ಚಿತ್ರದುರ್ಗ ತಾಲ್ಲೂಕಿನ ಕೋಣನೂರು ಗ್ರಾಮದ ಶಿಲ್ಪಾ ಅವರು ಅದೇ ಗ್ರಾಮದ ಮಂಜುನಾಥ ಅವರನ್ನು ಪ್ರೀತಿಸುತ್ತಿದ್ದರು. ಅಂತರ್ಜಾತಿ ಎಂಬ ಕಾರಣಕ್ಕೆ ಇವರಿಬ್ಬರ ವಿವಾಹಕ್ಕೆ ಕುಟುಂಬದವರು ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ಏಪ್ರಿಲ್ 25ರಂದು ಜಗಳೂರಿನ ಕೊಣಚಕಲ್ಲು ಗ್ರಾಮದ ರಂಗನಾಥಸ್ವಾಮಿ ದೇವಸ್ಥಾನಕ್ಕೆ ಹೋಗಿ ಮಂಜುನಾಥ ಅವರೊಂದಿಗೆ ವಿವಾಹವಾಗಿದ್ದರು. ಅಂದೇ ಇಬ್ಬರೂ ದಾವಣಗೆರೆಯ ಶ್ರೀರಾಮ ಬಡಾವಣೆಗೆ ಬಂದು ಬಾಡಿಗೆ ಮನೆ ಮಾಡಿದ್ದರು.