<p>ಚೀಲೂರು (ನ್ಯಾಮತಿ): ಕುಟುಂಬದ ನಿರ್ವಹಣೆ ಮತ್ತು ಜಮೀನು ಅಭಿವೃದ್ಧಿಗಾಗಿ ಮಾಡಿದ ಸಾಲದ ಹೊರೆಯಿಂದಾಗಿ ಗ್ರಾಮದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಗ್ರಾಮದ ಎಂ.ದೇವೇಂದ್ರಪ್ಪ(73) ಆತ್ಯಹತ್ಯೆ ಮಾಡಿಕೊಂಡವರು. ಮಂಗಳವಾರ ತಡರಾತ್ರಿ ವಿಷ ಸೇವಿಸಿದ್ದು, ತಕ್ಷಣ ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.</p>.<p>ಅವರ ಹೆಸರಿನಲ್ಲಿ 7.28 ಎಕರೆ ಜಮೀನು ಇದ್ದು, ಕೆನರಾ ಬ್ಯಾಂಕ್ನಲ್ಲಿ ₹ 11 ಲಕ್ಷ, ಕೃಷಿ ಪತ್ತಿನ ಸಂಘದಲ್ಲಿ ₹ 1.50 ಲಕ್ಷ, ಕೈಗಡವಾಗಿ ₹ 10 ಲಕ್ಷ ಸಾಲ ಮಾಡಿದ್ದರು. ಮಳೆ ಕೈಕೊಟ್ಟಿದ್ದರಿಂದ ಫಸಲು ಬಂದಿರಲಿಲ್ಲ. ಸಾಲ ತೀರಿಸುವ ಬಗ್ಗೆ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರ ಪುತ್ರ ನ್ಯಾಮತಿ ಪೊಲೀಸರಿಗೆ ದೂರು ನೀಡಿದ್ದಾರೆ. </p>.<p>ಅವರಿಗೆ ಪತ್ನಿ, ಐವರು ಪುತ್ರಿಯರು, ಇಬ್ಬರು ಪುತ್ರರು ಇದ್ದಾರೆ. ನ್ಯಾಮತಿ ಠಾಣೆ ಇನ್ಸ್ಪೆಕ್ಟರ್ ಎನ್.ಎಸ್.ರವಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚೀಲೂರು (ನ್ಯಾಮತಿ): ಕುಟುಂಬದ ನಿರ್ವಹಣೆ ಮತ್ತು ಜಮೀನು ಅಭಿವೃದ್ಧಿಗಾಗಿ ಮಾಡಿದ ಸಾಲದ ಹೊರೆಯಿಂದಾಗಿ ಗ್ರಾಮದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಗ್ರಾಮದ ಎಂ.ದೇವೇಂದ್ರಪ್ಪ(73) ಆತ್ಯಹತ್ಯೆ ಮಾಡಿಕೊಂಡವರು. ಮಂಗಳವಾರ ತಡರಾತ್ರಿ ವಿಷ ಸೇವಿಸಿದ್ದು, ತಕ್ಷಣ ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.</p>.<p>ಅವರ ಹೆಸರಿನಲ್ಲಿ 7.28 ಎಕರೆ ಜಮೀನು ಇದ್ದು, ಕೆನರಾ ಬ್ಯಾಂಕ್ನಲ್ಲಿ ₹ 11 ಲಕ್ಷ, ಕೃಷಿ ಪತ್ತಿನ ಸಂಘದಲ್ಲಿ ₹ 1.50 ಲಕ್ಷ, ಕೈಗಡವಾಗಿ ₹ 10 ಲಕ್ಷ ಸಾಲ ಮಾಡಿದ್ದರು. ಮಳೆ ಕೈಕೊಟ್ಟಿದ್ದರಿಂದ ಫಸಲು ಬಂದಿರಲಿಲ್ಲ. ಸಾಲ ತೀರಿಸುವ ಬಗ್ಗೆ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರ ಪುತ್ರ ನ್ಯಾಮತಿ ಪೊಲೀಸರಿಗೆ ದೂರು ನೀಡಿದ್ದಾರೆ. </p>.<p>ಅವರಿಗೆ ಪತ್ನಿ, ಐವರು ಪುತ್ರಿಯರು, ಇಬ್ಬರು ಪುತ್ರರು ಇದ್ದಾರೆ. ನ್ಯಾಮತಿ ಠಾಣೆ ಇನ್ಸ್ಪೆಕ್ಟರ್ ಎನ್.ಎಸ್.ರವಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>