<p><strong>ಹರಪನಹಳ್ಳಿ: </strong>ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರ ವಿರುದ್ಧ ಸೋಮವಾರ ನಡೆದ ಅವಿಶ್ವಾಸ ಗೊತ್ತುವಳಿ ವಿಫಲವಾಗಿದ್ದು, ಅಶೋಕ ಗೌಡ ಅಧ್ಯಕ್ಷರಾಗಿ ಮುಂದುವರಿದಿದ್ದಾರೆ.</p>.<p>ಎಪಿಎಂಸಿ ಒಟ್ಟು 15 ಸದಸ್ಯ ಬಲ ಹೊಂದಿದೆ. ಇವರ ಪೈಕಿ ಅಧ್ಯಕ್ಷ ಅಶೋಕಗೌಡ ವಿರುದ್ಧ ಅವಿಶ್ವಾಸ ಗೊತ್ತುವಳಿ ಸಭೆ ಕರೆಯುವಂತೆ 9 ಜನ ನಿರ್ದೇಶಕರು ಮನವಿ ಮಾಡಿದ್ದರು. ಈ ಗುಂಪಿನ 8 ಜನ ನಿರ್ದೇಶಕರು ಸೇರಿ 15 ಜನರು ಸಭೆಗೆ ಗೈರಾಗಿದ್ದರಿಂದ ಅವಿಶ್ವಾಸ ಗೊತ್ತುವಳಿಗೆ ಸೋಲುಂಟಾಯಿತು. ಇದರಿಂದ ಬೇಸತ್ತ ನಿರ್ದೇಶಕ ಚಂದ್ರಶೇಖರಪ್ಪ ವೈಯಕ್ತಿಕ ಕಾರಣ ಹೇಳಿ ತಮ್ಮ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.</p>.<p>14 ಜನ ನಿರ್ದೇಶಕರು ಕಾಂಗ್ರೆಸ್ ಬೆಂಬಲ ಪಡೆದು ಗೆಲುವು ಪಡೆದಿದ್ದಾರೆ. ಬಿಜೆಪಿ ಬೆಂಬಲಿತ ನಿರ್ದೇಶಕರು ಒಬ್ಬರು ಮಾತ್ರ ಇದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿನ ಆಂತರಿಕ ಭಿನ್ನಮತದಿಂದಾಗಿ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ವಿಫಲವಾಗಿದೆ. ಆಡಳಿತ ಮಂಡಳಿಯ ಉಳಿದ ಐದು ತಿಂಗಳ ಅವಧಿಯನ್ನು ಅಶೋಕಗೌಡ ಅವರೇ ಮುಂದುವರಿಸಲಿದ್ದಾರೆ.</p>.<p>ತಹಶೀಲ್ದಾರ್ ಎಲ್.ಎಂ. ನಂದೀಶ ಅವರು ಮಾತನಾಡಿ, ‘ಸಭೆಗೆ ಯಾವೊಬ್ಬ ಸದಸ್ಯರೂ ಹಾಜರಾಗದ ಕಾರಣ ಅವಿಶ್ವಾಸ ಗೊತ್ತುವಳಿಗೆ ಸೋಲುಂಟಾಗಿದೆ’ ಎಂದು ತಿಳಿಸಿದರು.</p>.<p>ಅಧ್ಯಕ್ಷ ಅಶೋಕಗೌಡ ಮಾತನಾಡಿ, ‘ಅವಿಶ್ವಾಸ ಗೊತ್ತುವಳಿ ಸಭೆ ವಿಫಲವಾಗುವ ಮೂಲಕ ಮತ್ತೆ ನನಗೇ ಜಯ ದೊರಕಿದೆ. ಎಪಿಎಂಸಿ ಸರ್ವಾಂಗೀಣ ಪ್ರಗತಿಗೆ ಸರ್ವರ ಸಹಕಾರ ಬಯಸುತ್ತೇನೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಪನಹಳ್ಳಿ: </strong>ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರ ವಿರುದ್ಧ ಸೋಮವಾರ ನಡೆದ ಅವಿಶ್ವಾಸ ಗೊತ್ತುವಳಿ ವಿಫಲವಾಗಿದ್ದು, ಅಶೋಕ ಗೌಡ ಅಧ್ಯಕ್ಷರಾಗಿ ಮುಂದುವರಿದಿದ್ದಾರೆ.