<p><strong>ದಾವಣಗೆರೆ:</strong> ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಎನ್ನುವ ಕಾರಣಕ್ಕೆ ಪತಿಯನ್ನು ಕೊಲೆ ಮಾಡಿದ ಆರೋಪದ ಮೇರೆಗೆ ಪತ್ನಿ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಹರಿಹರ ತಾಲ್ಲೂಕು ನಿಟ್ಟೂರು ಗರಾಮದ ಬಸಪ್ಪ ಅಲಿಯಾಸ್ ಬಸವರಾಜಪ್ಪ (38) ಕೊಲೆಯಾದವರು.</p>.<p>ಪತ್ನಿ ರೂಪಾ, ಅರುಣಕುಮಾರ, ಕಿರಣ್ ಹಾಗೂ ಕೋಟೆಮಲ್ಲೂರು ಗ್ರಾಮದ ಸಂತೋಷ್ ಎಂಬುವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.</p>.<p>ಬಸಪ್ಪ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ‘ನನ್ನ ಪತಿಯ ಸಾವಿನ ಬಗ್ಗೆ ಅನುಮಾನವಿದೆ ತನಿಖೆ ಮಾಡಬೇಕು’ ಎಂದು ಪತ್ನಿ ರೂಪಾ ಜುಲೈ 14ರಂದು ಮಲೇಬೆನ್ನೂರು ಠಾಣೆಯಲ್ಲಿ ದೂರು ನೀಡಿದ್ದರು.</p>.<p>ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ ‘ಬಸಪ್ಪ ಪ್ರತಿನಿತ್ಯ ಕುಡಿದು ಬಂದು ಗಲಾಟೆ ಮಾಡುತ್ತಿದ್ದು, ಬಾಯಿಗೆ ಬಂದಂತೆ ಬೈಯುತ್ತಿದ್ದ ಎನ್ನುವ ವಿಚಾರಕ್ಕೆ ಕೊಲೆ ಮಾಡಿ ನೇಣು ಹಾಕಿದೆವು’ ಎಂದು ಆರೋಪಿಗಳು ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾರೆ.</p>.<p>ದಾವಣಗೆರೆ ಗ್ರಾಮಾಂತರ ಉಪವಿಭಾಗದ ಡಿವೈಎಸ್ಪಿ ನರಸಿಂಹ ತಾಮ್ರದ್ವಜ, ಹರಿಹರ ಸಿಪಿಐ ಶಿವಪ್ರಸಾದ್, ಮಲೇಬೆನ್ನೂರು ಠಾಣೆ ಪಿಎಸ್ಐ ವೀರಬಸಪ್ಪ ಕುಸಲಾಪುರ, ಸಿಬ್ಬಂದಿ ಕೆ.ಶಿವಕುಮಾರ್, ರಾಜಶೇಖರ್, ಟಿ.ಬಸವರಾಜ್, ಕಡೆಮನಿ ನಾಗಪ್ಪ ಅವರ ತಂಡ ಆರೋಪಿಗಳನ್ನು ಬಂಧಿಸಿದೆ.</p>.<p>ಎಸ್ಪಿ ಹನುಮಂತರಾಯ, ಎಎಸ್ಪಿ ಎಂ.ರಾಜೀವ್ ತಂಡವನ್ನು ಶ್ಲಾಘಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಎನ್ನುವ ಕಾರಣಕ್ಕೆ ಪತಿಯನ್ನು ಕೊಲೆ ಮಾಡಿದ ಆರೋಪದ ಮೇರೆಗೆ ಪತ್ನಿ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಹರಿಹರ ತಾಲ್ಲೂಕು ನಿಟ್ಟೂರು ಗರಾಮದ ಬಸಪ್ಪ ಅಲಿಯಾಸ್ ಬಸವರಾಜಪ್ಪ (38) ಕೊಲೆಯಾದವರು.</p>.<p>ಪತ್ನಿ ರೂಪಾ, ಅರುಣಕುಮಾರ, ಕಿರಣ್ ಹಾಗೂ ಕೋಟೆಮಲ್ಲೂರು ಗ್ರಾಮದ ಸಂತೋಷ್ ಎಂಬುವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.</p>.<p>ಬಸಪ್ಪ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ‘ನನ್ನ ಪತಿಯ ಸಾವಿನ ಬಗ್ಗೆ ಅನುಮಾನವಿದೆ ತನಿಖೆ ಮಾಡಬೇಕು’ ಎಂದು ಪತ್ನಿ ರೂಪಾ ಜುಲೈ 14ರಂದು ಮಲೇಬೆನ್ನೂರು ಠಾಣೆಯಲ್ಲಿ ದೂರು ನೀಡಿದ್ದರು.</p>.<p>ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ ‘ಬಸಪ್ಪ ಪ್ರತಿನಿತ್ಯ ಕುಡಿದು ಬಂದು ಗಲಾಟೆ ಮಾಡುತ್ತಿದ್ದು, ಬಾಯಿಗೆ ಬಂದಂತೆ ಬೈಯುತ್ತಿದ್ದ ಎನ್ನುವ ವಿಚಾರಕ್ಕೆ ಕೊಲೆ ಮಾಡಿ ನೇಣು ಹಾಕಿದೆವು’ ಎಂದು ಆರೋಪಿಗಳು ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾರೆ.</p>.<p>ದಾವಣಗೆರೆ ಗ್ರಾಮಾಂತರ ಉಪವಿಭಾಗದ ಡಿವೈಎಸ್ಪಿ ನರಸಿಂಹ ತಾಮ್ರದ್ವಜ, ಹರಿಹರ ಸಿಪಿಐ ಶಿವಪ್ರಸಾದ್, ಮಲೇಬೆನ್ನೂರು ಠಾಣೆ ಪಿಎಸ್ಐ ವೀರಬಸಪ್ಪ ಕುಸಲಾಪುರ, ಸಿಬ್ಬಂದಿ ಕೆ.ಶಿವಕುಮಾರ್, ರಾಜಶೇಖರ್, ಟಿ.ಬಸವರಾಜ್, ಕಡೆಮನಿ ನಾಗಪ್ಪ ಅವರ ತಂಡ ಆರೋಪಿಗಳನ್ನು ಬಂಧಿಸಿದೆ.</p>.<p>ಎಸ್ಪಿ ಹನುಮಂತರಾಯ, ಎಎಸ್ಪಿ ಎಂ.ರಾಜೀವ್ ತಂಡವನ್ನು ಶ್ಲಾಘಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>