ತಾಲ್ಲೂಕು ಘಟಕದ ಅಧ್ಯಕ್ಷ ಮಹಾಂತೇಶ್, ‘ಹಲವು ವರ್ಷಗಳಿಂದ ಪಟ್ಟಣ ಹಾಗೂ ತಾಲ್ಲೂಕಿನಲ್ಲಿ ಅರ್ಹ ಬಡ ಕುಟುಂಬಗಳಿಗೆ ವಸತಿ ಯೋಜನೆಯಡಿ ಮನೆಗಳು ಮಂಜೂರಾಗಿಲ್ಲ. ಕೂಡಲೇ ಅರ್ಹರಿಗೆ ವಸತಿ ಮತ್ತು ನಿವೇಶನ ಸೌಲಭ್ಯ ಕಲ್ಪಿಸಬೇಕು’ ಎಂದು ಒತ್ತಾಯಿಸಿದರು. ಪಟ್ಟಣ ಪಂಚಾಯಿತಿ ಅಧ್ಯಕ್ಷ ತಿಪ್ಪೇಸ್ವಾಮಿ, ಮುಖ್ಯಾಧಿಕಾರಿ ಲೋಕ್ಯಾನಾಯ್ಕ ಹಾಗೂ ತಹಶೀಲ್ದಾರ್ ನಾಗವೇಣಿ ಅವರಿಗೆ ಮನವಿ ಸಲ್ಲಿಸಲಾಯಿತು. ಕರವೇ ಪದಾಧಿಕಾರಿಗಳಾದ ಸಂಗೊಳ್ಳಿ ಸುರೇಶ್, ಹರ್ಷ, ಆರ್. ಓಬಳೇಶ್, ಅಬ್ದುಲ್ ರಖೀಬ್, ತಿಪ್ಪೇಸ್ವಾಮಿ, ಶಾಹೀನಾ ಬೇಗಂ ನೇತೃತ್ವ ವಹಿಸಿದ್ದರು.