<p>ಬಸವನಹಳ್ಳಿ (ನ್ಯಾಮತಿ): ಕುರುವ ಗಡ್ಡೆ ರಾಮೇಶ್ವರ ರಥೋತ್ಸವದಲ್ಲಿ ಪಾಲ್ಗೊಳ್ಳಲು ಮಾದನಬಾವಿ ಗ್ರಾಮಸ್ಥರು ಬೀರಲಿಂಗೇಶ್ವರಸ್ವಾಮಿ, ರಂಗನಾಥಸ್ವಾಮಿ, ಮುರುಡಲಿಂಗೇಶ್ವರ ಸ್ವಾಮಿ ಉತ್ಸವ ಮೂರ್ತಿಗಳನ್ನು ಪಕ್ಕದ ಬಸವನಹಳ್ಳಿ ಗ್ರಾಮದ ಮುಖಾಂತರ ಮೆರವಣಿಗೆ ಮೂಲಕ ತೆರಳುವಾಗ ಎರಡೂ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದು, ಕಲ್ಲು ತೂರಾಟ ನಡೆದಿದೆ.</p>.<p>ರಥೋತ್ಸವದ ನಂತರ ಮಾದನಬಾವಿ ಗ್ರಾಮಸ್ಥರು ಬಸವನಹಳ್ಳಿ ಮೂಲಕವೇ ಮರಳಿ ಬರುವುದು ವಾಡಿಕೆ. ಮಾದನಬಾವಿ ಗ್ರಾಮಸ್ಥರನ್ನು ತಡೆಯುವ ಸಲುವಾಗಿ ಬಸವನಹಳ್ಳಿ ಗ್ರಾಮಸ್ಥರು ಗುಂಪುಗೂಡಿದ್ದರಿಂದ ಎರಡೂ ಗ್ರಾಮಗಳಲ್ಲಿ ಬಿಗುವಿನ ಪರಿಸ್ಥಿತಿ ಉಂಟಾಗಿದೆ.</p>.<p>ಎರಡು ಗ್ರಾಮಗಳ ಮಧ್ಯೆ ದೇವರ ವಿಚಾರದಲ್ಲಿ ತಲೆತಲಾಂತರದಿಂದ ತಕರಾರು ಇದೆ. ‘ಯುಗಾದಿ ಚಂದ್ರದರ್ಶನ ನಂತರ ಗಡ್ಡೆ ರಾಮೇಶ್ವರಕ್ಕೆ ಉತ್ಸವ ಮೂರ್ತಿಗಳನ್ನು ಬಸವನಹಳ್ಳಿ ಮೂಲಕ ತೆಗೆದುಕೊಂಡು ಹೋಗುತ್ತೇವೆ. ಆ ವಿಚಾರವಾಗಿ ಬಸವನಹಳ್ಳಿ ಗ್ರಾಮಸ್ಥರು ಗಲಾಟೆ ಮಾಡಿದ್ದಾರೆ’ ಎಂದು ಮಾದನಬಾವಿ ಗ್ರಾಮಸ್ಥರು ಆರೋಪಿಸಿದ್ದಾರೆ.</p>.<p>ಮಾದನಬಾವಿ ಗ್ರಾಮಸ್ಥರು ಗ್ರಾಮದ ಮೂಲಕ ತೆರಳುವಾಗ ಗಲಾಟೆ ಮಾಡಿದರು ಎಂದು ಬಸವನಹಳ್ಳಿ ಗ್ರಾಮಸ್ಥರು ಪ್ರತ್ಯಾರೋಪ ಮಾಡಿದ್ದಾರೆ.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್, ಹೆಚ್ಚುವರಿ ಎಸ್ಪಿ ರಾಮಗೊಂಡ ಬಿ. ಬಸರಂಗಿ, ಚನ್ನಗಿರಿ ಸಿಪಿಐ ಮಧು, ಹರಿಹರ ಸಿಪಿಐ ಸತೀಶ, ಹೊನ್ನಾಳಿ ಎಸ್ಐ ಬಸವನಗೌಡ, ನ್ಯಾಮತಿ ಎಸ್ಐ ಪಿ.