<p><strong>ಮಲೇಬೆನ್ನೂರು:</strong> ಸಮೀಪದ ದೇವರಬೆಳಕೆರೆ ಮೈಲಾರಲಿಂಗೇಶ್ವರ ರಥೋತ್ಸವದ ಪ್ರಯುಕ್ತ ಶುಕ್ರವಾರ ಪವಾಡದ ಕಟ್ಟೆಯಲ್ಲಿ ನಡೆದ ‘ಕಾಲಶಸ್ತ್ರ ಪವಾಡ’ ಜನಮನಸೂರೆಗೊಂಡವು.</p>.<p>‘ಏಳು ಕೋಟಿ, ಏಳು ಕೋಟಿ ... ಏಳು ಕೋಟಿಗೋ . . . ಚಾಂಗಮಲೋ’ ಎನ್ನುವ ಉದ್ಘೋಷದ ನಡುವೆ ಗೊರವಪ್ಪ ಕಂಬಕ್ಕೆ ಭದ್ರವಾಗಿ ಬಿಗಿಯಲಾಗಿದ್ದ ಕಬ್ಬಿಣದ ಸರಪಳಿಯನ್ನು ಬರಿಗೈಲಿ ಎಳೆದು ತುಂಡು ಮಾಡಿದರು.</p>.<p>ಸುತ್ತ ಜಮಾಯಿಸಿದ್ದ ಭಕ್ತರು ಡಮರುಗ ಬಾರಿಸಿ ಭಕ್ತಿ ಪ್ರದರ್ಶಿಸಿದರು. ಪವಾಡ ಮಾಡಿದ್ದ ವ್ಯಕ್ತಿ ಯಾವುದೇ ನೋವು ಆಗದ ರೀತಿ ಸಾಮಾನ್ಯನಂತೆ ನಡೆದು ಹೋಗಿದ್ದು ವಿಶೇಷ.</p>.<p>ದೀವಟಿಗೆ, ಚಾಮರ, ಚಾವಟಿ ಸೇವೆ, ಬಾಯಿಗೆ ಬೀಗ ಬೀಗಹಾಕಿಕೊಂಡವರು ಹರಕೆ ಸಮರ್ಪಣೆ ಮಾಡಿದರು. ಕಡ್ಲೆಗೊಂದಿ, ಗುಳದಹಳ್ಳಿ ಹಾಗೂ ಹಳೆ ಊರಿನ ದುರ್ಗಾದೇವಿ ಹಾಗೂ ಬಸವೇಶ್ವರ ದೇವರ ಉತ್ಸವಮೂರ್ತಿ ಪಲ್ಲಕ್ಕಿಗಳು ಪಾಲ್ಗೊಂಡಿದ್ದವು.</p>.<p>ಓಕುಳಿ ಆಟದೊಂದಿಗೆ ಪ್ರಸಕ್ತ ಸಾಲಿನ ದೇವತಾ ಉತ್ಸವಕ್ಕೆ ತೆರೆ ಬಿದ್ದಿತು. ಮೈಲಾರ ಜಾತ್ರೆ ಮುಕ್ತಾಯವಾದ 3 ದಿನಗಳ ನಂತರ ಇಲ್ಲಿ ಜಾತ್ರೆ ನಡೆಯುವುದು ಪುರಾತನ ಕಾಲದಿಂದ ನಡೆದು ಬಂದಿದೆ ಎಂದು ಗ್ರಾಮಸ್ಥರು ತಿಳಿಸಿದರು.</p>.<p>ಸುತ್ತಮುತ್ತಲ ಪ್ರದೇಶಗಳಿಂದ ಸಾವಿರಾರು ಜನರು ಪವಾಡ ವೀಕ್ಷಣೆಗೆ ಆಗಮಿಸಿದ್ದರು. ವಾಹನಗಳ ಭರಾಟೆ ಹೆಚ್ಚಾಗಿತ್ತು. ಪೊಲೀಸರು ಭದ್ರತೆ ಒದಗಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಲೇಬೆನ್ನೂರು:</strong> ಸಮೀಪದ ದೇವರಬೆಳಕೆರೆ ಮೈಲಾರಲಿಂಗೇಶ್ವರ ರಥೋತ್ಸವದ ಪ್ರಯುಕ್ತ ಶುಕ್ರವಾರ ಪವಾಡದ ಕಟ್ಟೆಯಲ್ಲಿ ನಡೆದ ‘ಕಾಲಶಸ್ತ್ರ ಪವಾಡ’ ಜನಮನಸೂರೆಗೊಂಡವು.