<p><strong>ಚನ್ನಗಿರಿ</strong>: ‘ಒಂದೇ ದೇವರು, ಒಂದು ಧರ್ಮ, ಎಲ್ಲ ಮಾನವರಿಗೆ ಒಂದೇ ದೇವರು ಎಂಬ ಧ್ಯೇಯವನ್ನು ಹೊಂದಿದ ಮಹರ್ಷಿ ನಾರಾಯಣ ಗುರು ತತ್ವಜ್ಞಾನಿ, ಆಧ್ಯಾತ್ಮಿಕ ಚಿಂತಕ, ಸಮಾಜ ಸುಧಾರಕ ಹಾಗೂ ಶಿಕ್ಷಣ ಪ್ರೇಮಿಯಾಗಿದ್ದರು’ ಎಂದು ತಹಶೀಲ್ದಾರ್ ಎನ್.ಜೆ. ನಾಗರಾಜ್ ತಿಳಿಸಿದರು.</p>.<p>ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ ಹಾಗೂ ಈಡಿಗ ಸಮಾಜದಿಂದ ಭಾನುವಾರ ಹಮ್ಮಿಕೊಂಡಿದ್ದ ಮಹರ್ಷಿ ನಾರಾಯಣ ಗುರುಗಳ ಜಯಂತ್ಯುತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.</p>.<p>ಗುರುಗಳು ಮನುಕುಲದ ಏಕತೆಯ ಆದರ್ಶವನ್ನು ಬೋಧಿಸಿದರು. ಜಾತಿ ವ್ಯವಸ್ಥೆಯ ವಿರುದ್ಧ ಹೋರಾಡಿ, ಸಾಮಾಜಿಕ ಸಮಾನತೆಯನ್ನು ಉತ್ತೇಜಿಸಿದರು. ದೀನ ದಲಿತರ ಉನ್ನತಿಗಾಗಿ ಶಿಕ್ಷಣ ಮತ್ತು ಆಧ್ಯಾತ್ಮಿಕ ಬೆಳವಣಿಗೆಯ ಅಗತ್ಯವನ್ನು ಒತ್ತಿ ಹೇಳಿದರು. ವಿದ್ಯೆಯಿಂದ ಪ್ರಬುದ್ಧರಾಗಿ, ಸಂಘಟನೆಯಿಂದ ಬಲಿಷ್ಠರಾಗಿ ಎಂದು ಪ್ರತಿಪಾದಿಸಿದರು ಎಂದರು.</p>.<p>ತನ್ನ ಸಂತೋಷದ ದಾರಿಯು ಇತರರಿಗೂ ಸಂತಸ ತರುವಂತಿರಬೇಕು ಎಂದು ಪ್ರತಿಪಾದಿಸಿದ ನಾರಾಯಣ ಗುರುಗಳು, ಶೋಷಿತರನ್ನು ಒಗ್ಗೂಡಿಸಿ ಅವರಲ್ಲಿ ವಿದ್ಯಾಭ್ಯಾಸ, ಸ್ವಚ್ಛತೆ, ನೈರ್ಮಲ್ಯ ಹಾಗೂ ದೈವ ಶ್ರದ್ಧೆ ಬೆಳೆಸಿದರು. ಅವರ ಆದರ್ಶಗಳು ಇಂದಿಗೂ ಜಗತ್ತಿಗೆ ಸ್ಫೂರ್ತಿಯಾಗಿವೆ ಎಂದು ಹೇಳಿದರು.</p>.<p>ಈಡಿಗ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ವೈ. ಗಂಗಾಧರ್, ಗೌರವಾಧ್ಯಕ್ಷ ತಿಪ್ಪೇಸ್ವಾಮಿ, ಎಸ್. ರಂಗಸ್ವಾಮಿ, ದಯಾನಂದ್, ಆಂಜನೇಯ, ಬಾಲರಾಜ್, ಸುರೇಶ್, ರಮೇಶ್, ಶಿರಸ್ತೇದಾರ್ ಎಂ.