<p><strong>ದಾವಣಗೆರೆ:</strong> ಕೊರೊನಾ ಎರಡನೇ ಅಲೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಮೇ 10ರಿಂದ ಅನ್ವಯ ವಾಗುವಂತೆ ಹೊರಡಿಸಿರುವ ಹೊಸ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ಮೇ 10 ರ ಬೆಳಿಗ್ಗೆ 6 ರಿಂದ ಮೇ 24ರ ಬೆಳಿಗ್ಗೆ 6 ಗಂಟೆವರೆಗೆ ಸಿಆರ್ಪಿಸಿ ಸೆಕ್ಷನ್ 144ರ ಅನ್ವಯ ಜಿಲ್ಲೆಯಾದ್ಯಂತ ನಾಲ್ಕಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶ ಹೊರಡಿಸಿದ್ದಾರೆ.</p>.<p>ರೈಲು ನಿಲ್ದಾಣ ಮತ್ತು ಕೋವಿಡ್ ಶಿಷ್ಟಾಚಾರ ಪಾಲನೆ ಹೊರತುಪಡಿಸಿ ಉಳೆದೆಲ್ಲೆಡೆ ಈ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಈ ನಿಷೇಧಾಜ್ಞೆಯನ್ನು ಉಲ್ಲಂಘಿಸಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005 ರ 51 ರಿಂದ 60 ಹಾಗೂ ಐಪಿಸಿ ಸೆಕ್ಷನ್ 188 ಮತ್ತು ಕರ್ನಾಟಕ ಎಂಪೆಡಿಮಿಕ್ ಡಿಸೀಸಸ್ ಆಕ್ಟ್ 2020 ರ ಸೆಕ್ಷನ್ 4, 5 ಮತ್ತು 10 ರಡಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.</p>.<p>ಈ ಪರಿಷ್ಕೃತ ಮಾರ್ಗಸೂಚಿಗಳನ್ನು ಯಥಾವತ್ತಾಗಿ ಜಾರಿ ಗೊಳಿಸಲಾಗು ವುದು. ಜಿಲ್ಲಾ ಮಟ್ಟದ, ತಾಲ್ಲೂಕು ಮಟ್ಟದ ಪ್ರಾಧಿಕಾರಗಳು ಹಾಗೂ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಸ್ಥಳೀಯ ಸಂಸ್ಥೆಗಳು, ಎಲ್ಲಾ ಇಲಾಖಾ ಮುಖ್ಯಸ್ಥರುಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.</p>.<p class="Briefhead"><strong>ಪತ್ರಿಕೆ ವಿತರಕರಿಗೆ ಸಮಸ್ಯೆ ಇಲ್ಲ: ಎಸ್ಪಿ</strong></p>.<p>ಪತ್ರಿಕೆಗಳನ್ನು ಓದುಗರಿಗೆ ತಲುಪಿಸುವ ವಿತರಕರ ವಾಹನಗಳನ್ನು ಪೊಲೀಸರು ತಡೆಯುವುದಿಲ್ಲ. ಪತ್ರಿಕೆ ವಿತರಣೆ ಮತ್ತು ಅದಕ್ಕೆ ಸಂಬಂಧಿಸಿದ ಕಾರ್ಯಗಳನ್ನು ಬಿಟ್ಟು ಅನಗತ್ಯವಾಗಿ ತಿರುಗಾಡಬಾರದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಸ್ಪಷ್ಟಪಡಿಸಿದ್ದಾರೆ.</p>.<p>‘ಪತ್ರಿಕಾ ವಾಹನಗಳನ್ನು ತಡೆಯದಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ’ ಎಂದು ಅವರು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ</p>.