<p><strong>ನ್ಯಾಮತಿ:</strong> ‘ಸರ್ವ ಋತುವಿನಲ್ಲಿಯೂ ಸೂರ್ಯೋದಯಕ್ಕೂ ಪತ್ರಿಕೆಗಳನ್ನು ಮನೆ, ಕಚೇರಿಗೆ ತೆರಳಿ ಹಂಚುವ ಮೂಲಕ ಸಮಾಜದ ಪ್ರಸ್ತುತ ವಿಷಯಗಳನ್ನು ಜನರಿಗೆ ತಲುಪಿಸುವಲ್ಲಿ ಪತ್ರಿಕಾ ವಿತರಕರ ಪಾತ್ರ ದೊಡ್ಡದಿದೆ’ ಎಂದು ತಹಶೀಲ್ದಾರ್ ಎಂ.ಪಿ.ಕವಿರಾಜ್ ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ತಾಲ್ಲೂಕು ಘಟಕ, ಕರ್ನಾಟಕ ರಾಜ್ಯ ಪತ್ರಿಕಾ ವಿತಕರ ಒಕ್ಕೂಟ ಗುರುವಾರ ಆಯೋಜಿಸಿದ್ದ ಪತ್ರಿಕಾ ವಿತರಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಇಂದಿನ ಸಾಮಾಜಿಕ ಜಾಲತಾಣ, ದೃಶ್ಯ ಮಾಧ್ಯಮಗಳ ಭರಾಟೆಯಲ್ಲಿಯೂ ಸಮಾಜದ ಸ್ವಾಸ್ಥ್ಯಕ್ಕೆ ಬೇಕಾದ ವಿಷಯಗಳನ್ನು ಹೆಕ್ಕಿ ತೆಗೆದು ಮುದ್ರಿಸುವ ಮೂಲಕ ಇಂದಿಗೂ ಪತ್ರಿಕೆಗಳು ವಿಶ್ವಾಸಾರ್ಹತೆಯನ್ನು ಉಳಿಸಿಕೊಂಡಿವೆ’ ಎಂದರು.</p>.<p>‘ವಿದ್ಯಾರ್ಥಿಗಳು ಪಠ್ಯ ಪುಸ್ತಕಗಳ ಓದಿನ ಜೊತೆಗೆ ಸಮಾಜದ ಪ್ರಸ್ತುತ ವಿಷಯದ ಕುರಿತು ಪತ್ರಿಕೆಗಳಲ್ಲಿ ಪ್ರಕಟಗೊಳ್ಳುವ ವಿಷಯವನ್ನು ಓದಿದರೆ ಮುಂದಿನ ತಮ್ಮ ಶೈಕ್ಷಣಿಕ ಜ್ಞಾನಾರ್ಜನೆ ಹೆಚ್ಚುವುದು’ ಎಂದು ತಿಳಿಸಿದರು.</p>.<p>ಮುಂದಿನ ದಿನಗಳಲ್ಲಿ ತಾಲ್ಲೂಕಿನ ಎಲ್ಲಾ ವಿತರಕರ ಸಭೆ ಕರೆದು ನೂತನ ಸಂಘ ರಚಿಸುವ ಬಗ್ಗೆ ಕಾರ್ಯನಿರತ ಪತ್ರಕರ್ತರ ಸಂಘದ ಸಂಚಾಲಕ ಎಂ.ಎಸ್.ಶಾಸ್ತ್ರೀ ಹೊಳೆಮಠ ಚರ್ಚಿಸೋಣ ಎಂದರು.</p>.<p>ಕರ್ನಾಟಕ ರಾಜ್ಯ ಪತ್ರಿಕಾ ವಿತಕರ ಒಕ್ಕೂಟದ ಗೌರವಾಧ್ಯಕ್ಷ ಸದಾಶಿವಯ್ಯ ಹಿರೇಮಠ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.</p>.