‘ಬೆಂಗಳೂರು ಕಚೇರಿಗೆ ಮೇಲ್ಮನವಿ ಮೂಲಕ ಮಾಹಿತಿ ಕೇಳಿದಾಗ 174 ಪುಟಗಳ ಅಪೂರ್ಣ ಮಾಹಿತಿ ನೀಡಿರುತ್ತಾರೆ. ಹೊನ್ನಾಳಿ, ನ್ಯಾಮತಿ ರಸ್ತೆಗಳಲ್ಲಿ ಡಿವೈಡರ್ ಮಧ್ಯದಲ್ಲಿ ಅರಣ್ಯ ಇಲಾಖೆಯವರು ಹಾಕಿದ್ದ ಗಿಡಗಳನ್ನು ಕಿತ್ತು ಕಾಮಗಾರಿ ನಡೆಸಲಾಗುತ್ತಿದೆ. ಕಡಿಮೆ ಗುಣಮಟ್ಟದ ಕಬ್ಬಿಣ ಬಳಸುತ್ತಿರುವುದು ಕಂಡುಬಂದಿದೆ. ಸಂಬಂಧಪಟ್ಟ ಇಲಾಖೆಯ ಯಾವೊಬ್ಬ ಎಂಜಿನಿಯರ್ ಸ್ಥಳದಲ್ಲಿ ಪರಿಶೀಲನೆ ಮಾಡುತ್ತಿಲ್ಲ. ಕಾಮಗಾರಿ ನಡೆಯುವ ಸ್ಥಳದಲ್ಲಿ ಕಾಮಗಾರಿ ಮಾಹಿತಿಯ ಸೂಚನಾ ಫಲಕ ಹಾಕಿಲ್ಲ. ಸಾರ್ವಜನಿಕರಿಗೆ ಸರಿಯಾಗಿ ಸ್ಪಂದಿಸದ ಎಂಜಿನಿಯರ್ಗಳಾದ ಶಶಿಧರ ಮತ್ತು ಮುರುಳಿ, ಗುತ್ತಿಗೆದಾರ ಚನ್ನರಾಯಪಟ್ಟಣದ ಬಿ.ಎಂ. ರಂಗೇಗೌಡ ಅವರ ಮೇಲೆ ಕಾನೂನು ಕ್ರಮ ಕೈಗೊಂಡು, ಸಾರ್ವಜನಿಕರ ಹಣ ಪೋಲಾಗದಂತೆ ಬಿಲ್ ತಡೆ ಹಿಡಿಯುವಂತೆ ಕೆಆರ್ಡಿಸಿಎಲ್ ವ್ಯವಸ್ಥಾಪಕರಿಗೆ ದೂರು ನೀಡಲಾಗಿದೆ’ ಎಂದು ಅವರು ಮಾಹಿತಿ
ನೀಡಿದರು.