<p><strong>ಜಗಳೂರು</strong>: ಪಟ್ಟಣದಲ್ಲಿ ಮಂಗಳವಾರ ರಾತ್ರಿ ಎಗ್ ರೈಸ್ ವ್ಯಾಪಾರಿಯೊಬ್ಬರನ್ನು ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಲಾಗಿದೆ.</p>.<p>ಬಸವರಾಜ್ (40) ಕೊಲೆಯಾದ ವ್ಯಕ್ತಿ. ಪಟ್ಟಣದ ಹೊರವಲಯದ ಬಿದರಕೆರೆ ರಸ್ತೆಯಲ್ಲಿ ಅಶ್ವತ್ಥ್ ರೆಡ್ಡಿ ನಗರ ಸಮೀಪಬಿದರಕೆರೆ ರಸ್ತೆಬದಿಯಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.</p>.<p>ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ವ್ಯಾಪಾರ ಮುಗಿಸಿ ಮನೆಗೆ ಹೋಗಿದ್ದ ನಂತರ ಕೊಲೆ ನಡೆದಿರಬಹುದು ಎನ್ನಲಾಗಿದ್ದು, ಘಟನಾ ಸ್ಥಳಕ್ಕೆ ಬೆರಳಚ್ಚು ತಜ್ಞರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಕೊಲೆಯಾದ ಬಸವರಾಜ್ ಸಂಬಂಧಿಅಜ್ಜಯ್ಯ ಎಂಬುವರು ವಿಷ ಸೇವನೆ ಮಾಡಿದ್ದು, ಅನುಮಾನ ಮೂಡಿಸಿದೆ.‘ಮಹಿಳೆಯ ಅನೈತಿಕ ಸಂಬಂಧ ಇರುವ ಶಂಕೆಯಿದ್ದು, ಈ ಸಂಬಂಧ ಸಿಪಿಐ ದುರ್ಗಪ್ಪ ನೇತೃತ್ವದಲ್ಲಿ ತಂಡ ರಚಿಸಲಾಗಿದ್ದು ತನಿಖೆ ನಡೆಯುತ್ತಿದೆ, ಶೀಘ್ರದಲ್ಲಿ ಆರೋಪಿಯನ್ನು ಬಂಧಿಸುತ್ತೇವೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಗಳೂರು</strong>: ಪಟ್ಟಣದಲ್ಲಿ ಮಂಗಳವಾರ ರಾತ್ರಿ ಎಗ್ ರೈಸ್ ವ್ಯಾಪಾರಿಯೊಬ್ಬರನ್ನು ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಲಾಗಿದೆ.</p>.<p>ಬಸವರಾಜ್ (40) ಕೊಲೆಯಾದ ವ್ಯಕ್ತಿ. ಪಟ್ಟಣದ ಹೊರವಲಯದ ಬಿದರಕೆರೆ ರಸ್ತೆಯಲ್ಲಿ ಅಶ್ವತ್ಥ್ ರೆಡ್ಡಿ ನಗರ ಸಮೀಪಬಿದರಕೆರೆ ರಸ್ತೆಬದಿಯಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.</p>.<p>ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ವ್ಯಾಪಾರ ಮುಗಿಸಿ ಮನೆಗೆ ಹೋಗಿದ್ದ ನಂತರ ಕೊಲೆ ನಡೆದಿರಬಹುದು ಎನ್ನಲಾಗಿದ್ದು, ಘಟನಾ ಸ್ಥಳಕ್ಕೆ ಬೆರಳಚ್ಚು ತಜ್ಞರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಕೊಲೆಯಾದ ಬಸವರಾಜ್ ಸಂಬಂಧಿಅಜ್ಜಯ್ಯ ಎಂಬುವರು ವಿಷ ಸೇವನೆ ಮಾಡಿದ್ದು, ಅನುಮಾನ ಮೂಡಿಸಿದೆ.‘ಮಹಿಳೆಯ ಅನೈತಿಕ ಸಂಬಂಧ ಇರುವ ಶಂಕೆಯಿದ್ದು, ಈ ಸಂಬಂಧ ಸಿಪಿಐ ದುರ್ಗಪ್ಪ ನೇತೃತ್ವದಲ್ಲಿ ತಂಡ ರಚಿಸಲಾಗಿದ್ದು ತನಿಖೆ ನಡೆಯುತ್ತಿದೆ, ಶೀಘ್ರದಲ್ಲಿ ಆರೋಪಿಯನ್ನು ಬಂಧಿಸುತ್ತೇವೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>