2017ರಲ್ಲಿ ಈ ಗ್ರಾಮದಲ್ಲಿ ಕರಡಿಗಳ ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. ಕಾಡು ಪ್ರಾಣಿಗಳಿಂದ ರೈತರನ್ನು ರಕ್ಷಿಸಿ ಎಂದು ಅರಣ್ಯ ಇಲಾಖೆಗೆ ಮನವಿ ಮಾಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಕಾಡು ಪ್ರಾಣಿಗಳು ಗ್ರಾಮದೊಳಗೆ ಬಾರದಂತೆ ಕಂದಕವನ್ನು ನಿರ್ಮಿಸಿದ್ದರೂ
ಪ್ರಯೋಜನವಾಗಿಲ್ಲ. ಕಾಡಂಚಿನ ಗ್ರಾಮದೊಳಗೆ ಕಾಡು ಪ್ರಾಣಿಗಳು ಪ್ರವೇಶಿಸದಂತೆ ತಡೆಯಲು ಶಾಶ್ವತವಾಗಿ ಸೋಲಾರ್ ತಂತಿ ಬೇಲಿ ನಿರ್ಮಿಸಿ, ಜನರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕು ಎಂದು ಗ್ರಾಮದ ಯುವ ಮುಖಂಡ ವಿಜಯಕುಮಾರ್ ತಳವಾರ್ ಒತ್ತಾಯಿಸಿದರು.