</p>.<p>‘ಏಳು ಕೋಟಿ, ಏಳು ಕೋಟಿ ... ಏಳು ಕೋಟಿಗೋ . . . ಚಾಂಗಮಲೋ’ ಎನ್ನುವ ಉದ್ಘೋಷದ ನಡುವೆ ಗೊರವಪ್ಪ ಕಂಬಕ್ಕೆ ಭದ್ರವಾಗಿ ಬಿಗಿಯಲಾಗಿದ್ದ ಕಬ್ಬಿಣದ ಸರಪಳಿಯನ್ನು ಬರಿಗೈಲಿ ಎಳೆದು ತುಂಡು ಮಾಡಿದರು.</p>.<p>ಸುತ್ತ ಜಮಾಯಿಸಿದ್ದ ಭಕ್ತರು ಡಮರುಗ ಬಾರಿಸಿ ಭಕ್ತಿ ಪ್ರದರ್ಶಿಸಿದರು. ಪವಾಡ ಮಾಡಿದ್ದ ವ್ಯಕ್ತಿ ಯಾವುದೇ ನೋವು ಆಗದ ರೀತಿ ಸಾಮಾನ್ಯನಂತೆ ನಡೆದು ಹೋಗಿದ್ದು ವಿಶೇಷ.</p>.<p>ದೀವಟಿಗೆ, ಚಾಮರ, ಚಾವಟಿ ಸೇವೆ, ಬಾಯಿಗೆ ಬೀಗ ಬೀಗಹಾಕಿಕೊಂಡವರು ಹರಕೆ ಸಮರ್ಪಣೆ ಮಾಡಿದರು. ಕಡ್ಲೆಗೊಂದಿ, ಗುಳದಹಳ್ಳಿ ಹಾಗೂ ಹಳೆ ಊರಿನ ದುರ್ಗಾದೇವಿ ಹಾಗೂ ಬಸವೇಶ್ವರ ದೇವರ ಉತ್ಸವಮೂರ್ತಿ ಪಲ್ಲಕ್ಕಿಗಳು ಪಾಲ್ಗೊಂಡಿದ್ದವು.</p>.<p>ಓಕುಳಿ ಆಟದೊಂದಿಗೆ ಪ್ರಸಕ್ತ ಸಾಲಿನ ದೇವತಾ ಉತ್ಸವಕ್ಕೆ ತೆರೆ ಬಿದ್ದಿತು. ಮೈಲಾರ ಜಾತ್ರೆ ಮುಕ್ತಾಯವಾದ 3 ದಿನಗಳ ನಂತರ ಇಲ್ಲಿ ಜಾತ್ರೆ ನಡೆಯುವುದು ಪುರಾತನ ಕಾಲದಿಂದ ನಡೆದು ಬಂದಿದೆ ಎಂದು ಗ್ರಾಮಸ್ಥರು ತಿಳಿಸಿದರು.</p>.<p>ಸುತ್ತಮುತ್ತಲ ಪ್ರದೇಶಗಳಿಂದ ಸಾವಿರಾರು ಜನರು ಪವಾಡ ವೀಕ್ಷಣೆಗೆ ಆಗಮಿಸಿದ್ದರು. ವಾಹನಗಳ ಭರಾಟೆ ಹೆಚ್ಚಾಗಿತ್ತು. ಪೊಲೀಸರು ಭದ್ರತೆ ಒದಗಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>