ಎಸ್. ರಮೇಶ, ಹದಡಿ ಎಸ್ಐ ರೂಪಾ ತೆಂಬದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಸವನಹಳ್ಳಿ (ನ್ಯಾಮತಿ): ಕುರುವ ಗಡ್ಡೆ ರಾಮೇಶ್ವರ ರಥೋತ್ಸವದಲ್ಲಿ ಪಾಲ್ಗೊಳ್ಳಲು ಮಾದನಬಾವಿ ಗ್ರಾಮಸ್ಥರು ಬೀರಲಿಂಗೇಶ್ವರಸ್ವಾಮಿ, ರಂಗನಾಥಸ್ವಾಮಿ, ಮುರುಡಲಿಂಗೇಶ್ವರ ಸ್ವಾಮಿ ಉತ್ಸವ ಮೂರ್ತಿಗಳನ್ನು ಪಕ್ಕದ ಬಸವನಹಳ್ಳಿ ಗ್ರಾಮದ ಮುಖಾಂತರ ಮೆರವಣಿಗೆ ಮೂಲಕ ತೆರಳುವಾಗ ಎರಡೂ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದು, ಕಲ್ಲು ತೂರಾಟ ನಡೆದಿದೆ.</p>.<p>ರಥೋತ್ಸವದ ನಂತರ ಮಾದನಬಾವಿ ಗ್ರಾಮಸ್ಥರು ಬಸವನಹಳ್ಳಿ ಮೂಲಕವೇ ಮರಳಿ ಬರುವುದು ವಾಡಿಕೆ. ಮಾದನಬಾವಿ ಗ್ರಾಮಸ್ಥರನ್ನು ತಡೆಯುವ ಸಲುವಾಗಿ ಬಸವನಹಳ್ಳಿ ಗ್ರಾಮಸ್ಥರು ಗುಂಪುಗೂಡಿದ್ದರಿಂದ ಎರಡೂ ಗ್ರಾಮಗಳಲ್ಲಿ ಬಿಗುವಿನ ಪರಿಸ್ಥಿತಿ ಉಂಟಾಗಿದೆ.</p>.<p>ಎರಡು ಗ್ರಾಮಗಳ ಮಧ್ಯೆ ದೇವರ ವಿಚಾರದಲ್ಲಿ ತಲೆತಲಾಂತರದಿಂದ ತಕರಾರು ಇದೆ. ‘ಯುಗಾದಿ ಚಂದ್ರದರ್ಶನ ನಂತರ ಗಡ್ಡೆ ರಾಮೇಶ್ವರಕ್ಕೆ ಉತ್ಸವ ಮೂರ್ತಿಗಳನ್ನು ಬಸವನಹಳ್ಳಿ ಮೂಲಕ ತೆಗೆದುಕೊಂಡು ಹೋಗುತ್ತೇವೆ. ಆ ವಿಚಾರವಾಗಿ ಬಸವನಹಳ್ಳಿ ಗ್ರಾಮಸ್ಥರು ಗಲಾಟೆ ಮಾಡಿದ್ದಾರೆ’ ಎಂದು ಮಾದನಬಾವಿ ಗ್ರಾಮಸ್ಥರು ಆರೋಪಿಸಿದ್ದಾರೆ.</p>.<p>ಮಾದನಬಾವಿ ಗ್ರಾಮಸ್ಥರು ಗ್ರಾಮದ ಮೂಲಕ ತೆರಳುವಾಗ ಗಲಾಟೆ ಮಾಡಿದರು ಎಂದು ಬಸವನಹಳ್ಳಿ ಗ್ರಾಮಸ್ಥರು ಪ್ರತ್ಯಾರೋಪ ಮಾಡಿದ್ದಾರೆ.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್, ಹೆಚ್ಚುವರಿ ಎಸ್ಪಿ ರಾಮಗೊಂಡ ಬಿ. ಬಸರಂಗಿ, ಚನ್ನಗಿರಿ ಸಿಪಿಐ ಮಧು, ಹರಿಹರ ಸಿಪಿಐ ಸತೀಶ, ಹೊನ್ನಾಳಿ ಎಸ್ಐ ಬಸವನಗೌಡ, ನ್ಯಾಮತಿ ಎಸ್ಐ ಪಿ.ಎಸ್. ರಮೇಶ, ಹದಡಿ ಎಸ್ಐ ರೂಪಾ ತೆಂಬದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>