<p><strong>ಹೊನ್ನಾಳಿ</strong>: ‘ಮುಖ್ಯಮಂತ್ರಿ ಅವರ ಬದಲಾವಣೆಯ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ’ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ತಿಳಿಸಿದರು.</p>.<p>ಸದ್ಯ ಸಿಎಂ ಖುರ್ಚಿ ಖಾಲಿ ಇಲ್ಲ. ಯಡಿಯೂರಪ್ಪ ಅವರು ರಾಜೀನಾಮೆ ಕೊಟ್ಟರೆ ತಾನೆ ಈ ಎಲ್ಲ ಪ್ರಶ್ನೆ.<br />ದೆಹಲಿಯಲ್ಲಿ ಎರಡು ದಿನಗಳ<br />ಕಾಲ ಇದ್ದು ರಾಜ್ಯದ ಉಸ್ತುವಾರಿ ಅರುಣ್ ಸಿಂಗ್, ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪ್ರಹ್ಲಾದ್ ಜೋಷಿ ಸೇರಿ ಕೆಲವು ನಾಯಕರನ್ನು ಭೇಟಿ ಮಾಡಿ ಪ್ರಸ್ತುತ<br />ವಿದ್ಯಾಮಾನಗಳ ಕುರಿತು ಚರ್ಚಿಸಲಾಯಿತು. ನಾಯಕತ್ವ ಬದಲಾವಣೆ ಕುರಿತು ಯಾವುದೇ ಚರ್ಚೆಯಾಗಿಲ್ಲ ಎಂದು ತಿಳಿಸಿದರು.</p>.<p>‘ಮುಖ್ಯಮಂತ್ರಿ ಹಾಗೂ ರಾಷ್ಟ್ರೀಯ ನಾಯಕರ ನಡುವೆ ಏನು ತೀರ್ಮಾನ ಆಗಿದೆಯೋ ನನಗೆ ಗೊತ್ತಿಲ್ಲ. ರಾಷ್ಟ್ರೀಯ ನಾಯಕರು ಏನು ತೀರ್ಮಾನ ಕೈಗೊಳ್ಳುತ್ತಾರೋ ಅದಕ್ಕೆ ನಾನು ಬದ್ಧನಾಗಿರುತ್ತೇನೆ’ ಎಂದು ರೇಣುಕಾಚಾರ್ಯ ಹೇಳಿದರು.</p>.<p class="Subhead"><strong>ಸಚಿವ ಸ್ಥಾನದ ಆಕಾಂಕ್ಷಿಯಲ್ಲ:</strong>‘ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಹಾಗಂತ ನನಗೆ ಸಾಮರ್ಥ್ಯ ಇಲ್ಲ ಎಂದಲ್ಲ. ನನಗೂ ಸಚಿವ ಸ್ಥಾನ ನಿಭಾಯಿಸುವ ಸಾಮರ್ಥ್ಯವಿದೆ. ರಾಷ್ಟ್ರೀಯ ನಾಯಕರು ಏನು ತೀರ್ಮಾನ ಮಾಡುತ್ತಾರೋ ಕಾದು ನೋಡೋಣ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾಳಿ</strong>: ‘ಮುಖ್ಯಮಂತ್ರಿ ಅವರ ಬದಲಾವಣೆಯ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ’ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ತಿಳಿಸಿದರು.</p>.<p>ಸದ್ಯ ಸಿಎಂ ಖುರ್ಚಿ ಖಾಲಿ ಇಲ್ಲ. ಯಡಿಯೂರಪ್ಪ ಅವರು ರಾಜೀನಾಮೆ ಕೊಟ್ಟರೆ ತಾನೆ ಈ ಎಲ್ಲ ಪ್ರಶ್ನೆ.<br />ದೆಹಲಿಯಲ್ಲಿ ಎರಡು ದಿನಗಳ<br />ಕಾಲ ಇದ್ದು ರಾಜ್ಯದ ಉಸ್ತುವಾರಿ ಅರುಣ್ ಸಿಂಗ್, ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಪ್ರಹ್ಲಾದ್ ಜೋಷಿ ಸೇರಿ ಕೆಲವು ನಾಯಕರನ್ನು ಭೇಟಿ ಮಾಡಿ ಪ್ರಸ್ತುತ<br />ವಿದ್ಯಾಮಾನಗಳ ಕುರಿತು ಚರ್ಚಿಸಲಾಯಿತು. ನಾಯಕತ್ವ ಬದಲಾವಣೆ ಕುರಿತು ಯಾವುದೇ ಚರ್ಚೆಯಾಗಿಲ್ಲ ಎಂದು ತಿಳಿಸಿದರು.</p>.<p>‘ಮುಖ್ಯಮಂತ್ರಿ ಹಾಗೂ ರಾಷ್ಟ್ರೀಯ ನಾಯಕರ ನಡುವೆ ಏನು ತೀರ್ಮಾನ ಆಗಿದೆಯೋ ನನಗೆ ಗೊತ್ತಿಲ್ಲ. ರಾಷ್ಟ್ರೀಯ ನಾಯಕರು ಏನು ತೀರ್ಮಾನ ಕೈಗೊಳ್ಳುತ್ತಾರೋ ಅದಕ್ಕೆ ನಾನು ಬದ್ಧನಾಗಿರುತ್ತೇನೆ’ ಎಂದು ರೇಣುಕಾಚಾರ್ಯ ಹೇಳಿದರು.</p>.<p class="Subhead"><strong>ಸಚಿವ ಸ್ಥಾನದ ಆಕಾಂಕ್ಷಿಯಲ್ಲ:</strong>‘ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಹಾಗಂತ ನನಗೆ ಸಾಮರ್ಥ್ಯ ಇಲ್ಲ ಎಂದಲ್ಲ. ನನಗೂ ಸಚಿವ ಸ್ಥಾನ ನಿಭಾಯಿಸುವ ಸಾಮರ್ಥ್ಯವಿದೆ. ರಾಷ್ಟ್ರೀಯ ನಾಯಕರು ಏನು ತೀರ್ಮಾನ ಮಾಡುತ್ತಾರೋ ಕಾದು ನೋಡೋಣ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>