<p>ಹರಿಹರ: ತಾಲ್ಲೂಕಿನ ಕೊಕ್ಕನೂರು ಗ್ರಾಮದ ಹಿಂದೂ ರುದ್ರಭೂಮಿ ಜಾಗವನ್ನು ಕೆಲ ಪಟ್ಟಭದ್ರ ಹಿತಾಸಕ್ತಿಗಳು ಒತ್ತುವರಿ ಮಾಡಿದ್ದು, ಜಮೀನಿನ ಸರ್ವೆ ನಡೆಸಿ, ಹದ್ದುಬಸ್ತು ಮಾಡಬೇಕು ಎಂದು ಆಗ್ರಹಿಸಿ ಕೊಕ್ಕನೂರು ಗ್ರಾಮಸ್ಥರು ಶಾಸಕ ಎಸ್. ರಾಮಪ್ಪ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.</p>.<p>ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎ.ಕೆ. ಬಸವರಾಜಪ್ಪ, ‘ಗ್ರಾಮದ ಸರ್ವೆ ನಂ. 33ರಲ್ಲಿ ಪರಿಶಿಷ್ಟ ಜಾತಿಯವರ ಅಂತ್ಯಸಂಸ್ಕಾರಕ್ಕಾಗಿ 2 ಎಕರೆ ರುದ್ರಭೂಮಿ ನಿಗದಿಪಡಿಸ<br />ಲಾಗಿದೆ. ಜಮೀನಿನ ದಾಖಲೆಗಳಿದ್ದರೂ, ಕೆಲವರು ಜಮೀನನ್ನು ಒತ್ತುವರಿ ಮಾಡಿದ್ದಾರೆ’ ಎಂದು ದೂರಿದರು.</p>.<p>ಪ್ರಸ್ತುತ ಗ್ರಾಮದಲ್ಲಿ ಮರಣ ಸಂಭವಿಸಿದರೆ ಶವಸಂಸ್ಕಾರಕ್ಕೆ ಜಾಗ ಇಲ್ಲ. ಈ ಹಿಂದೆ ಹಳ್ಳದ ದಂಡೆ ಮತ್ತು ಚಾನಲ್ ಪಕ್ಕದಲ್ಲಿ ಶವಸಂಸ್ಕಾರ ಮಾಡಲಾಗುತ್ತಿತ್ತು. ಆದರೆ, ಸೇತುವೆ ಕಾಮಗಾರಿ ಚಾಲ್ತಿಯಲ್ಲಿರುವ ಕಾರಣ ಅಂತ್ಯಸಂಸ್ಕಾರ ನಡೆಸಲು ಸ್ಥಳವಿಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಅಳಲು ತೋಡಿಕೊಂಡರು.</p>.<p>ಗ್ರಾಮಸ್ಥರಾದ ನಾಗರಾಜ, ದೊಡ್ಡ ಕರಿಯಪ್ಪ, ಹನುಮಂತಪ್ಪ, ಮೈಲಪ್ಪ, ಹನುಮಂತಪ್ಪ, ಎ.ಕೆ. ನಾಗಪ್ಪ, ಹೇಮಪ್ಪ, ವಿಶ್ವನಾಥ, ಎ.ಕೆ. ಹಾಲಪ್ಪ, ಕಿರಣ್, ಜಯಪ್ಪ, ಭರಮಪ್ಪ, ಅಣ್ಣಪ್ಪ, ಪವನ್, ಕರಿಬಸಪ್ಪ, ಹುಚ್ಚಪ್ಪರ ಹನುಮಂತಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹರಿಹರ: ತಾಲ್ಲೂಕಿನ ಕೊಕ್ಕನೂರು ಗ್ರಾಮದ ಹಿಂದೂ ರುದ್ರಭೂಮಿ ಜಾಗವನ್ನು ಕೆಲ ಪಟ್ಟಭದ್ರ ಹಿತಾಸಕ್ತಿಗಳು ಒತ್ತುವರಿ ಮಾಡಿದ್ದು, ಜಮೀನಿನ ಸರ್ವೆ ನಡೆಸಿ, ಹದ್ದುಬಸ್ತು ಮಾಡಬೇಕು ಎಂದು ಆಗ್ರಹಿಸಿ ಕೊಕ್ಕನೂರು ಗ್ರಾಮಸ್ಥರು ಶಾಸಕ ಎಸ್. ರಾಮಪ್ಪ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.</p>.<p>ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎ.ಕೆ. ಬಸವರಾಜಪ್ಪ, ‘ಗ್ರಾಮದ ಸರ್ವೆ ನಂ. 33ರಲ್ಲಿ ಪರಿಶಿಷ್ಟ ಜಾತಿಯವರ ಅಂತ್ಯಸಂಸ್ಕಾರಕ್ಕಾಗಿ 2 ಎಕರೆ ರುದ್ರಭೂಮಿ ನಿಗದಿಪಡಿಸ<br />ಲಾಗಿದೆ. ಜಮೀನಿನ ದಾಖಲೆಗಳಿದ್ದರೂ, ಕೆಲವರು ಜಮೀನನ್ನು ಒತ್ತುವರಿ ಮಾಡಿದ್ದಾರೆ’ ಎಂದು ದೂರಿದರು.</p>.<p>ಪ್ರಸ್ತುತ ಗ್ರಾಮದಲ್ಲಿ ಮರಣ ಸಂಭವಿಸಿದರೆ ಶವಸಂಸ್ಕಾರಕ್ಕೆ ಜಾಗ ಇಲ್ಲ. ಈ ಹಿಂದೆ ಹಳ್ಳದ ದಂಡೆ ಮತ್ತು ಚಾನಲ್ ಪಕ್ಕದಲ್ಲಿ ಶವಸಂಸ್ಕಾರ ಮಾಡಲಾಗುತ್ತಿತ್ತು. ಆದರೆ, ಸೇತುವೆ ಕಾಮಗಾರಿ ಚಾಲ್ತಿಯಲ್ಲಿರುವ ಕಾರಣ ಅಂತ್ಯಸಂಸ್ಕಾರ ನಡೆಸಲು ಸ್ಥಳವಿಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಅಳಲು ತೋಡಿಕೊಂಡರು.</p>.<p>ಗ್ರಾಮಸ್ಥರಾದ ನಾಗರಾಜ, ದೊಡ್ಡ ಕರಿಯಪ್ಪ, ಹನುಮಂತಪ್ಪ, ಮೈಲಪ್ಪ, ಹನುಮಂತಪ್ಪ, ಎ.ಕೆ. ನಾಗಪ್ಪ, ಹೇಮಪ್ಪ, ವಿಶ್ವನಾಥ, ಎ.ಕೆ. ಹಾಲಪ್ಪ, ಕಿರಣ್, ಜಯಪ್ಪ, ಭರಮಪ್ಪ, ಅಣ್ಣಪ್ಪ, ಪವನ್, ಕರಿಬಸಪ್ಪ, ಹುಚ್ಚಪ್ಪರ ಹನುಮಂತಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>