<p>ಪ್ರಜಾವಾಣಿ ವಾರ್ತೆ</p>.<p>ಚನ್ನಗಿರಿ: ರೈತರು ಪಡೆಯುವ ಪಹಣಿ ಬೆಲೆ ಹೆಚ್ಚಿಸಿರುವುದನ್ನು ವಿರೋಧಿಸಿ ಹಾಗೂ ವಾರ್ಷಿಕವಾಗಿ ರೈತರಿಗೆ ಬೇಕಾಗುವಷ್ಟು ಪಹಣಿಯನ್ನು ಸರ್ಕಾರ ಉಚಿತವಾಗಿ ನೀಡಬೇಕು ಎಂದು ಒತ್ತಾಯಿಸಿ ತಾಲ್ಲೂಕು ರೈತ ಸಂಘ ಮತ್ತು ಹಸಿರು ಸೇನೆ (ಹುಚ್ಚವನಹಳ್ಳಿ ಮಂಜುನಾಥ್ ಬಣ) ಕಾರ್ಯಕರ್ತರು ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.</p>.<p>ಈ ತಿಂಗಳಿಂದಲೇ ಅನ್ವಯವಾಗುವಂತೆ ಪಹಣಿ ಪಡೆಯಲು ದರವನ್ನು ₹ 15ರಿಂದ ₹ 25ಕ್ಕೆ ಹೆಚ್ಚಿಸಿರುವುದು ಖಂಡನೀಯ. ಬೆಳೆ ವಿಮೆ, ಬೆಳೆ ಸಾಲ, ಸಣ್ಣ ಹಿಡುವಳಿದಾರರ ಪ್ರಮಾಣ ಪತ್ರ ಸೇರಿ ಸರ್ಕಾರದ ಸೌಕರ್ಯಗಳನ್ನು ಪಡೆದುಕೊಳ್ಳಲು ಪ್ರತಿಯೊಬ್ಬ ರೈತನಿಗೂ ವಾರ್ಷಿಕವಾಗಿ 40 ಪಹಣಿಗಳು ಬೇಕಾಗುತ್ತವೆ. ಬೆಲೆ ಹೆಚ್ಚಿಸಿರುವುದರಿಂದ ಒಬ್ಬ ರೈತ 40 ಪಹಣಿಗಳಿಗೆ ವಾರ್ಷಿಕವಾಗಿ ₹ 1 ಸಾವಿರ ಖರ್ಚು ಮಾಡಬೇಕಾಗುತ್ತದೆ. ಇದು ರೈತರಿಗೆ ತುಂಬಾ ಹೊರೆಯಾಗಲಿದೆ ಎಂದು ಹೇಳಿದರು.</p>.<p>ಅಟಲ್ ಜನಸ್ನೇಹಿ ಕೇಂದ್ರದ ಮೂಲಕ ಜನ ಸಾಮಾನ್ಯರು ಸರ್ಕಾರದ ವಿವಿಧ ಸೌಕರ್ಯಗಳನ್ನು ಪಡೆದುಕೊಳ್ಳಲು ಇದ್ದ ₹ 25 ಶುಲ್ಕವನ್ನು ₹ 40ಕ್ಕೆ ಹೆಚ್ಚಿಸಿರುವುದು ಸರಿಯಲ್ಲ. ಇದರಿಂದ ಕಡುಬಡವರು ಹಾಗೂ ಮಧ್ಯಮ ವರ್ಗದವರಿಗೆ ಕಷ್ಟವಾಗಲಿದೆ. ಸಾಮಾನ್ಯರಿಂದ ಸರ್ಕಾರ ಹಣ ವಸೂಲಿ ಮಾಡುವುದನ್ನು ನಿಲ್ಲಿಸಬೇಕು. ಹಾಗೆಯೇ ಜನಸ್ನೇಹಿ ಕೇಂದ್ರಗಳ ಶುಲ್ಕವನ್ನು ₹ 10ಕ್ಕೆ ಇಳಿಸಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ತೀವ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.</p>.<p>ಅಧ್ಯಕ್ಷ ಯಲೋದಹಳ್ಳಿ ರವಿಕುಮಾರ್, ಕುಮಾರ್, ಕೃಷ್ಣಮೂರ್ತಿ, ಶಿವಪ್ಪ, ಶೇಖರಪ್ಪ, ಅಂಜು, ಉಚ್ಚಂಗೆಪ್ಪ ಹಾಗೂ ನಾಗರಾಜ್ ಉಪಸ್ಥಿತರಿದ್ದರು.</p>.