‘2005ರಲ್ಲಿ ಕಾರ್ಯಾರಂಭ ಮಾಡಿದ ಐಸಿಎಆರ್ ತರಳಬಾಳು ಕೃಷಿ ವಿಜ್ಞಾನ ಕೇಂದ್ರವು ಜಿಲ್ಲೆಯ ಕೃಷಿ ವಲಯದ ಸಮಸ್ಯೆಗಳನ್ನು ಗುರುತಿಸಿ ಅವುಗಳ ಪರಿಹಾರ ಭಾಗವಾಗಿ ಮುಂಚೂಣಿ ವಿಸ್ತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಾ ಬಂದಿದೆ. ರೈತರಿಗೆ, ಮಹಿಳೆಯರಿಗೆ ಗ್ರಾಮೀಣ ಯುವಕರಿಗೆ, ಸರ್ಕಾರೇತರ ಸಂಸ್ಥೆಗಳಿಗೆ ಕೃಷಿ ತರಬೇತಿ ಆಯೋಜಿಸಿದೆ. ಸಿದ್ಧನೂರು ಮತ್ತು ಅಗಸನಕಟ್ಟೆ ಗ್ರಾಮಗಳಲ್ಲಿ ‘ಹವಾಮಾನ ವೈಪರೀತ್ಯಕ್ಕೆ ಚೇತರಿಕೆಯುಕ್ತ ಕೃಷಿ ತಂತ್ರಜ್ಞಾನಗಳ ರಾಷ್ಟ್ರೀಯ ಅನುಶೋಧಕ ಯೋಜನೆಗಳನ್ನು’ (ನಿಕ್ರಾ) ಪರಿಗಣಿಸಿ ಈ ಪ್ರಶಸ್ತಿ ನೀಡಿದೆ’ ಎಂದರು.