<p><strong>ಚನ್ನಗಿರಿ:</strong> ಮತದಾರರು ಯಾವುದೇ ಆಸೆ, ಆಮಿಷಗಳಿಗೆ ಬಲಿಯಾಗದೇ ಮತದಾನ ಮಾಡಬೇಕು ಎಂದು ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಜಿ. ಮಹಾಲಕ್ಷ್ಮಿ ತಿಳಿಸಿದರು.</p>.<p>ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ, ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದ ಸಹಯೋಗದಲ್ಲಿ ಭಾನುವಾರ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>18 ವರ್ಷ ತುಂಬಿದ ಎಲ್ಲ ಯುವಕ, ಯುವತಿಯರು ಕಡ್ಡಾಯವಾಗಿ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಬೇಕು. ಪ್ರಜ್ಞಾವಂತ ನಾಗರಿಕರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಮ್ಮ ಮತ, ನಮ್ಮ ಹಕ್ಕು ಎಂದುಕೊಂಡು ಮತದಾನ ಮಾಡಿದರೆ ಭವಿಷ್ಯದ ಉತ್ತಮ ನಾಯಕನನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ ಎಂದರು.</p>.<p>ವಕೀಲರ ಸಂಘದ ಅಧ್ಯಕ್ಷ ಎಚ್. ಮೋಹನ್, ಕಾರ್ಯದರ್ಶಿ ಜಿ.ಎಸ್. ಮೋಹನ್, ಪಿಎಸ್ಐ ಗುರುಶಾಂತಯ್ಯ, ತಾಲ್ಲೂಕು ಪಂಚಾಯಿತಿ ಇಒ ಎಂ.ಆರ್. ಪ್ರಕಾಶ್, ಕ್ಷೇತ್ರ ಸಮನ್ವಯಾಧಿಕಾರಿ ಎಸ್. ಶಂಕರಪ್ಪ, ಪುರಸಭೆ ಹಿರಿಯ ಆರೋಗ್ಯಾಧಿಕಾರಿ ಶಿವರುದ್ರಪ್ಪ ಉಪಸ್ಥಿತರಿದ್ದರು.</p>.<p>ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ–ಪ್ರಾಧ್ಯಾಪಕ ಜಿ.ಟಿ. ಮಧುಸೂದನ್ ಪ್ರತಿಜ್ಞಾವಿಧಿ ಬೋಧಿಸಿದರು. ತಹಶೀಲ್ದಾರ್ ಎನ್.ಜೆ. ನಾಗರಾಜ್ ಅಧ್ಯಕ್ಷತೆ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಗಿರಿ:</strong> ಮತದಾರರು ಯಾವುದೇ ಆಸೆ, ಆಮಿಷಗಳಿಗೆ ಬಲಿಯಾಗದೇ ಮತದಾನ ಮಾಡಬೇಕು ಎಂದು ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಜಿ. ಮಹಾಲಕ್ಷ್ಮಿ ತಿಳಿಸಿದರು.</p>.<p>ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ, ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದ ಸಹಯೋಗದಲ್ಲಿ ಭಾನುವಾರ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>18 ವರ್ಷ ತುಂಬಿದ ಎಲ್ಲ ಯುವಕ, ಯುವತಿಯರು ಕಡ್ಡಾಯವಾಗಿ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಬೇಕು. ಪ್ರಜ್ಞಾವಂತ ನಾಗರಿಕರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಮ್ಮ ಮತ, ನಮ್ಮ ಹಕ್ಕು ಎಂದುಕೊಂಡು ಮತದಾನ ಮಾಡಿದರೆ ಭವಿಷ್ಯದ ಉತ್ತಮ ನಾಯಕನನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ ಎಂದರು.</p>.<p>ವಕೀಲರ ಸಂಘದ ಅಧ್ಯಕ್ಷ ಎಚ್. ಮೋಹನ್, ಕಾರ್ಯದರ್ಶಿ ಜಿ.ಎಸ್. ಮೋಹನ್, ಪಿಎಸ್ಐ ಗುರುಶಾಂತಯ್ಯ, ತಾಲ್ಲೂಕು ಪಂಚಾಯಿತಿ ಇಒ ಎಂ.ಆರ್. ಪ್ರಕಾಶ್, ಕ್ಷೇತ್ರ ಸಮನ್ವಯಾಧಿಕಾರಿ ಎಸ್. ಶಂಕರಪ್ಪ, ಪುರಸಭೆ ಹಿರಿಯ ಆರೋಗ್ಯಾಧಿಕಾರಿ ಶಿವರುದ್ರಪ್ಪ ಉಪಸ್ಥಿತರಿದ್ದರು.</p>.<p>ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ–ಪ್ರಾಧ್ಯಾಪಕ ಜಿ.ಟಿ. ಮಧುಸೂದನ್ ಪ್ರತಿಜ್ಞಾವಿಧಿ ಬೋಧಿಸಿದರು. ತಹಶೀಲ್ದಾರ್ ಎನ್.ಜೆ. ನಾಗರಾಜ್ ಅಧ್ಯಕ್ಷತೆ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>