<p><strong>ದಾವಣಗೆರೆ:</strong> ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಡಿ. ಬಸವರಾಜ್ ಅವರಿಗೆ ವೀರ ಸಾವರಕರ್ ಕುರಿತ ಪುಸ್ತಕವನ್ನು ಅಂಚೆ ಮೂಲಕ ಕಳುಹಿಸಿರುವ ಅನಾಮಧೇಯ ವ್ಯಕ್ತಿಯೊಬ್ಬ ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾನೆ.</p>.<p>‘ಸಾವರಕರ್ಗೆ ಭಾರತರತ್ನ ನೀಡಬಾರದು ಎಂಬ ಹೇಳಿಕೆ ಹಿಂಪಡೆಯಬೇಕು. ಇದು ಕೊನೆಯ ಪತ್ರ. ಸಾವರ್ಕರ್ ಜನ್ಮದಿನವಾದ ಮೇ 28ರೊಳಗೆ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಜೀವ ತೆಗೆಯುತ್ತೇನೆ’ ಎಂದು ಎಚ್ಚರಿಸಲಾಗಿದೆ. ಈ ಕುರಿತು ಬಸವರಾಜ್ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ.</p>.<p>‘ಪಕ್ಷಕ್ಕಾಗಿ ಪ್ರಾಣತ್ಯಾಗಕ್ಕೆ ಸಿದ್ಧ. ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಪಕ್ಷದ ಮುಖಂಡರಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರ ಗಮನಕ್ಕೂ ಈ ಬಗ್ಗೆ ತಂದಿದ್ದೇನೆ’ ಎಂದು ಬಸವರಾಜ್ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಒಬ್ಬನೇ ಎರಡು ಬಾರಿ ದೂರವಾಣಿ ಮೂಲಕ ಹಾಗೂ ನಾಲ್ಕು ಬಾರಿ ಪತ್ರದ ಮೂಲಕ ಬೆದರಿಕೆ ಒಡ್ಡಿದ್ದಾನೆ’ ಎಂದು ಅವರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಡಿ. ಬಸವರಾಜ್ ಅವರಿಗೆ ವೀರ ಸಾವರಕರ್ ಕುರಿತ ಪುಸ್ತಕವನ್ನು ಅಂಚೆ ಮೂಲಕ ಕಳುಹಿಸಿರುವ ಅನಾಮಧೇಯ ವ್ಯಕ್ತಿಯೊಬ್ಬ ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾನೆ.</p>.<p>‘ಸಾವರಕರ್ಗೆ ಭಾರತರತ್ನ ನೀಡಬಾರದು ಎಂಬ ಹೇಳಿಕೆ ಹಿಂಪಡೆಯಬೇಕು. ಇದು ಕೊನೆಯ ಪತ್ರ. ಸಾವರ್ಕರ್ ಜನ್ಮದಿನವಾದ ಮೇ 28ರೊಳಗೆ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಜೀವ ತೆಗೆಯುತ್ತೇನೆ’ ಎಂದು ಎಚ್ಚರಿಸಲಾಗಿದೆ. ಈ ಕುರಿತು ಬಸವರಾಜ್ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ.</p>.<p>‘ಪಕ್ಷಕ್ಕಾಗಿ ಪ್ರಾಣತ್ಯಾಗಕ್ಕೆ ಸಿದ್ಧ. ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಪಕ್ಷದ ಮುಖಂಡರಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರ ಗಮನಕ್ಕೂ ಈ ಬಗ್ಗೆ ತಂದಿದ್ದೇನೆ’ ಎಂದು ಬಸವರಾಜ್ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಒಬ್ಬನೇ ಎರಡು ಬಾರಿ ದೂರವಾಣಿ ಮೂಲಕ ಹಾಗೂ ನಾಲ್ಕು ಬಾರಿ ಪತ್ರದ ಮೂಲಕ ಬೆದರಿಕೆ ಒಡ್ಡಿದ್ದಾನೆ’ ಎಂದು ಅವರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>