‘ಒಂದು ವರ್ಷದಿಂದ ಮಹಾಂತೇಶ್ ನಾಯ್ಕ ಮೂರ್ಛೆರೋಗ (ಅಪಸ್ಮಾರ)ದಿಂದ ಬಳಲುತ್ತಿದ್ದರು. ಹಲವು ವೈದ್ಯರಲ್ಲಿ ಚಿಕಿತ್ಸೆ ಕೊಡಿಸಿದ್ದರೂ ಪ್ರಯೋಜನ ಆಗಿರಲಿಲ್ಲ. ಇದರಿಂದ ಖಿನ್ನತೆಗೆ ಒಳಗಾಗಿದ್ದರು. ಮಂಗಳವಾರ ಕುಟುಂಬದ ಸದಸ್ಯರೊಂದಿಗೆ ಹೊಲದಲ್ಲಿ ಕೆಲಸ ಮುಗಿಸಿ, ಬಳಿಕ ವಿಷ ಸೇವಿಸಿದ್ದಾರೆ. ದಾವಣಗೆರೆ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ’ ಎಂದು ಕುಟುಂಬದವರು ತಿಳಿಸಿದ್ದಾರೆ.