<p><strong>ದಾವಣಗೆರೆ</strong>: ‘ನೈಸರ್ಗಿಕ ಕೃಷಿ ಪದ್ಧತಿಯಿಂದ ಮಣ್ಣಿನಲ್ಲಿ ಇಂಗಾಲದ ಅಂಶ ಮತ್ತು ಸೂಕ್ಷ್ಮಜೀವಾಣುಗಳ ಚಟುವಟಿಕೆ ಹೆಚ್ಚುತ್ತದೆ. ಇದರಿಂದ ಬೆಳೆಗಳ ಇಳುವರಿ ಏರಿಕೆಯಾಗುತ್ತದೆ’ ಎಂದು ಐಸಿಎಆರ್ ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಬೇಸಾಯ ತಜ್ಞ ಬಿ.ಒ. ಮಲ್ಲಿಕಾರ್ಜುನ ಸಲಹೆ ನೀಡಿದರು.</p>.<p>ಚನ್ನಗಿರಿ ತಾಲ್ಲೂಕಿನ ನೀತಿಗೆರೆ ಗ್ರಾಮದಲ್ಲಿ ಐಸಿಎಆರ್ ತರಳಬಾಳು ಕೃಷಿ ವಿಜ್ಞಾನ ಕೇಂದ್ರ ಹಾಗೂ ದೇವರಹಳ್ಳಿ ರೈತ ಸಂಪರ್ಕ ಕೇಂದ್ರದ ಸಹಯೋಗದೊಂದಿಗೆ ನೈಸರ್ಗಿಕ ಕೃಷಿಯ ರಾಷ್ಟ್ರೀಯ ಮಿಷನ್ ಯೋಜನೆಯಡಿ ನೈಸರ್ಗಿಕ ಕೃಷಿ ಪದ್ಧತಿ ಬಗ್ಗೆ ಈಚೆಗೆ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.</p>.<p>ನೈಸರ್ಗಿಕ ಕೃಷಿಯಲ್ಲಿ ಬಳಸುವ ಜೀವಾಮೃತ, ಬೀಜಾಮೃತ, ಗೋ ಕೃಪಾಮೃತ, ನೀಮಾಸ್ತ್ರ ತಯಾರಿಕೆ ವಿಧಾನಗಳನ್ನು ತಿಳಿಸಿಕೊಟ್ಟರು.</p>.<p>‘ತೋಟಗಾರಿಕಾ ಬೆಳೆಗಳಲ್ಲಿ ನೈಸರ್ಗಿಕ ಕೃಷಿ ಪದ್ಧತಿ ಅಳವಡಿಸುವುದರಿಂದ ಉತ್ಪಾದನಾ ವೆಚ್ಚ ಕಡಿಮೆಯಾಗುತ್ತದೆ. ಮಣ್ಣಿನ ಫಲವತ್ತತೆ, ರೋಗ ಮತ್ತು ಕೀಟಬಾಧೆಗಳ ಹಾವಳಿ ಕಡಿಮೆಯಾಗುತ್ತದೆ. ಬೆಳೆಯ ಇಳುವರಿ ಹೆಚ್ಚುವುದರ ಜೊತೆಗೆ ಗುಣಮಟ್ಟವು ಚೆನ್ನಾಗಿರುತ್ತದೆ’ ಎಂದು ಬೇಸಾಯ ತಜ್ಞ ಎಂ.ಜಿ. ಬಸವನಗೌಡ ಹೇಳಿದರು.</p>.<p>‘ಸ್ಥಳೀಯವಾಗಿ ಸಿಗುವ ಪದಾರ್ಥಗಳನ್ನು ಬಳಸಿಕೊಂಡು ನೈಸರ್ಗಿಕ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡರೆ ಹೆಚ್ಚಿನ ಲಾಭ ಪಡೆಯಬಹುದು’ ಎಂದು ಕೃಷಿ ಅಧಿಕಾರಿ ಶ್ರೀಕುಮಾರ್ ಹೇಳಿದರು.</p>.<p>ನೈಸರ್ಗಿಕ ಕೃಷಿ ಪದ್ಧತಿ ಅಳವಡಿಸಿಕೊಂಡಿರುವ ಪ್ರಗತಿಪರ ಕೃಷಿಕ ನಾಗರಾಜ್ ಅವರ ತಾಕಿಗೆ ಭೇಟಿ ನೀಡಿ ಜೀವಾಮೃತ ತಯಾರಿಕೆ ಮತ್ತು ಬಳಕೆ ವಿಧಾನದ ಬಗ್ಗೆ ರೈತರೊಂದಿಗೆ ಚರ್ಚೆ ಮಾಡಲಾಯಿತು. ಕೃಷಿ ಸಖಿ ಚಂದ್ರಕಲಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ‘ನೈಸರ್ಗಿಕ ಕೃಷಿ ಪದ್ಧತಿಯಿಂದ ಮಣ್ಣಿನಲ್ಲಿ ಇಂಗಾಲದ ಅಂಶ ಮತ್ತು ಸೂಕ್ಷ್ಮಜೀವಾಣುಗಳ ಚಟುವಟಿಕೆ ಹೆಚ್ಚುತ್ತದೆ. ಇದರಿಂದ ಬೆಳೆಗಳ ಇಳುವರಿ ಏರಿಕೆಯಾಗುತ್ತದೆ’ ಎಂದು ಐಸಿಎಆರ್ ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಬೇಸಾಯ ತಜ್ಞ ಬಿ.ಒ. ಮಲ್ಲಿಕಾರ್ಜುನ ಸಲಹೆ ನೀಡಿದರು.</p>.<p>ಚನ್ನಗಿರಿ ತಾಲ್ಲೂಕಿನ ನೀತಿಗೆರೆ ಗ್ರಾಮದಲ್ಲಿ ಐಸಿಎಆರ್ ತರಳಬಾಳು ಕೃಷಿ ವಿಜ್ಞಾನ ಕೇಂದ್ರ ಹಾಗೂ ದೇವರಹಳ್ಳಿ ರೈತ ಸಂಪರ್ಕ ಕೇಂದ್ರದ ಸಹಯೋಗದೊಂದಿಗೆ ನೈಸರ್ಗಿಕ ಕೃಷಿಯ ರಾಷ್ಟ್ರೀಯ ಮಿಷನ್ ಯೋಜನೆಯಡಿ ನೈಸರ್ಗಿಕ ಕೃಷಿ ಪದ್ಧತಿ ಬಗ್ಗೆ ಈಚೆಗೆ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.</p>.<p>ನೈಸರ್ಗಿಕ ಕೃಷಿಯಲ್ಲಿ ಬಳಸುವ ಜೀವಾಮೃತ, ಬೀಜಾಮೃತ, ಗೋ ಕೃಪಾಮೃತ, ನೀಮಾಸ್ತ್ರ ತಯಾರಿಕೆ ವಿಧಾನಗಳನ್ನು ತಿಳಿಸಿಕೊಟ್ಟರು.</p>.<p>‘ತೋಟಗಾರಿಕಾ ಬೆಳೆಗಳಲ್ಲಿ ನೈಸರ್ಗಿಕ ಕೃಷಿ ಪದ್ಧತಿ ಅಳವಡಿಸುವುದರಿಂದ ಉತ್ಪಾದನಾ ವೆಚ್ಚ ಕಡಿಮೆಯಾಗುತ್ತದೆ. ಮಣ್ಣಿನ ಫಲವತ್ತತೆ, ರೋಗ ಮತ್ತು ಕೀಟಬಾಧೆಗಳ ಹಾವಳಿ ಕಡಿಮೆಯಾಗುತ್ತದೆ. ಬೆಳೆಯ ಇಳುವರಿ ಹೆಚ್ಚುವುದರ ಜೊತೆಗೆ ಗುಣಮಟ್ಟವು ಚೆನ್ನಾಗಿರುತ್ತದೆ’ ಎಂದು ಬೇಸಾಯ ತಜ್ಞ ಎಂ.ಜಿ. ಬಸವನಗೌಡ ಹೇಳಿದರು.</p>.<p>‘ಸ್ಥಳೀಯವಾಗಿ ಸಿಗುವ ಪದಾರ್ಥಗಳನ್ನು ಬಳಸಿಕೊಂಡು ನೈಸರ್ಗಿಕ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡರೆ ಹೆಚ್ಚಿನ ಲಾಭ ಪಡೆಯಬಹುದು’ ಎಂದು ಕೃಷಿ ಅಧಿಕಾರಿ ಶ್ರೀಕುಮಾರ್ ಹೇಳಿದರು.</p>.<p>ನೈಸರ್ಗಿಕ ಕೃಷಿ ಪದ್ಧತಿ ಅಳವಡಿಸಿಕೊಂಡಿರುವ ಪ್ರಗತಿಪರ ಕೃಷಿಕ ನಾಗರಾಜ್ ಅವರ ತಾಕಿಗೆ ಭೇಟಿ ನೀಡಿ ಜೀವಾಮೃತ ತಯಾರಿಕೆ ಮತ್ತು ಬಳಕೆ ವಿಧಾನದ ಬಗ್ಗೆ ರೈತರೊಂದಿಗೆ ಚರ್ಚೆ ಮಾಡಲಾಯಿತು. ಕೃಷಿ ಸಖಿ ಚಂದ್ರಕಲಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>