ಎಲ್. ಮೋಹನ್. ರುದ್ರಸ್ವಾಮಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಗಿರಿ</strong>: ‘ಒಂದೇ ದೇವರು, ಒಂದು ಧರ್ಮ, ಎಲ್ಲ ಮಾನವರಿಗೆ ಒಂದೇ ದೇವರು ಎಂಬ ಧ್ಯೇಯವನ್ನು ಹೊಂದಿದ ಮಹರ್ಷಿ ನಾರಾಯಣ ಗುರು ತತ್ವಜ್ಞಾನಿ, ಆಧ್ಯಾತ್ಮಿಕ ಚಿಂತಕ, ಸಮಾಜ ಸುಧಾರಕ ಹಾಗೂ ಶಿಕ್ಷಣ ಪ್ರೇಮಿಯಾಗಿದ್ದರು’ ಎಂದು ತಹಶೀಲ್ದಾರ್ ಎನ್.ಜೆ. ನಾಗರಾಜ್ ತಿಳಿಸಿದರು.</p>.<p>ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ ಹಾಗೂ ಈಡಿಗ ಸಮಾಜದಿಂದ ಭಾನುವಾರ ಹಮ್ಮಿಕೊಂಡಿದ್ದ ಮಹರ್ಷಿ ನಾರಾಯಣ ಗುರುಗಳ ಜಯಂತ್ಯುತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.</p>.<p>ಗುರುಗಳು ಮನುಕುಲದ ಏಕತೆಯ ಆದರ್ಶವನ್ನು ಬೋಧಿಸಿದರು. ಜಾತಿ ವ್ಯವಸ್ಥೆಯ ವಿರುದ್ಧ ಹೋರಾಡಿ, ಸಾಮಾಜಿಕ ಸಮಾನತೆಯನ್ನು ಉತ್ತೇಜಿಸಿದರು. ದೀನ ದಲಿತರ ಉನ್ನತಿಗಾಗಿ ಶಿಕ್ಷಣ ಮತ್ತು ಆಧ್ಯಾತ್ಮಿಕ ಬೆಳವಣಿಗೆಯ ಅಗತ್ಯವನ್ನು ಒತ್ತಿ ಹೇಳಿದರು. ವಿದ್ಯೆಯಿಂದ ಪ್ರಬುದ್ಧರಾಗಿ, ಸಂಘಟನೆಯಿಂದ ಬಲಿಷ್ಠರಾಗಿ ಎಂದು ಪ್ರತಿಪಾದಿಸಿದರು ಎಂದರು.</p>.<p>ತನ್ನ ಸಂತೋಷದ ದಾರಿಯು ಇತರರಿಗೂ ಸಂತಸ ತರುವಂತಿರಬೇಕು ಎಂದು ಪ್ರತಿಪಾದಿಸಿದ ನಾರಾಯಣ ಗುರುಗಳು, ಶೋಷಿತರನ್ನು ಒಗ್ಗೂಡಿಸಿ ಅವರಲ್ಲಿ ವಿದ್ಯಾಭ್ಯಾಸ, ಸ್ವಚ್ಛತೆ, ನೈರ್ಮಲ್ಯ ಹಾಗೂ ದೈವ ಶ್ರದ್ಧೆ ಬೆಳೆಸಿದರು. ಅವರ ಆದರ್ಶಗಳು ಇಂದಿಗೂ ಜಗತ್ತಿಗೆ ಸ್ಫೂರ್ತಿಯಾಗಿವೆ ಎಂದು ಹೇಳಿದರು.</p>.<p>ಈಡಿಗ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ವೈ. ಗಂಗಾಧರ್, ಗೌರವಾಧ್ಯಕ್ಷ ತಿಪ್ಪೇಸ್ವಾಮಿ, ಎಸ್. ರಂಗಸ್ವಾಮಿ, ದಯಾನಂದ್, ಆಂಜನೇಯ, ಬಾಲರಾಜ್, ಸುರೇಶ್, ರಮೇಶ್, ಶಿರಸ್ತೇದಾರ್ ಎಂ.ಎಲ್. ಮೋಹನ್. ರುದ್ರಸ್ವಾಮಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>