ವೀರಗಂಗಾಧರ ಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆದ ಸುದೀರ್ಘ ಸಭೆಯಲ್ಲಿ ಪರಸ್ಪರ ವಾಗ್ವಾದ ನಡೆಯಿತು. ಎಲ್ಲರ ಸಮ್ಮುಖದಲ್ಲಿಯೇ ಜಾತಿಗೆ ನಾಲ್ಕು ಜನರಂತೆ
ಮುಖಂಡರ ತಂಡ ರಚಿಸಿ, ಗದ್ದಲ ಆಗದಂತೆ ಎಚ್ಚರಿಕೆ ವಹಿಸಬೇಕು. ಯಾವುದೇ ಯುವಕರು ಜಗಳ ಮಾಡಿದರೆ, ಅವರಿಗೆ ತಿಳಿವಳಿಕೆ ಹೇಳಬೇಕು. ಇಲ್ಲದಿದ್ದರೆ ಪೊಲೀಸರಿಗೆ ದೂರು ಸಲ್ಲಿಸಲು ಸಭೆ ನಿರ್ಧರಿಸಿತು ಎಂದು ತಿಳಿದುಬಂದಿದೆ. ಠಾಣೆಯಲ್ಲಿ ಪ್ರಕರಣ ದಾಖಲಾಗಿಲ್ಲ.