<p><strong>ಹರಿಹರ</strong>: ರಾಜ್ಯ ಸರ್ಕಾರದ ಮಹತ್ವದ ಪಂಚ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಆದ್ಯತೆ ನೀಡಬೇಕು ಎಂದು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ತಾಲ್ಲೂಕು ಘಟಕದ ಅಧ್ಯಕ್ಷ ನಂದಿಗಾವಿ ಶ್ರೀನಿವಾಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರೀಶಿಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಯೋಜನೆಗಳ ಲಾಭ ದೊರಕಿಸುವಲ್ಲಿ ಅಧಿಕಾರಿಗಳ ಪಾತ್ರ ಮಹತ್ವದ್ದು ಎಂದರು.</p>.<p>ತಾಲ್ಲೂಕಿನಲ್ಲಿ 124 ನ್ಯಾಯಬೆಲೆ ಅಂಗಡಿಗಳಿದ್ದು, ಎಪಿಎಲ್, ಬಿಪಿಎಲ್ ಮತ್ತು ಅಂತ್ಯೋದಯ ಸೇರಿ ಒಟ್ಟು 58,622 ಪಡಿತರ ಚೀಟಿಗಳಿವೆ ಎಂದು ಆಹಾರ ಇಲಾಖೆಯ ಶಿರಸ್ತೇದಾರ್ ಮಂಜುನಾಥ್ ಮಾಹಿತಿ ನೀಡಿದರು.</p>.<p>ಅಕ್ರಮ ಅಕ್ಕಿ ಹಾಗೂ ರಾಗಿ ಮಾರಾಟ ಕುರಿತಂತೆ 9 ದೂರು ದಾಖಲಾಗಿದ್ದು 178 ಚೀಲಗಳನ್ನು ವಶಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ ಅವರು 2023-24ರ ಸಾಲಿನಲ್ಲಿ ಹೊಸ ಪಡಿತರ ಚೀಟಿಗಾಗಿ ಬಂದ 280 ಆರ್ಜಿಗಳ ಪೈಕಿ 21 ಅರ್ಜಿ ವಿಲೇವಾರಿಗೆ ಬಾಕಿಯಿವೆ ಎಂದರು.</p>.<p>ಎಪಿಎಂಸಿಯಲ್ಲಿರುವ ಆಹಾರ ಇಲಾಖೆಯ ಉಗ್ರಾಣದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವಂತೆ ಸದಸ್ಯರು ಒತ್ತಾಯಿಸಿದರು.</p>.<p>ಗೃಹಲಕ್ಷ್ಮಿ ಯೋಜನೆಯಡಿ ತಾಲ್ಲೂಕಿನಲ್ಲಿ ಈವೆರೆಗೆ 27 ಕಂತುಗಳಲ್ಲಿ 56,136 ಮಹಿಳೆಯರಿಗೆ ₹286.63 ಕೋಟಿ ನೀಡಲಾಗಿದೆ ಎಂದು ಸಿಡಿಪಿಒ ಪ್ರಿಯದರ್ಶಿನಿ ಮಾಹಿತಿ ನೀಡಿದರು.</p>.<p>ನಗರದ ದೂರವಾಣಿ ಸಂಪರ್ಕ ಕೇಂದ್ರದ ಬಳಿ ಕೆಎಸ್ಅರ್ಟಿಸಿ ಬಸ್ ನಿಲುಗಡೆ ಮಾಡುವಂತೆ ಸದಸ್ಯರಾದ ಸಂತೋಷ್ ನೋಟದವರ್ ಹಾಗೂ ಸಚಿನ್ ಕೊಂಡಜ್ಜಿ ಸಭೆಯಲ್ಲಿ ಆಗ್ರಹಿಸಿದರು.</p>.<p>ಸಾರ್ವಜನಿಕರೂ ಈ ಬಗ್ಗೆ ದೂರು ನೀಡಿದ್ದು, ಕೂಡಲೇ ಈ ಬಗ್ಗೆ ಕ್ರಮ ಜರುಗಿಸುವಂತೆ ಡಿಪೊ ಮ್ಯಾನೇಜರ್ ಮಹೇಶ್ವರಪ್ಪ ಅವರಿಗೆ ನಂದಿಗಾವಿ ಶ್ರೀನಿವಾಸ್ ಸೂಚಿಸಿದರು.</p>.<p>ಬೆಸ್ಕಾಂ ಎಇಇ ಲಕ್ಷಣ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಅಧಿಕಾರಿಗಳು ಮಾಹಿತಿ ನೀಡಿದರು. ಸಮಿತಿಯ ಸದಸ್ಯರಾದ ಪಕ್ಕೀರೇಶ್, ಸವಿತಾ ನಾಯ್ಕ್, ವಿಶ್ವನಾಥ್, ಚಂದ್ರಪ್ಪ, ಗಿರೀಶ್, ಹಬೀಬ್ ಉಲ್ಲಾ, ಬ್ರೂಹಾನ್, ಜಿ.ಎನ್.