ಹರಿಹರ ತಾಲ್ಲೂಕು ಭಾನುವಳ್ಳಿಯ ಹಾಲೇಶ್ (30) ಶಿಕ್ಷೆಗೊಳಗಾದ ಅಪರಾಧಿ. 2015ರ ಜುಲೈ 7ರಂದು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಮುದ್ದೆಹಳ್ಳಿ ಗ್ರಾಮದ ಮುದ್ದಣ್ಣ ಎಂಬ ಕುರಿಗಾಹಿ ತನ್ನ ಸಂಗಡಿಗರ ಜತೆಗೆ ಹರಿಹರ ತಾಲ್ಲೂಕಿನ ಲಕ್ಕಶೆಟ್ಟಿಹಳ್ಳಿಯ ಮಲ್ಲಿಕಾರ್ಜುನ ಅವರ ಜಮೀನಿನಲ್ಲಿ ಕುರಿ ಮಂದೆಯನ್ನು ಬಿಟ್ಟಿದ್ದರು. ಮುದ್ದಣ್ಣ ಒಬ್ಬರೇ ಬಿಡಾರದ ಬಳಿ ಇದ್ದಾಗ ಅವರನ್ನು ಹಾಲೇಶ್ ಎಂಬಾತ ಮಾರಕಾಸ್ತ್ರದಿಂದ ಹೊಡೆದು ಕೊಲೆ ಮಾಡಿ ಉಂಗುರ, ಕೈಚೈನು, ಹಣವನ್ನು ಎತ್ತಿಕೊಂಡು ಹೋಗಿದ್ದ.