<p>ಪತ್ರಕರ್ತರು, ಪತ್ರಿಕೆಗೆ ಸಂಬಂಧಿಸಿದ ಎಲ್ಲ ಉದ್ಯೋಗಿಗಳು ಎಂದಿನಂತೆ ಕೆಲಸ ಮಾಡಲು ಸಮಸ್ಯೆ ಇಲ್ಲ ಎಂದು ಜಿಲ್ಲಾ ವಾರ್ತಾಧಿಕಾರಿ ಅಶೋಕ್ ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಕೊರೊನಾ ಎರಡನೇ ಅಲೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಮೇ 10ರಿಂದ ಅನ್ವಯ ವಾಗುವಂತೆ ಹೊರಡಿಸಿರುವ ಹೊಸ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ಮೇ 10 ರ ಬೆಳಿಗ್ಗೆ 6 ರಿಂದ ಮೇ 24ರ ಬೆಳಿಗ್ಗೆ 6 ಗಂಟೆವರೆಗೆ ಸಿಆರ್ಪಿಸಿ ಸೆಕ್ಷನ್ 144ರ ಅನ್ವಯ ಜಿಲ್ಲೆಯಾದ್ಯಂತ ನಾಲ್ಕಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶ ಹೊರಡಿಸಿದ್ದಾರೆ.</p>.<p>ರೈಲು ನಿಲ್ದಾಣ ಮತ್ತು ಕೋವಿಡ್ ಶಿಷ್ಟಾಚಾರ ಪಾಲನೆ ಹೊರತುಪಡಿಸಿ ಉಳೆದೆಲ್ಲೆಡೆ ಈ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಈ ನಿಷೇಧಾಜ್ಞೆಯನ್ನು ಉಲ್ಲಂಘಿಸಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005 ರ 51 ರಿಂದ 60 ಹಾಗೂ ಐಪಿಸಿ ಸೆಕ್ಷನ್ 188 ಮತ್ತು ಕರ್ನಾಟಕ ಎಂಪೆಡಿಮಿಕ್ ಡಿಸೀಸಸ್ ಆಕ್ಟ್ 2020 ರ ಸೆಕ್ಷನ್ 4, 5 ಮತ್ತು 10 ರಡಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.</p>.<p>ಈ ಪರಿಷ್ಕೃತ ಮಾರ್ಗಸೂಚಿಗಳನ್ನು ಯಥಾವತ್ತಾಗಿ ಜಾರಿ ಗೊಳಿಸಲಾಗು ವುದು. ಜಿಲ್ಲಾ ಮಟ್ಟದ, ತಾಲ್ಲೂಕು ಮಟ್ಟದ ಪ್ರಾಧಿಕಾರಗಳು ಹಾಗೂ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಸ್ಥಳೀಯ ಸಂಸ್ಥೆಗಳು, ಎಲ್ಲಾ ಇಲಾಖಾ ಮುಖ್ಯಸ್ಥರುಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.</p>.<p class="Briefhead"><strong>ಪತ್ರಿಕೆ ವಿತರಕರಿಗೆ ಸಮಸ್ಯೆ ಇಲ್ಲ: ಎಸ್ಪಿ</strong></p>.<p>ಪತ್ರಿಕೆಗಳನ್ನು ಓದುಗರಿಗೆ ತಲುಪಿಸುವ ವಿತರಕರ ವಾಹನಗಳನ್ನು ಪೊಲೀಸರು ತಡೆಯುವುದಿಲ್ಲ. ಪತ್ರಿಕೆ ವಿತರಣೆ ಮತ್ತು ಅದಕ್ಕೆ ಸಂಬಂಧಿಸಿದ ಕಾರ್ಯಗಳನ್ನು ಬಿಟ್ಟು ಅನಗತ್ಯವಾಗಿ ತಿರುಗಾಡಬಾರದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಸ್ಪಷ್ಟಪಡಿಸಿದ್ದಾರೆ.</p>.<p>‘ಪತ್ರಿಕಾ ವಾಹನಗಳನ್ನು ತಡೆಯದಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ’ ಎಂದು ಅವರು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ</p>.<p>ಪತ್ರಕರ್ತರು, ಪತ್ರಿಕೆಗೆ ಸಂಬಂಧಿಸಿದ ಎಲ್ಲ ಉದ್ಯೋಗಿಗಳು ಎಂದಿನಂತೆ ಕೆಲಸ ಮಾಡಲು ಸಮಸ್ಯೆ ಇಲ್ಲ ಎಂದು ಜಿಲ್ಲಾ ವಾರ್ತಾಧಿಕಾರಿ ಅಶೋಕ್ ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>