ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕತ್ತು ಕೊಯ್ದು ಎಗ್ ರೈಸ್ ವ್ಯಾಪಾರಿಯ ಕೊಲೆ

Last Updated 15 ಅಕ್ಟೋಬರ್ 2020, 5:00 IST
ಅಕ್ಷರ ಗಾತ್ರ

ಜಗಳೂರು: ಪಟ್ಟಣದಲ್ಲಿ ಮಂಗಳವಾರ ರಾತ್ರಿ ಎಗ್ ರೈಸ್ ವ್ಯಾಪಾರಿಯೊಬ್ಬರನ್ನು ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಲಾಗಿದೆ.

ಬಸವರಾಜ್ (40) ಕೊಲೆಯಾದ ವ್ಯಕ್ತಿ. ಪಟ್ಟಣದ ಹೊರವಲಯದ ಬಿದರಕೆರೆ ರಸ್ತೆಯಲ್ಲಿ ಅಶ್ವತ್ಥ್‌ ರೆಡ್ಡಿ ನಗರ ಸಮೀಪಬಿದರಕೆರೆ ರಸ್ತೆಬದಿಯಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ವ್ಯಾಪಾರ ಮುಗಿಸಿ ಮನೆಗೆ ಹೋಗಿದ್ದ ನಂತರ ಕೊಲೆ ನಡೆದಿರಬಹುದು ಎನ್ನಲಾಗಿದ್ದು, ಘಟನಾ ಸ್ಥಳಕ್ಕೆ ಬೆರಳಚ್ಚು ತಜ್ಞರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಲೆಯಾದ ಬಸವರಾಜ್ ಸಂಬಂಧಿಅಜ್ಜಯ್ಯ ಎಂಬುವರು ವಿಷ ಸೇವನೆ ಮಾಡಿದ್ದು, ಅನುಮಾನ ಮೂಡಿಸಿದೆ.‘ಮಹಿಳೆಯ ಅನೈತಿಕ ಸಂಬಂಧ ಇರುವ ಶಂಕೆಯಿದ್ದು, ಈ ಸಂಬಂಧ ಸಿಪಿಐ ದುರ್ಗಪ್ಪ ನೇತೃತ್ವದಲ್ಲಿ ತಂಡ ರಚಿಸಲಾಗಿದ್ದು ತನಿಖೆ ನಡೆಯುತ್ತಿದೆ, ಶೀಘ್ರದಲ್ಲಿ ಆರೋಪಿಯನ್ನು ಬಂಧಿಸುತ್ತೇವೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT