಹತ್ಯೆ ಪ್ರಕರಣದಲ್ಲಿ ಆರೋಪ ಮುಕ್ತರಾಗಿದ್ದಾರೆ.</p>.<p>ಜಗಳೂರು ತಾಲ್ಲೂಕಿನ ಬಿಸ್ತುವಳ್ಳಿ ಗ್ರಾಮದ ನಿವಾಸಿ ಕಲ್ಲೇಶಪ್ಪ ಆರೋಪ ಮುಕ್ತರಾದವರು. ಸಾಕ್ಷ್ಯಾಧಾರಗಳ ಕೊರತೆಯಿಂದ ಒಂದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ನೀಡಿದ ತೀರ್ಪು ಆಧರಿಸಿ ಮಂಗಳವಾರ ಸಂಜೆ ಕಲ್ಲೇಶಪ್ಪ ಇಲ್ಲಿನ ಉಪ ಕಾರಾಗೃಹದಿಂದ ಬಿಡುಗಡೆಯಾದರು.</p>.<p>ಕಲ್ಲೇಶಪ್ಪ ಪುತ್ರಿ ಅನಿತಾ, ಅನ್ಯ ಜಾತಿಯ ಹುಡುಗನನ್ನು ಪ್ರೀತಿಸುತ್ತಿದ್ದರು. ಮಗಳ ಮದುವೆಗೆ ಅಡ್ಡಿಪಡಿಸಿ ಆಕೆಯನ್ನು ತನ್ನದೇ ಅಡಿಕೆ ತೋಟದಲ್ಲಿ ಹತ್ಯೆ ಮಾಡಿದ ಆರೋಪ ಕಲ್ಲೇಶಪ್ಪನ ಮೇಲಿತ್ತು. 2019ರ ಜ. 30ರಂದು ಅನಿತಾ, ತಮ್ಮ ಅಡಿಕೆ ತೋಟದಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.</p>.<p>ಈ ನಿಗೂಢ ಸಾವಿನ ಬಗ್ಗೆ ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಜಗಳೂರು ಪೊಲೀಸರು, ಮೃತಳ ತಂದೆಯನ್ನು<br />ಬಂಧಿಸಿದ್ದರು. ತನಿಖೆಯ ನಂತರ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ನ್ಯಾಯಾಲಯದಲ್ಲಿ ಕಲ್ಲೇಶಪ್ಪ ಪರವಾಗಿ ವಕೀಲ<br />ಬಿ. ಸಿದ್ದೇಶ್ವರ ವಾದ<br />ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>