<p>ತ್ಯಾವಣಿಗೆ: ದೇಶ ಅಭಿವೃದ್ಧಿಯಾಗಲು ಚುನಾವಣೆಗಳು ಸರಳವಾಗುವ ಅವಶ್ಯಕತೆ ಇದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೇನೆ. ಮತ್ತೊಮ್ಮೆ ಈ ಬಗ್ಗೆ ಅವರ ಬಳಿ ಪ್ರಸ್ತಾಪಿಸುತ್ತೇನೆ ಎಂದು ಜೆಡಿಯು ರಾಜ್ಯ ಘಟಕದ ಅಧ್ಯಕ್ಷ ಮಹಿಮಾ ಪಟೇಲ್ ತಿಳಿಸಿದರು.</p>.<p>ಸಮೀಪದ ಕಾರಿಗನೂರು ಗ್ರಾಮದಲ್ಲಿ ಮಾಜಿ ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಅವರ ಸಮಾದಿಗೆ ಪುಷ್ಪನಮನ ಸಲ್ಲಿಸಿ, ನಂತರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಎಲ್ಲರನ್ನು ಒಳಗೊಂಡು ಆಲೋಚನೆ ಮಾಡುವುದು ಮುಖ್ಯ. ಸಮಾಜದ ಬಗ್ಗೆ ಚಿಂತನೆ ಮಾಡಬೇಕು. ಕಾಂಗ್ರೆಸ್, ಜೆಡಿಎಸ್ ವಿರೋಧಿಗಳು ಎನ್ನುವುದರ ಬದಲು ಎಲ್ಲರೂ ಒಟ್ಟಾಗಿ ಜನರ ಬಗ್ಗೆ ಯೋಚನೆ ಮಾಡುವಂತಹ ವಾತಾವರಣ ನಿರ್ಮಿಸಲು ಮೊದಲು ಯಾವ ಪಕ್ಷ ಪ್ರಯತ್ನ ಮುಂದುವರಿಸುತ್ತದೆಯೋ ಆ ಪಕ್ಷದ ಜೊತೆ ಬೆಂಬಲವಾಗಿ ನಿಲ್ಲುತ್ತೇವೆ’ ಎಂದು ತಿಳಿಸಿದರು.</p>.<p>‘ಜೆ.ಎಚ್. ಪಟೇಲ್ ಅವರು ನಿಧನರಾದ ಸಂದರ್ಭದಲ್ಲಿ ಈ ಸ್ಥಳಕ್ಕೆ ಬಂದಿದ್ದೆ. ಈಗ ಮತ್ತೊಮ್ಮೆ ಇಲ್ಲಿಗೆ ಬರುವ ಅವಕಾಶ ಬಂದಿದೆ. ನಾಡಿಗೆ ಅವರ ಮಾರ್ಗದರ್ಶನದ ಅವಶ್ಯಕತೆ ಇತ್ತು’ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.</p>.<p>ಪಟೇಲ್ ಅವರ ಮಕ್ಕಳಾದ ಮಹಿಮಾ ಪಟೇಲ್, ತೇಜಸ್ವಿ ಪಟೇಲ್ ಅವರು ಬುದ್ಧಿವಂತರಿದ್ದು, ಅವರ ಸೇವೆ ಸಮಾಜಕ್ಕೆ ಅಗತ್ಯವಿದೆ ಎಂದು ತಿಳಿಸಿದರು.</p>.<p>ಜಿ.ಎಂ.ಸಿದ್ದೇಶ್ವರ ಅವರು ಪ್ರತಿ ಬಾರಿ ಚುನಾವಣೆಯಲ್ಲಿ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡುತ್ತಿದ್ದರು. ಈ ಬಾರಿ ಮೈತ್ರಿ ಧರ್ಮ ಪಾಲಿಸುವ ಉದ್ದೇಶದಿಂದ ಗಾಯಿತ್ರಿ ಸಿದ್ದೇಶ್ವರ ಅವರನ್ನು ಬೆಂಬಲಿಸುವುದು ಅನಿರ್ವಾಯವಾಗಿದೆ. ಆದರೆ, ಬಿಜೆಪಿ ಬಗೆಗಿನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ರೈತ ಮುಖಂಡ ತೇಜಸ್ವಿ ಪಟೇಲ್ ಹೇಳಿದರು.</p>.<p>2009ರಲ್ಲಿ ಸಹಕಾರಿ ಸಕ್ಕರೆ ಕಾರ್ಖನೆಗಳ ಪನರ್ ಆರಂಭಕ್ಕೆ ಮತ್ತು ದೊಡ್ಡಬಾತಿಯಲ್ಲಿ 185 ಎಕರೆ ಭೂ-ಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಹೋರಾಟ ಮಾಡಿದಾಗ ಬಿ.ಎಸ್. ಯಡಿಯೂರಪ್ಪ ಅವರು ಹೋರಾಟಕ್ಕೆ ಸ್ಪಂದಿಸಿ ಸಕ್ಕರೆ ಕಾರ್ಖಾನೆಗಳನ್ನು ಆರಂಭಿಸುವುದಾಗಿ ತಿಳಿಸಿದ್ದರು ಎಂದು ಸ್ಮರಿಸಿದರು.</p>.<p>ಸಂಸದ ಜಿ.ಎಂ. ಸಿದ್ದೇಶ್ವರ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಅನಸೂಯಮ್ಮ, ಮುರುಗೇಶ್ ನಿರಾಣಿ, ರವಿಂದ್ರನಾಥ್, ಎನ್. ರವಿಕುಮಾರ್, ಬಿ.