<p><strong>ಮಲೇಬೆನ್ನೂರು: ಕ್ಷೇತ್ರದ </strong>ಅಭಿವೃದ್ಧಿಗಿಂತ ಸ್ವಯಂ ಅಭಿವೃದ್ಧಿ ಹೊಂದಿರುವ ಸಂಸದ ಜಿ.ಎಂ ಸಿದ್ದೇಶ್ವರಗೆ ಕ್ಷೇತ್ರದ ಕುರಿತು ಆಳವಾದ ಅರಿವು ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಟೀಕಿಸಿದರು.</p>.<p>ಪಟ್ಟಣದ ಮುಖ್ಯವೃತ್ತದಲ್ಲಿ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರದಲ್ಲಿ ತಮ್ಮ ಪತ್ನಿ ಡಾ.ಪ್ರಭಾ ಪರವಾಗಿ ಮತಯಾಚಿಸಿ ಅವರು ಮಾತನಾಡಿದರು.</p>.<p>ಸಂಸದರು ಗುಟ್ಕಾ ತಯಾರಿಸುವ ಕಾರ್ಖಾನೆಗಳನ್ನು ಸ್ಥಾಪಿಸುವ ಮೂಲಕ ಜನರು ರೋಗಕ್ಕೆ ತುತ್ತಾಗಲು ಕಾರಣಕರ್ತರಾಗಿದ್ದಾರೆ. ರೋಗಕ್ಕೆ ತುತ್ತಾಗುವವರಿಗೆ ಚಿಕಿತ್ಸೆ ನೀಡಲು ಡಾ.ಪ್ರಭಾ ಬರುತ್ತಿದ್ದಾರೆ ಎಂದು ಕಿಚಾಯಿಸಿದರು.</p>.<p>ಪಟ್ಟಣದಲ್ಲಿ ಸಂತೆ ಮಾರುಕಟ್ಟೆ, ಸಿಸಿ ರಸ್ತೆ ಕಾಮಗಾರಿ ಹಲವು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು, ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿ ಗೆಲ್ಲಿಸಿ ಎಂದು ಕೋರಿದರು.</p>.<p>ಉದ್ಯಮಿ ಬಿ.ಎಂ. ವಾಗೀಶ್ ಸ್ವಾಮಿ, ಕಾಂಗ್ರೆಸ್ ಮುಖಂಡ ನಂದಿಗಾವಿ ಶ್ರೀನಿವಾಸ್, ಮಾಜಿ ಶಾಸಕ ಎಸ್. ರಾಮಪ್ಪ ಮಾತನಾಡಿದರು.</p>.<p>ಪುರಸಭಾ ಮಾಜಿ ಸದಸ್ಯ ಸುಬ್ಬಿ ರಾಜಪ್ಪ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರು ರೋಡ್ ಶೋ ನಡೆಸಿದರು.</p>.<p>ಮಾಜಿ ಶಾಸಕಿ ಜಲಜಾನಾಯ್ಕ, ಎಚ್.ಎಸ್. ನಾಗರಾಜ್, ಡಾ.ಚಂದ್ರಶೇಖರ್, ಪುರಸಭಾ ಸದಸ್ಯ ನಯಾಜ್, ಶ್ರೀಕಾಂತ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಲೇಬೆನ್ನೂರು: ಕ್ಷೇತ್ರದ </strong>ಅಭಿವೃದ್ಧಿಗಿಂತ ಸ್ವಯಂ ಅಭಿವೃದ್ಧಿ ಹೊಂದಿರುವ ಸಂಸದ ಜಿ.ಎಂ ಸಿದ್ದೇಶ್ವರಗೆ ಕ್ಷೇತ್ರದ ಕುರಿತು ಆಳವಾದ ಅರಿವು ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಟೀಕಿಸಿದರು.</p>.<p>ಪಟ್ಟಣದ ಮುಖ್ಯವೃತ್ತದಲ್ಲಿ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರದಲ್ಲಿ ತಮ್ಮ ಪತ್ನಿ ಡಾ.ಪ್ರಭಾ ಪರವಾಗಿ ಮತಯಾಚಿಸಿ ಅವರು ಮಾತನಾಡಿದರು.</p>.<p>ಸಂಸದರು ಗುಟ್ಕಾ ತಯಾರಿಸುವ ಕಾರ್ಖಾನೆಗಳನ್ನು ಸ್ಥಾಪಿಸುವ ಮೂಲಕ ಜನರು ರೋಗಕ್ಕೆ ತುತ್ತಾಗಲು ಕಾರಣಕರ್ತರಾಗಿದ್ದಾರೆ. ರೋಗಕ್ಕೆ ತುತ್ತಾಗುವವರಿಗೆ ಚಿಕಿತ್ಸೆ ನೀಡಲು ಡಾ.ಪ್ರಭಾ ಬರುತ್ತಿದ್ದಾರೆ ಎಂದು ಕಿಚಾಯಿಸಿದರು.</p>.<p>ಪಟ್ಟಣದಲ್ಲಿ ಸಂತೆ ಮಾರುಕಟ್ಟೆ, ಸಿಸಿ ರಸ್ತೆ ಕಾಮಗಾರಿ ಹಲವು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು, ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿ ಗೆಲ್ಲಿಸಿ ಎಂದು ಕೋರಿದರು.</p>.<p>ಉದ್ಯಮಿ ಬಿ.ಎಂ. ವಾಗೀಶ್ ಸ್ವಾಮಿ, ಕಾಂಗ್ರೆಸ್ ಮುಖಂಡ ನಂದಿಗಾವಿ ಶ್ರೀನಿವಾಸ್, ಮಾಜಿ ಶಾಸಕ ಎಸ್. ರಾಮಪ್ಪ ಮಾತನಾಡಿದರು.</p>.<p>ಪುರಸಭಾ ಮಾಜಿ ಸದಸ್ಯ ಸುಬ್ಬಿ ರಾಜಪ್ಪ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರು ರೋಡ್ ಶೋ ನಡೆಸಿದರು.</p>.<p>ಮಾಜಿ ಶಾಸಕಿ ಜಲಜಾನಾಯ್ಕ, ಎಚ್.ಎಸ್. ನಾಗರಾಜ್, ಡಾ.ಚಂದ್ರಶೇಖರ್, ಪುರಸಭಾ ಸದಸ್ಯ ನಯಾಜ್, ಶ್ರೀಕಾಂತ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>