<p><strong>ಹೊನ್ನಾಳಿ</strong>: ಹುಟ್ಟಿದ ಹತ್ತು ತಿಂಗಳಲ್ಲೇ ತಾಯಿಯನ್ನು ಕಳೆದುಕೊಂಡು, ಕೊರೊನಾದಿಂದ ತಂದೆಯನ್ನೂ ಕಳೆದು<br />ಕೊಂಡ ತಾಲ್ಲೂಕಿನ ದೊಡ್ಡೆರೆಹಳ್ಳಿ ಗ್ರಾಮದ ಬಾಲಕಿ ಯುಕ್ತಿಯನ್ನು ಶಾಸಕ ಎಂ.ಪಿ. ರೇಣುಕಾಚಾರ್ಯ ದತ್ತು ಪಡೆಯುವ ನಿರ್ಧಾರ ಕೈಗೊಂಡಿದ್ದಾರೆ.</p>.<p>ದೊಡ್ಡೆರೆಹಳ್ಳಿ ಗ್ರಾಮದನಿತ್ಯಾನಂದ ಹಾಗೂ ರಾಧಾ ಅವರ ಏಕೈಕ ಪುತ್ರಿ ಯುಕ್ತಿ ತಂದೆ–ತಾಯಿಯನ್ನು ಕಳೆದುಕೊಂಡು ಅಜ್ಜಿವೀರಮ್ಮ ಅವರ ಆಸರೆಯಲ್ಲಿ ಇದ್ದಾಳೆ. ಅವಳ ಬಗ್ಗೆ ಮಾಹಿತಿ ಪಡೆದ ಶಾಸಕ ಎಂ.ಪಿ. ರೇಣುಕಾಚಾರ್ಯ ದತ್ತು ಪಡೆಯುವ ನಿರ್ಧಾರ ಕೈಗೊಂಡಿದ್ದಾರೆ.</p>.<p>ತಂದೆ ನಿತ್ಯಾನಂದ ಜೀವನ ನಿರ್ವಹಣೆಗೆ ಬೆಂಗಳೂರಿನಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಅಲ್ಲಿ ಅಜ್ಜಿ ವೀರಮ್ಮ ಮತ್ತು ಅವರ ಯುಕ್ತಿ ಬೆಂಗಳೂರಿನ ಜೆಪಿ ನಗರದಲ್ಲಿಯೇ ವಾಸವಿದ್ದರು. ಯುಕ್ತಿ ಬೆಂಗಳೂರಿನಲ್ಲಿಯೇ 6 ನೇ ತರಗತಿ ಓದುತ್ತಿದ್ದಳು. ಕೊರೊನಾದಿಂದ ತಂದೆಯನ್ನು ಕಳೆದುಕೊಂಡು ಅಜ್ಜಿಯ ಊರು ದೊಡ್ಡೆರೆಹಳ್ಳಿಯಲ್ಲಿದ್ದಾಳೆ.</p>.<p>ಬಾಲಕಿಯ ಮನೆಗೆ ಭೇಟಿ ನೀಡಿದ ಎಂ.ಪಿ.ರೇಣುಕಾಚಾರ್ಯ ದಂಪತಿ ಬಾಲಕಿಯನ್ನು ಸಂತೈಸಿದರು. ಅಜ್ಜಿ ವೀರಮ್ಮಗೆ ಸಾಂತ್ವನ ಹೇಳಿದರು. ಬಾಲಕಿಯ ಅಜ್ಜಿ ಒಪ್ಪಿದರೆ ದತ್ತು ಪಡೆಯುವುದಾಗಿ ತಿಳಿಸಿದರು.</p>.<p>ಬಾಲಕಿಗೆ ವೈಯಕ್ತಿವಾಗಿ ₹ 25 ಸಾವಿರ ಧನ ಸಹಾಯ ಮಾಡಿದರು. ಸರ್ಕಾರದಿಂದ ಯುಕ್ತಿಯ ಶಿಕ್ಷಣಕ್ಕೆ ಏನು ಬೇಕೋ ಅದನ್ನು ಕೊಡಿಸುವುದಾಗಿ ಭರವಸೆ ನೀಡಿದರು. ಕೋವಿಡ್ನಿಂದ ಮೃತಪಟ್ಟವರಿಗೆ ರಾಜ್ಯ ಸರ್ಕಾರ ನೀಡುವ ₹ 1 ಲಕ್ಷ ಪರಿಹಾರದ ಮೊತ್ತವನ್ನು ಕೊಡಿಸುವ ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾಳಿ</strong>: ಹುಟ್ಟಿದ ಹತ್ತು ತಿಂಗಳಲ್ಲೇ ತಾಯಿಯನ್ನು ಕಳೆದುಕೊಂಡು, ಕೊರೊನಾದಿಂದ ತಂದೆಯನ್ನೂ ಕಳೆದು<br />ಕೊಂಡ ತಾಲ್ಲೂಕಿನ ದೊಡ್ಡೆರೆಹಳ್ಳಿ ಗ್ರಾಮದ ಬಾಲಕಿ ಯುಕ್ತಿಯನ್ನು ಶಾಸಕ ಎಂ.