ಜಿ. ಅಜಯ್ಕುಮಾರ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತ್ಯಾವಣಿಗೆ: ದೇಶ ಅಭಿವೃದ್ಧಿಯಾಗಲು ಚುನಾವಣೆಗಳು ಸರಳವಾಗುವ ಅವಶ್ಯಕತೆ ಇದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೇನೆ. ಮತ್ತೊಮ್ಮೆ ಈ ಬಗ್ಗೆ ಅವರ ಬಳಿ ಪ್ರಸ್ತಾಪಿಸುತ್ತೇನೆ ಎಂದು ಜೆಡಿಯು ರಾಜ್ಯ ಘಟಕದ ಅಧ್ಯಕ್ಷ ಮಹಿಮಾ ಪಟೇಲ್ ತಿಳಿಸಿದರು.</p>.<p>ಸಮೀಪದ ಕಾರಿಗನೂರು ಗ್ರಾಮದಲ್ಲಿ ಮಾಜಿ ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಅವರ ಸಮಾದಿಗೆ ಪುಷ್ಪನಮನ ಸಲ್ಲಿಸಿ, ನಂತರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಎಲ್ಲರನ್ನು ಒಳಗೊಂಡು ಆಲೋಚನೆ ಮಾಡುವುದು ಮುಖ್ಯ. ಸಮಾಜದ ಬಗ್ಗೆ ಚಿಂತನೆ ಮಾಡಬೇಕು. ಕಾಂಗ್ರೆಸ್, ಜೆಡಿಎಸ್ ವಿರೋಧಿಗಳು ಎನ್ನುವುದರ ಬದಲು ಎಲ್ಲರೂ ಒಟ್ಟಾಗಿ ಜನರ ಬಗ್ಗೆ ಯೋಚನೆ ಮಾಡುವಂತಹ ವಾತಾವರಣ ನಿರ್ಮಿಸಲು ಮೊದಲು ಯಾವ ಪಕ್ಷ ಪ್ರಯತ್ನ ಮುಂದುವರಿಸುತ್ತದೆಯೋ ಆ ಪಕ್ಷದ ಜೊತೆ ಬೆಂಬಲವಾಗಿ ನಿಲ್ಲುತ್ತೇವೆ’ ಎಂದು ತಿಳಿಸಿದರು.</p>.<p>‘ಜೆ.ಎಚ್. ಪಟೇಲ್ ಅವರು ನಿಧನರಾದ ಸಂದರ್ಭದಲ್ಲಿ ಈ ಸ್ಥಳಕ್ಕೆ ಬಂದಿದ್ದೆ. ಈಗ ಮತ್ತೊಮ್ಮೆ ಇಲ್ಲಿಗೆ ಬರುವ ಅವಕಾಶ ಬಂದಿದೆ. ನಾಡಿಗೆ ಅವರ ಮಾರ್ಗದರ್ಶನದ ಅವಶ್ಯಕತೆ ಇತ್ತು’ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.</p>.<p>ಪಟೇಲ್ ಅವರ ಮಕ್ಕಳಾದ ಮಹಿಮಾ ಪಟೇಲ್, ತೇಜಸ್ವಿ ಪಟೇಲ್ ಅವರು ಬುದ್ಧಿವಂತರಿದ್ದು, ಅವರ ಸೇವೆ ಸಮಾಜಕ್ಕೆ ಅಗತ್ಯವಿದೆ ಎಂದು ತಿಳಿಸಿದರು.</p>.<p>ಜಿ.ಎಂ.ಸಿದ್ದೇಶ್ವರ ಅವರು ಪ್ರತಿ ಬಾರಿ ಚುನಾವಣೆಯಲ್ಲಿ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡುತ್ತಿದ್ದರು. ಈ ಬಾರಿ ಮೈತ್ರಿ ಧರ್ಮ ಪಾಲಿಸುವ ಉದ್ದೇಶದಿಂದ ಗಾಯಿತ್ರಿ ಸಿದ್ದೇಶ್ವರ ಅವರನ್ನು ಬೆಂಬಲಿಸುವುದು ಅನಿರ್ವಾಯವಾಗಿದೆ. ಆದರೆ, ಬಿಜೆಪಿ ಬಗೆಗಿನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ರೈತ ಮುಖಂಡ ತೇಜಸ್ವಿ ಪಟೇಲ್ ಹೇಳಿದರು.</p>.<p>2009ರಲ್ಲಿ ಸಹಕಾರಿ ಸಕ್ಕರೆ ಕಾರ್ಖನೆಗಳ ಪನರ್ ಆರಂಭಕ್ಕೆ ಮತ್ತು ದೊಡ್ಡಬಾತಿಯಲ್ಲಿ 185 ಎಕರೆ ಭೂ-ಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಹೋರಾಟ ಮಾಡಿದಾಗ ಬಿ.ಎಸ್. ಯಡಿಯೂರಪ್ಪ ಅವರು ಹೋರಾಟಕ್ಕೆ ಸ್ಪಂದಿಸಿ ಸಕ್ಕರೆ ಕಾರ್ಖಾನೆಗಳನ್ನು ಆರಂಭಿಸುವುದಾಗಿ ತಿಳಿಸಿದ್ದರು ಎಂದು ಸ್ಮರಿಸಿದರು.</p>.<p>ಸಂಸದ ಜಿ.ಎಂ. ಸಿದ್ದೇಶ್ವರ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಅನಸೂಯಮ್ಮ, ಮುರುಗೇಶ್ ನಿರಾಣಿ, ರವಿಂದ್ರನಾಥ್, ಎನ್. ರವಿಕುಮಾರ್, ಬಿ.ಜಿ. ಅಜಯ್ಕುಮಾರ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>