<p>ಚನ್ನಗಿರಿ: ‘ತಾಲ್ಲೂಕಿನ ಸಮಸ್ಯೆಗಳ ಬಗ್ಗೆ ಸುದ್ದಿ, ವಿಶೇಷ ವರದಿಗಳ ಮೂಲಕ ಬೆಳಕು ಚೆಲ್ಲುವ ದಿನಪತ್ರಿಕೆಗಳು ತಾಲ್ಲೂಕಿನ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆ ನೀಡುತ್ತಾ ಬಂದಿವೆ’ ಎಂದು ಕನ್ನಡ ನಾಡು ಹಿತ ರಕ್ಷಣಾ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಕೆ.ವಿ. ಕೃಷ್ಣಮೂರ್ತಿ ತಿಳಿಸಿದರು.</p>.<p>ಪಟ್ಟಣದ ಕನ್ನಡ ನಾಡು ಹಿತ ರಕ್ಷಣಾ ಸಮಿತಿ ಕಾರ್ಯಾಲಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪತ್ರಿಕಾ ಹಾಗೂ ಆರೋಗ್ಯ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ದಿನಪತ್ರಿಕೆಗಳು ಇಲ್ಲದೇ ಹೋಗಿದ್ದರೆ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿರಲಿಲ್ಲ. ಆಡಳಿತ ಯಂತ್ರವನ್ನು ಕ್ರಿಯಾಶೀಲವಾಗಿ ಇಡುವಲ್ಲಿ ಪತ್ರಿಕೆಗಳ ಪಾತ್ರ ಮಹತ್ತರವಾದುದು ಎಂದು ಅವರು ಹೇಳಿದರು.</p>.<p>ಪ್ರತಿಯೊಬ್ಬರೂ ದುಶ್ಚಟಗಳಿಂದ ದೂರವಿದ್ದು, ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು. ಮನುಷ್ಯ ಆರೋಗ್ಯವಂತನಾಗಿದ್ದರೆ ಎಂತಹ ಕಠಿಣ ಕಾರ್ಯವನ್ನಾದರೂ ಮಾಡಲು ಸಾಧ್ಯವಾಗುತ್ತದೆ. ಕನ್ನಡ ನಾಡು ಹಿತ ರಕ್ಷಣಾ ಸಮಿತಿ ಕೇವಲ ಕನ್ನಡ ನೆಲ, ಜಲ, ಭಾಷೆಯ ಬಗ್ಗೆ ಹೋರಾಟ ನಡೆಸುತ್ತಿಲ್ಲ. ಸಮಾಜಮುಖಿಯಾಗಿಯೂ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿದರು.</p>.<p>ತಾಲ್ಲೂಕು ಘಟಕದ ಅಧ್ಯಕ್ಷ ಎಂ. ಅಣ್ಣೋಜಿರಾವ್ ಪವಾರ್, ಗೌರವಾಧ್ಯಕ್ಷ ಸರ್ದಾರ್ ಅಹಮ್ಮದ್, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಇನಾಯತ್, ಮಹಿಳಾ ಘಟಕದ ಅಧ್ಯಕ್ಷೆ ಕೆ. ಲಕ್ಷ್ಮೀ, ಗೌರವಾಧ್ಯಕ್ಷೆ ಸುಧಾ, ನಗರ ಘಟಕದ ಅಧ್ಯಕ್ಷೆ ಶಶಿಕಲಾ ನಾಗರಾಜ್, ಸಲಹಾ ಸಮಿತಿ ಅಧ್ಯಕ್ಷೆ ಲತಾ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚನ್ನಗಿರಿ: ‘ತಾಲ್ಲೂಕಿನ ಸಮಸ್ಯೆಗಳ ಬಗ್ಗೆ ಸುದ್ದಿ, ವಿಶೇಷ ವರದಿಗಳ ಮೂಲಕ ಬೆಳಕು ಚೆಲ್ಲುವ ದಿನಪತ್ರಿಕೆಗಳು ತಾಲ್ಲೂಕಿನ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆ ನೀಡುತ್ತಾ ಬಂದಿವೆ’ ಎಂದು ಕನ್ನಡ ನಾಡು ಹಿತ ರಕ್ಷಣಾ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಕೆ.ವಿ. ಕೃಷ್ಣಮೂರ್ತಿ ತಿಳಿಸಿದರು.</p>.<p>ಪಟ್ಟಣದ ಕನ್ನಡ ನಾಡು ಹಿತ ರಕ್ಷಣಾ ಸಮಿತಿ ಕಾರ್ಯಾಲಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪತ್ರಿಕಾ ಹಾಗೂ ಆರೋಗ್ಯ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ದಿನಪತ್ರಿಕೆಗಳು ಇಲ್ಲದೇ ಹೋಗಿದ್ದರೆ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿರಲಿಲ್ಲ. ಆಡಳಿತ ಯಂತ್ರವನ್ನು ಕ್ರಿಯಾಶೀಲವಾಗಿ ಇಡುವಲ್ಲಿ ಪತ್ರಿಕೆಗಳ ಪಾತ್ರ ಮಹತ್ತರವಾದುದು ಎಂದು ಅವರು ಹೇಳಿದರು.</p>.<p>ಪ್ರತಿಯೊಬ್ಬರೂ ದುಶ್ಚಟಗಳಿಂದ ದೂರವಿದ್ದು, ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು. ಮನುಷ್ಯ ಆರೋಗ್ಯವಂತನಾಗಿದ್ದರೆ ಎಂತಹ ಕಠಿಣ ಕಾರ್ಯವನ್ನಾದರೂ ಮಾಡಲು ಸಾಧ್ಯವಾಗುತ್ತದೆ. ಕನ್ನಡ ನಾಡು ಹಿತ ರಕ್ಷಣಾ ಸಮಿತಿ ಕೇವಲ ಕನ್ನಡ ನೆಲ, ಜಲ, ಭಾಷೆಯ ಬಗ್ಗೆ ಹೋರಾಟ ನಡೆಸುತ್ತಿಲ್ಲ. ಸಮಾಜಮುಖಿಯಾಗಿಯೂ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿದರು.</p>.<p>ತಾಲ್ಲೂಕು ಘಟಕದ ಅಧ್ಯಕ್ಷ ಎಂ. ಅಣ್ಣೋಜಿರಾವ್ ಪವಾರ್, ಗೌರವಾಧ್ಯಕ್ಷ ಸರ್ದಾರ್ ಅಹಮ್ಮದ್, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಇನಾಯತ್, ಮಹಿಳಾ ಘಟಕದ ಅಧ್ಯಕ್ಷೆ ಕೆ. ಲಕ್ಷ್ಮೀ, ಗೌರವಾಧ್ಯಕ್ಷೆ ಸುಧಾ, ನಗರ ಘಟಕದ ಅಧ್ಯಕ್ಷೆ ಶಶಿಕಲಾ ನಾಗರಾಜ್, ಸಲಹಾ ಸಮಿತಿ ಅಧ್ಯಕ್ಷೆ ಲತಾ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>