ನಗರದ ಹೈಸ್ಕೂಲ್ ಮೈದಾನದಲ್ಲಿ ನಗರ ಉಪವಿಭಾಗದ ಡಿಎಸ್ಪಿ ನಾಗರಾಜ್ ಅವರು ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರು. 150ಕ್ಕೂ ಹೆಚ್ಚು ಸ್ಕೌಟ್ಸ್ ಮತ್ತು ಗೈಡ್ಸ್ನ ಪ್ರತಿನಿಧಿಗಳು ಜಾಥಾದಲ್ಲಿ ಪಾಲ್ಗೊಂಡು ಅಗ್ನಿ ಅವಘಡಗಳ ಬಗ್ಗೆ ಜಾಗೃತಿ ಮೂಡಿಸಿದರು. ಹೈಸ್ಕೂಲ್ ಮೈದಾನದಿಂದ ಪಾಲಿಕೆ ಸರ್ಕಲ್, ರೈಲುನಿಲ್ದಾಣ, ಗಾಂಧಿ ಸರ್ಕಲ್, ಅಶೋಕ ರಸ್ತೆ, ಜಯದೇವ ವೃತ್ತದ ಮೂಲಕ ಸಾಗಿದ ಜಾಥಾ ಹೈಸ್ಕೂಲ್ ಮೈದಾನದಲ್ಲಿ ಕೊನೆಗೊಂಡಿತು. ‘ಅಗ್ನಿ ಶಮನಕ್ಕಿಂತ ಅಗ್ನಿ ನಿವಾರಣೆ ಉತ್ತಮ’, ‘ಅಗ್ನಿಶಾಮಕ ಜೀವ ಮತ್ತು ಆಸ್ತಿ ರಕ್ಷಣೆಯಲ್ಲಿ ನಿಮ್ಮ ಜೊತೆಗಾರ’, ‘ಅಗ್ನಿ ಸುರಕ್ಷಿತ ಭಾರತಕ್ಕಾಗಿ ಒಟ್ಟಾಗಿ ದುಡಿಯೋಣ’, ‘ಅಗ್ನಿ ಮುನ್ನೆಚ್ಚರಿಕೆಯನ್ನು ಪಾಲಿಸಿ ಬೆಂಕಿಯನ್ನು ತಡೆಗಟ್ಟಿ’... ಹೀಗೆ ಹಲವು ಘೋಷಣೆಗಳಿರುವ ಫಲಕಗಳನ್ನು ಹಿಡಿದು ಸಾಗಿದ ವಿದ್ಯಾರ್ಥಿಗಳು ಗಮನ ಸೆಳೆದರು.