</p>.<p>ಎಪಿಎಂಸಿ ಒಟ್ಟು 15 ಸದಸ್ಯ ಬಲ ಹೊಂದಿದೆ. ಇವರ ಪೈಕಿ ಅಧ್ಯಕ್ಷ ಅಶೋಕಗೌಡ ವಿರುದ್ಧ ಅವಿಶ್ವಾಸ ಗೊತ್ತುವಳಿ ಸಭೆ ಕರೆಯುವಂತೆ 9 ಜನ ನಿರ್ದೇಶಕರು ಮನವಿ ಮಾಡಿದ್ದರು. ಈ ಗುಂಪಿನ 8 ಜನ ನಿರ್ದೇಶಕರು ಸೇರಿ 15 ಜನರು ಸಭೆಗೆ ಗೈರಾಗಿದ್ದರಿಂದ ಅವಿಶ್ವಾಸ ಗೊತ್ತುವಳಿಗೆ ಸೋಲುಂಟಾಯಿತು. ಇದರಿಂದ ಬೇಸತ್ತ ನಿರ್ದೇಶಕ ಚಂದ್ರಶೇಖರಪ್ಪ ವೈಯಕ್ತಿಕ ಕಾರಣ ಹೇಳಿ ತಮ್ಮ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.</p>.<p>14 ಜನ ನಿರ್ದೇಶಕರು ಕಾಂಗ್ರೆಸ್ ಬೆಂಬಲ ಪಡೆದು ಗೆಲುವು ಪಡೆದಿದ್ದಾರೆ. ಬಿಜೆಪಿ ಬೆಂಬಲಿತ ನಿರ್ದೇಶಕರು ಒಬ್ಬರು ಮಾತ್ರ ಇದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿನ ಆಂತರಿಕ ಭಿನ್ನಮತದಿಂದಾಗಿ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ವಿಫಲವಾಗಿದೆ. ಆಡಳಿತ ಮಂಡಳಿಯ ಉಳಿದ ಐದು ತಿಂಗಳ ಅವಧಿಯನ್ನು ಅಶೋಕಗೌಡ ಅವರೇ ಮುಂದುವರಿಸಲಿದ್ದಾರೆ.</p>.<p>ತಹಶೀಲ್ದಾರ್ ಎಲ್.ಎಂ. ನಂದೀಶ ಅವರು ಮಾತನಾಡಿ, ‘ಸಭೆಗೆ ಯಾವೊಬ್ಬ ಸದಸ್ಯರೂ ಹಾಜರಾಗದ ಕಾರಣ ಅವಿಶ್ವಾಸ ಗೊತ್ತುವಳಿಗೆ ಸೋಲುಂಟಾಗಿದೆ’ ಎಂದು ತಿಳಿಸಿದರು.</p>.<p>ಅಧ್ಯಕ್ಷ ಅಶೋಕಗೌಡ ಮಾತನಾಡಿ, ‘ಅವಿಶ್ವಾಸ ಗೊತ್ತುವಳಿ ಸಭೆ ವಿಫಲವಾಗುವ ಮೂಲಕ ಮತ್ತೆ ನನಗೇ ಜಯ ದೊರಕಿದೆ. ಎಪಿಎಂಸಿ ಸರ್ವಾಂಗೀಣ ಪ್ರಗತಿಗೆ ಸರ್ವರ ಸಹಕಾರ ಬಯಸುತ್ತೇನೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>