<p>ಪಟ್ಟಣದ ಪ್ರವಾಸಿ ಮಂದಿರದಿಂದ ಮೆರವಣಿಗೆ ಹೊರಟು ತಹಶೀಲ್ದಾರ್ ಪಟ್ಟರಾಜಗೌಡ ಅವರಿಗೆ ಮನವಿ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p>ಚನ್ನಗಿರಿ: ರೈತರು ಪಡೆಯುವ ಪಹಣಿ ಬೆಲೆ ಹೆಚ್ಚಿಸಿರುವುದನ್ನು ವಿರೋಧಿಸಿ ಹಾಗೂ ವಾರ್ಷಿಕವಾಗಿ ರೈತರಿಗೆ ಬೇಕಾಗುವಷ್ಟು ಪಹಣಿಯನ್ನು ಸರ್ಕಾರ ಉಚಿತವಾಗಿ ನೀಡಬೇಕು ಎಂದು ಒತ್ತಾಯಿಸಿ ತಾಲ್ಲೂಕು ರೈತ ಸಂಘ ಮತ್ತು ಹಸಿರು ಸೇನೆ (ಹುಚ್ಚವನಹಳ್ಳಿ ಮಂಜುನಾಥ್ ಬಣ) ಕಾರ್ಯಕರ್ತರು ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.</p>.<p>ಈ ತಿಂಗಳಿಂದಲೇ ಅನ್ವಯವಾಗುವಂತೆ ಪಹಣಿ ಪಡೆಯಲು ದರವನ್ನು ₹ 15ರಿಂದ ₹ 25ಕ್ಕೆ ಹೆಚ್ಚಿಸಿರುವುದು ಖಂಡನೀಯ. ಬೆಳೆ ವಿಮೆ, ಬೆಳೆ ಸಾಲ, ಸಣ್ಣ ಹಿಡುವಳಿದಾರರ ಪ್ರಮಾಣ ಪತ್ರ ಸೇರಿ ಸರ್ಕಾರದ ಸೌಕರ್ಯಗಳನ್ನು ಪಡೆದುಕೊಳ್ಳಲು ಪ್ರತಿಯೊಬ್ಬ ರೈತನಿಗೂ ವಾರ್ಷಿಕವಾಗಿ 40 ಪಹಣಿಗಳು ಬೇಕಾಗುತ್ತವೆ. ಬೆಲೆ ಹೆಚ್ಚಿಸಿರುವುದರಿಂದ ಒಬ್ಬ ರೈತ 40 ಪಹಣಿಗಳಿಗೆ ವಾರ್ಷಿಕವಾಗಿ ₹ 1 ಸಾವಿರ ಖರ್ಚು ಮಾಡಬೇಕಾಗುತ್ತದೆ. ಇದು ರೈತರಿಗೆ ತುಂಬಾ ಹೊರೆಯಾಗಲಿದೆ ಎಂದು ಹೇಳಿದರು.</p>.<p>ಅಟಲ್ ಜನಸ್ನೇಹಿ ಕೇಂದ್ರದ ಮೂಲಕ ಜನ ಸಾಮಾನ್ಯರು ಸರ್ಕಾರದ ವಿವಿಧ ಸೌಕರ್ಯಗಳನ್ನು ಪಡೆದುಕೊಳ್ಳಲು ಇದ್ದ ₹ 25 ಶುಲ್ಕವನ್ನು ₹ 40ಕ್ಕೆ ಹೆಚ್ಚಿಸಿರುವುದು ಸರಿಯಲ್ಲ. ಇದರಿಂದ ಕಡುಬಡವರು ಹಾಗೂ ಮಧ್ಯಮ ವರ್ಗದವರಿಗೆ ಕಷ್ಟವಾಗಲಿದೆ. ಸಾಮಾನ್ಯರಿಂದ ಸರ್ಕಾರ ಹಣ ವಸೂಲಿ ಮಾಡುವುದನ್ನು ನಿಲ್ಲಿಸಬೇಕು. ಹಾಗೆಯೇ ಜನಸ್ನೇಹಿ ಕೇಂದ್ರಗಳ ಶುಲ್ಕವನ್ನು ₹ 10ಕ್ಕೆ ಇಳಿಸಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ತೀವ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.</p>.<p>ಅಧ್ಯಕ್ಷ ಯಲೋದಹಳ್ಳಿ ರವಿಕುಮಾರ್, ಕುಮಾರ್, ಕೃಷ್ಣಮೂರ್ತಿ, ಶಿವಪ್ಪ, ಶೇಖರಪ್ಪ, ಅಂಜು, ಉಚ್ಚಂಗೆಪ್ಪ ಹಾಗೂ ನಾಗರಾಜ್ ಉಪಸ್ಥಿತರಿದ್ದರು.</p>.<p>ಪಟ್ಟಣದ ಪ್ರವಾಸಿ ಮಂದಿರದಿಂದ ಮೆರವಣಿಗೆ ಹೊರಟು ತಹಶೀಲ್ದಾರ್ ಪಟ್ಟರಾಜಗೌಡ ಅವರಿಗೆ ಮನವಿ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>