<p><strong>ಹರಿಹರ</strong>: ಆಟೊ ಚಾಲಕರಿಗೆ ಕೋವಿಡ್ ಸಂಕಷ್ಟ ಕಾಲದಲ್ಲಿ ನೆರವು ನೀಡುವ ಸದುದ್ದೇಶದಿಂದ ಕಿಟ್ ವಿತರಿಸಲಾಗುತ್ತಿದೆ ಎಂದು ಶಾಸಕ ಎಸ್. ರಾಮಪ್ಪ ತಿಳಿಸಿದರು.</p>.<p>ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಶಾಸಕ ಎಸ್. ರಾಮಪ್ಪ ಅವರು ಆಟೊ ಚಾಲಕರಿಗೆ ದಿನಸಿ ಕಿಟ್ ವಿತರಿಸಿ ಮಾತನಾಡಿದರು.</p>.<p>‘ಪರಿಹಾರ ಹಾಗೂ ಅನುದಾನ ವಿತರಣೆಯಲ್ಲಿ ಸರ್ಕಾರ ಹಾಗೂ ಜಿಲ್ಲಾಡಳಿತ ನನ್ನ ಕ್ಷೇತ್ರದಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ. ನೆರೆ ಹಾಗೂ ಅತಿವೃಷ್ಟಿ ಹಾನಿಯ ಪರಿಹಾರ ವಿತರಣೆಯಲ್ಲಿ ತಾರತಮ್ಯವಾದಲ್ಲಿ ಹೋರಾಟ ನಡೆಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.</p>.<p>ಕೋವಿಡ್ 3ನೇ ಅಲೆಯ ಭೀತಿ ರಾಜ್ಯವನ್ನು ಕಾಡುತ್ತಿದೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಅಗತ್ಯ ವ್ಯವಸ್ಥೆ ಒದಗಿಸಬೇಕು. ಕಳೆದ ಬಾರಿ ಜಿಲ್ಲಾಡಳಿತ ಕೋವಿಡ್ನಿಂದ ಸಾವನ್ನಪ್ಪಿದವರ ಸಂಖ್ಯೆಯನ್ನು ಮುಚ್ಚಿಡುವ ಮೂಲಕ, ಬಡ ಕುಟುಂಬಗಳಿಗೆ ಪರಿಹಾರ ದೊರೆಯದಂತೆ ಮಾಡಿದೆ ಎಂದು ಆರೋಪಿಸಿದರು.</p>.<p>ನಗರಸಭೆ ಉಪಾಧ್ಯಕ್ಷ ಎಂ.ಎಸ್. ಬಾಬುಲಾಲ್, ಬ್ಲಾಕ್ ಕಾಂಗ್ರೆಸ್ ನಗರ ಘಟಕ ಅಧ್ಯಕ್ಷ ಎಲ್.ಬಿ. ಹನುಮಂತಪ್ಪ, ಗ್ರಾಮಾಂತರ ಘಟಕದ ಅಧ್ಯಕ್ಷ ಅಬಿದ್ ಅಲಿ, ಆಟೊ ಚಾಲಕರ ಸಂಘದ ಪದಾಧಿಕಾರಿಗಳು ಹಾಗೂ ಚಾಲಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಿಹರ</strong>: ಆಟೊ ಚಾಲಕರಿಗೆ ಕೋವಿಡ್ ಸಂಕಷ್ಟ ಕಾಲದಲ್ಲಿ ನೆರವು ನೀಡುವ ಸದುದ್ದೇಶದಿಂದ ಕಿಟ್ ವಿತರಿಸಲಾಗುತ್ತಿದೆ ಎಂದು ಶಾಸಕ ಎಸ್. ರಾಮಪ್ಪ ತಿಳಿಸಿದರು.</p>.<p>ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಶಾಸಕ ಎಸ್. ರಾಮಪ್ಪ ಅವರು ಆಟೊ ಚಾಲಕರಿಗೆ ದಿನಸಿ ಕಿಟ್ ವಿತರಿಸಿ ಮಾತನಾಡಿದರು.</p>.<p>‘ಪರಿಹಾರ ಹಾಗೂ ಅನುದಾನ ವಿತರಣೆಯಲ್ಲಿ ಸರ್ಕಾರ ಹಾಗೂ ಜಿಲ್ಲಾಡಳಿತ ನನ್ನ ಕ್ಷೇತ್ರದಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ. ನೆರೆ ಹಾಗೂ ಅತಿವೃಷ್ಟಿ ಹಾನಿಯ ಪರಿಹಾರ ವಿತರಣೆಯಲ್ಲಿ ತಾರತಮ್ಯವಾದಲ್ಲಿ ಹೋರಾಟ ನಡೆಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.</p>.<p>ಕೋವಿಡ್ 3ನೇ ಅಲೆಯ ಭೀತಿ ರಾಜ್ಯವನ್ನು ಕಾಡುತ್ತಿದೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಅಗತ್ಯ ವ್ಯವಸ್ಥೆ ಒದಗಿಸಬೇಕು. ಕಳೆದ ಬಾರಿ ಜಿಲ್ಲಾಡಳಿತ ಕೋವಿಡ್ನಿಂದ ಸಾವನ್ನಪ್ಪಿದವರ ಸಂಖ್ಯೆಯನ್ನು ಮುಚ್ಚಿಡುವ ಮೂಲಕ, ಬಡ ಕುಟುಂಬಗಳಿಗೆ ಪರಿಹಾರ ದೊರೆಯದಂತೆ ಮಾಡಿದೆ ಎಂದು ಆರೋಪಿಸಿದರು.</p>.<p>ನಗರಸಭೆ ಉಪಾಧ್ಯಕ್ಷ ಎಂ.ಎಸ್. ಬಾಬುಲಾಲ್, ಬ್ಲಾಕ್ ಕಾಂಗ್ರೆಸ್ ನಗರ ಘಟಕ ಅಧ್ಯಕ್ಷ ಎಲ್.ಬಿ. ಹನುಮಂತಪ್ಪ, ಗ್ರಾಮಾಂತರ ಘಟಕದ ಅಧ್ಯಕ್ಷ ಅಬಿದ್ ಅಲಿ, ಆಟೊ ಚಾಲಕರ ಸಂಘದ ಪದಾಧಿಕಾರಿಗಳು ಹಾಗೂ ಚಾಲಕರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>