ಕೃಷ್ಣಪ್ಪ ಹಾಗೂ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಿಹರ</strong>: ರಾಜ್ಯ ಸರ್ಕಾರದ ಮಹತ್ವದ ಪಂಚ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಆದ್ಯತೆ ನೀಡಬೇಕು ಎಂದು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ತಾಲ್ಲೂಕು ಘಟಕದ ಅಧ್ಯಕ್ಷ ನಂದಿಗಾವಿ ಶ್ರೀನಿವಾಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರೀಶಿಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಯೋಜನೆಗಳ ಲಾಭ ದೊರಕಿಸುವಲ್ಲಿ ಅಧಿಕಾರಿಗಳ ಪಾತ್ರ ಮಹತ್ವದ್ದು ಎಂದರು.</p>.<p>ತಾಲ್ಲೂಕಿನಲ್ಲಿ 124 ನ್ಯಾಯಬೆಲೆ ಅಂಗಡಿಗಳಿದ್ದು, ಎಪಿಎಲ್, ಬಿಪಿಎಲ್ ಮತ್ತು ಅಂತ್ಯೋದಯ ಸೇರಿ ಒಟ್ಟು 58,622 ಪಡಿತರ ಚೀಟಿಗಳಿವೆ ಎಂದು ಆಹಾರ ಇಲಾಖೆಯ ಶಿರಸ್ತೇದಾರ್ ಮಂಜುನಾಥ್ ಮಾಹಿತಿ ನೀಡಿದರು.</p>.<p>ಅಕ್ರಮ ಅಕ್ಕಿ ಹಾಗೂ ರಾಗಿ ಮಾರಾಟ ಕುರಿತಂತೆ 9 ದೂರು ದಾಖಲಾಗಿದ್ದು 178 ಚೀಲಗಳನ್ನು ವಶಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ ಅವರು 2023-24ರ ಸಾಲಿನಲ್ಲಿ ಹೊಸ ಪಡಿತರ ಚೀಟಿಗಾಗಿ ಬಂದ 280 ಆರ್ಜಿಗಳ ಪೈಕಿ 21 ಅರ್ಜಿ ವಿಲೇವಾರಿಗೆ ಬಾಕಿಯಿವೆ ಎಂದರು.</p>.<p>ಎಪಿಎಂಸಿಯಲ್ಲಿರುವ ಆಹಾರ ಇಲಾಖೆಯ ಉಗ್ರಾಣದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವಂತೆ ಸದಸ್ಯರು ಒತ್ತಾಯಿಸಿದರು.</p>.<p>ಗೃಹಲಕ್ಷ್ಮಿ ಯೋಜನೆಯಡಿ ತಾಲ್ಲೂಕಿನಲ್ಲಿ ಈವೆರೆಗೆ 27 ಕಂತುಗಳಲ್ಲಿ 56,136 ಮಹಿಳೆಯರಿಗೆ ₹286.63 ಕೋಟಿ ನೀಡಲಾಗಿದೆ ಎಂದು ಸಿಡಿಪಿಒ ಪ್ರಿಯದರ್ಶಿನಿ ಮಾಹಿತಿ ನೀಡಿದರು.</p>.<p>ನಗರದ ದೂರವಾಣಿ ಸಂಪರ್ಕ ಕೇಂದ್ರದ ಬಳಿ ಕೆಎಸ್ಅರ್ಟಿಸಿ ಬಸ್ ನಿಲುಗಡೆ ಮಾಡುವಂತೆ ಸದಸ್ಯರಾದ ಸಂತೋಷ್ ನೋಟದವರ್ ಹಾಗೂ ಸಚಿನ್ ಕೊಂಡಜ್ಜಿ ಸಭೆಯಲ್ಲಿ ಆಗ್ರಹಿಸಿದರು.</p>.<p>ಸಾರ್ವಜನಿಕರೂ ಈ ಬಗ್ಗೆ ದೂರು ನೀಡಿದ್ದು, ಕೂಡಲೇ ಈ ಬಗ್ಗೆ ಕ್ರಮ ಜರುಗಿಸುವಂತೆ ಡಿಪೊ ಮ್ಯಾನೇಜರ್ ಮಹೇಶ್ವರಪ್ಪ ಅವರಿಗೆ ನಂದಿಗಾವಿ ಶ್ರೀನಿವಾಸ್ ಸೂಚಿಸಿದರು.</p>.<p>ಬೆಸ್ಕಾಂ ಎಇಇ ಲಕ್ಷಣ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಅಧಿಕಾರಿಗಳು ಮಾಹಿತಿ ನೀಡಿದರು. ಸಮಿತಿಯ ಸದಸ್ಯರಾದ ಪಕ್ಕೀರೇಶ್, ಸವಿತಾ ನಾಯ್ಕ್, ವಿಶ್ವನಾಥ್, ಚಂದ್ರಪ್ಪ, ಗಿರೀಶ್, ಹಬೀಬ್ ಉಲ್ಲಾ, ಬ್ರೂಹಾನ್, ಜಿ.ಎನ್.ಕೃಷ್ಣಪ್ಪ ಹಾಗೂ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>