<p><strong>ದಾವಣಗೆರೆ:</strong> ಹರಿಹರ ತಾಲ್ಲೂಕಿನ ಕೊಕ್ಕನೂರು ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಕೋವಿಶೀಲ್ಡ್ ವಯಲ್ಸ್ ಸಾಗಿಸುತ್ತಿದ್ದ ಇಬ್ಬರನ್ನು ಗ್ರಾಮಸ್ಥರು ಹಿಡಿದಿದ್ದಾರೆ.</p>.<p>ಫಾರ್ಮಾಸಿಸ್ಟ್ ಲಕ್ಷ್ಮಣ್ ಹಾಗೂ ಆರೋಗ್ಯ ಕೇಂದ್ರದಹಿರಿಯ ಮಹಿಳಾ ಆರೋಗ್ಯ ಸಹಾಯಕಿ ರೂಪಾ ಸಿಕ್ಕಿಬಿದ್ದವರು.</p>.<p>ಕೋವಿಶೀಲ್ಡ್ನ 6 ವಯಲ್ಗಳನ್ನು ಊಟದ ಬಾಕ್ಸ್ನಲ್ಲಿ ಸಾಗಿಸುತ್ತಿದ್ದಾಗ ನಂದಿತಾವರೆ ಬಳಿ ಗ್ರಾಮಸ್ಥರು ತಡೆದಿದ್ದಾರೆ. ಎಲ್ಲಿ ಕೊಂಡುಕೊಂಡು ಹೋಗುತ್ತಿದ್ದೀರಿ’ ಎಂದು ಪ್ರಶ್ನಿಸಿದ್ದಾರೆ.</p>.<p>ಸಮರ್ಪಕ ಉತ್ತರ ನೀಡದೇ ಇದ್ದುದರಿಂದ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ತಾಲ್ಲೂಕು ಆರೋಗ್ಯಾಧಿಕಾರಿಗೆ ದೂರು ನೀಡಿದ್ದಾರೆ.ಲಸಿಕೆಗಳನ್ನು ಮಾರಾಟ ಮಾಡಲು ತೆಗೆದುಕೊಂಡು ಹೋಗುತ್ತಿ<br />ದ್ದರು ಎಂಬ ಆರೋಪ ಕೇಳಿಬಂದಿದೆ.</p>.<p>‘ಇಬ್ಬರಿಗೂ ಕಾರಣ ಕೇಳಿ ನೋಟಿಸ್ ನೀಡಲಾಗಿದೆ. ತನಿಖೆ ನಡೆಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ವರದಿ ನೀಡಿದ್ದೇನೆ’ ಎಂದು ಹರಿಹರ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಚಂದ್ರಮೋಹನ್ ತಿಳಿಸಿದ್ದಾರೆ.</p>.<p>ಮಾರಾಟ ಮಾಡಲು ಹೋಗುತ್ತಿದ್ದರು ಎಂಬುದರ ಬಗ್ಗೆ ಮಾಹಿತಿ ಇಲ್ಲ. ಟಿಎಚ್ಒ ಅವರು ಪ್ರಾಥಮಿಕ ವರದಿ ನೀಡಿದ್ದು, ತಪ್ಪು ಕಂಡುಬಂದರೆ ಕ್ರಮ ಕೈಗೊಳ್ಳುತ್ತೇನೆ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ನಾಗರಾಜ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಹರಿಹರ ತಾಲ್ಲೂಕಿನ ಕೊಕ್ಕನೂರು ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಕೋವಿಶೀಲ್ಡ್ ವಯಲ್ಸ್ ಸಾಗಿಸುತ್ತಿದ್ದ ಇಬ್ಬರನ್ನು ಗ್ರಾಮಸ್ಥರು ಹಿಡಿದಿದ್ದಾರೆ.</p>.<p>ಫಾರ್ಮಾಸಿಸ್ಟ್ ಲಕ್ಷ್ಮಣ್ ಹಾಗೂ ಆರೋಗ್ಯ ಕೇಂದ್ರದಹಿರಿಯ ಮಹಿಳಾ ಆರೋಗ್ಯ ಸಹಾಯಕಿ ರೂಪಾ ಸಿಕ್ಕಿಬಿದ್ದವರು.</p>.<p>ಕೋವಿಶೀಲ್ಡ್ನ 6 ವಯಲ್ಗಳನ್ನು ಊಟದ ಬಾಕ್ಸ್ನಲ್ಲಿ ಸಾಗಿಸುತ್ತಿದ್ದಾಗ ನಂದಿತಾವರೆ ಬಳಿ ಗ್ರಾಮಸ್ಥರು ತಡೆದಿದ್ದಾರೆ. ಎಲ್ಲಿ ಕೊಂಡುಕೊಂಡು ಹೋಗುತ್ತಿದ್ದೀರಿ’ ಎಂದು ಪ್ರಶ್ನಿಸಿದ್ದಾರೆ.</p>.<p>ಸಮರ್ಪಕ ಉತ್ತರ ನೀಡದೇ ಇದ್ದುದರಿಂದ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ತಾಲ್ಲೂಕು ಆರೋಗ್ಯಾಧಿಕಾರಿಗೆ ದೂರು ನೀಡಿದ್ದಾರೆ.ಲಸಿಕೆಗಳನ್ನು ಮಾರಾಟ ಮಾಡಲು ತೆಗೆದುಕೊಂಡು ಹೋಗುತ್ತಿ<br />ದ್ದರು ಎಂಬ ಆರೋಪ ಕೇಳಿಬಂದಿದೆ.</p>.<p>‘ಇಬ್ಬರಿಗೂ ಕಾರಣ ಕೇಳಿ ನೋಟಿಸ್ ನೀಡಲಾಗಿದೆ. ತನಿಖೆ ನಡೆಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ವರದಿ ನೀಡಿದ್ದೇನೆ’ ಎಂದು ಹರಿಹರ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಚಂದ್ರಮೋಹನ್ ತಿಳಿಸಿದ್ದಾರೆ.</p>.<p>ಮಾರಾಟ ಮಾಡಲು ಹೋಗುತ್ತಿದ್ದರು ಎಂಬುದರ ಬಗ್ಗೆ ಮಾಹಿತಿ ಇಲ್ಲ. ಟಿಎಚ್ಒ ಅವರು ಪ್ರಾಥಮಿಕ ವರದಿ ನೀಡಿದ್ದು, ತಪ್ಪು ಕಂಡುಬಂದರೆ ಕ್ರಮ ಕೈಗೊಳ್ಳುತ್ತೇನೆ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ನಾಗರಾಜ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>