ಪಿ. ರೇಣುಕಾಚಾರ್ಯ ದತ್ತು ಪಡೆಯುವ ನಿರ್ಧಾರ ಕೈಗೊಂಡಿದ್ದಾರೆ.</p>.<p>ದೊಡ್ಡೆರೆಹಳ್ಳಿ ಗ್ರಾಮದನಿತ್ಯಾನಂದ ಹಾಗೂ ರಾಧಾ ಅವರ ಏಕೈಕ ಪುತ್ರಿ ಯುಕ್ತಿ ತಂದೆ–ತಾಯಿಯನ್ನು ಕಳೆದುಕೊಂಡು ಅಜ್ಜಿವೀರಮ್ಮ ಅವರ ಆಸರೆಯಲ್ಲಿ ಇದ್ದಾಳೆ. ಅವಳ ಬಗ್ಗೆ ಮಾಹಿತಿ ಪಡೆದ ಶಾಸಕ ಎಂ.ಪಿ. ರೇಣುಕಾಚಾರ್ಯ ದತ್ತು ಪಡೆಯುವ ನಿರ್ಧಾರ ಕೈಗೊಂಡಿದ್ದಾರೆ.</p>.<p>ತಂದೆ ನಿತ್ಯಾನಂದ ಜೀವನ ನಿರ್ವಹಣೆಗೆ ಬೆಂಗಳೂರಿನಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಅಲ್ಲಿ ಅಜ್ಜಿ ವೀರಮ್ಮ ಮತ್ತು ಅವರ ಯುಕ್ತಿ ಬೆಂಗಳೂರಿನ ಜೆಪಿ ನಗರದಲ್ಲಿಯೇ ವಾಸವಿದ್ದರು. ಯುಕ್ತಿ ಬೆಂಗಳೂರಿನಲ್ಲಿಯೇ 6 ನೇ ತರಗತಿ ಓದುತ್ತಿದ್ದಳು. ಕೊರೊನಾದಿಂದ ತಂದೆಯನ್ನು ಕಳೆದುಕೊಂಡು ಅಜ್ಜಿಯ ಊರು ದೊಡ್ಡೆರೆಹಳ್ಳಿಯಲ್ಲಿದ್ದಾಳೆ.</p>.<p>ಬಾಲಕಿಯ ಮನೆಗೆ ಭೇಟಿ ನೀಡಿದ ಎಂ.ಪಿ.ರೇಣುಕಾಚಾರ್ಯ ದಂಪತಿ ಬಾಲಕಿಯನ್ನು ಸಂತೈಸಿದರು. ಅಜ್ಜಿ ವೀರಮ್ಮಗೆ ಸಾಂತ್ವನ ಹೇಳಿದರು. ಬಾಲಕಿಯ ಅಜ್ಜಿ ಒಪ್ಪಿದರೆ ದತ್ತು ಪಡೆಯುವುದಾಗಿ ತಿಳಿಸಿದರು.</p>.<p>ಬಾಲಕಿಗೆ ವೈಯಕ್ತಿವಾಗಿ ₹ 25 ಸಾವಿರ ಧನ ಸಹಾಯ ಮಾಡಿದರು. ಸರ್ಕಾರದಿಂದ ಯುಕ್ತಿಯ ಶಿಕ್ಷಣಕ್ಕೆ ಏನು ಬೇಕೋ ಅದನ್ನು ಕೊಡಿಸುವುದಾಗಿ ಭರವಸೆ ನೀಡಿದರು. ಕೋವಿಡ್ನಿಂದ ಮೃತಪಟ್ಟವರಿಗೆ ರಾಜ್ಯ ಸರ್ಕಾರ ನೀಡುವ ₹ 1 ಲಕ್ಷ ಪರಿಹಾರದ ಮೊತ್ತವನ್ನು ಕೊಡಿಸುವ ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>