<p>ಪತ್ರಿಕೆಗಳ ಪ್ರತಿನಿಧಿಗಳಾದ ಫಲವನಹಳ್ಳಿ ಜೆ.ಹಳದಪ್ಪ, ಸತೀಶ ಹಿರೇಮಠ, ಎನ್.ಜಿ. ವಿನಾಯಕ, ಬಿ.ಇ. ಷಣ್ಮುಖ, ವಿಶಾಲಾ ಷಣ್ಮುಖ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನ್ಯಾಮತಿ:</strong> ‘ಸರ್ವ ಋತುವಿನಲ್ಲಿಯೂ ಸೂರ್ಯೋದಯಕ್ಕೂ ಪತ್ರಿಕೆಗಳನ್ನು ಮನೆ, ಕಚೇರಿಗೆ ತೆರಳಿ ಹಂಚುವ ಮೂಲಕ ಸಮಾಜದ ಪ್ರಸ್ತುತ ವಿಷಯಗಳನ್ನು ಜನರಿಗೆ ತಲುಪಿಸುವಲ್ಲಿ ಪತ್ರಿಕಾ ವಿತರಕರ ಪಾತ್ರ ದೊಡ್ಡದಿದೆ’ ಎಂದು ತಹಶೀಲ್ದಾರ್ ಎಂ.ಪಿ.ಕವಿರಾಜ್ ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ತಾಲ್ಲೂಕು ಘಟಕ, ಕರ್ನಾಟಕ ರಾಜ್ಯ ಪತ್ರಿಕಾ ವಿತಕರ ಒಕ್ಕೂಟ ಗುರುವಾರ ಆಯೋಜಿಸಿದ್ದ ಪತ್ರಿಕಾ ವಿತರಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಇಂದಿನ ಸಾಮಾಜಿಕ ಜಾಲತಾಣ, ದೃಶ್ಯ ಮಾಧ್ಯಮಗಳ ಭರಾಟೆಯಲ್ಲಿಯೂ ಸಮಾಜದ ಸ್ವಾಸ್ಥ್ಯಕ್ಕೆ ಬೇಕಾದ ವಿಷಯಗಳನ್ನು ಹೆಕ್ಕಿ ತೆಗೆದು ಮುದ್ರಿಸುವ ಮೂಲಕ ಇಂದಿಗೂ ಪತ್ರಿಕೆಗಳು ವಿಶ್ವಾಸಾರ್ಹತೆಯನ್ನು ಉಳಿಸಿಕೊಂಡಿವೆ’ ಎಂದರು.</p>.<p>‘ವಿದ್ಯಾರ್ಥಿಗಳು ಪಠ್ಯ ಪುಸ್ತಕಗಳ ಓದಿನ ಜೊತೆಗೆ ಸಮಾಜದ ಪ್ರಸ್ತುತ ವಿಷಯದ ಕುರಿತು ಪತ್ರಿಕೆಗಳಲ್ಲಿ ಪ್ರಕಟಗೊಳ್ಳುವ ವಿಷಯವನ್ನು ಓದಿದರೆ ಮುಂದಿನ ತಮ್ಮ ಶೈಕ್ಷಣಿಕ ಜ್ಞಾನಾರ್ಜನೆ ಹೆಚ್ಚುವುದು’ ಎಂದು ತಿಳಿಸಿದರು.</p>.<p>ಮುಂದಿನ ದಿನಗಳಲ್ಲಿ ತಾಲ್ಲೂಕಿನ ಎಲ್ಲಾ ವಿತರಕರ ಸಭೆ ಕರೆದು ನೂತನ ಸಂಘ ರಚಿಸುವ ಬಗ್ಗೆ ಕಾರ್ಯನಿರತ ಪತ್ರಕರ್ತರ ಸಂಘದ ಸಂಚಾಲಕ ಎಂ.ಎಸ್.ಶಾಸ್ತ್ರೀ ಹೊಳೆಮಠ ಚರ್ಚಿಸೋಣ ಎಂದರು.</p>.<p>ಕರ್ನಾಟಕ ರಾಜ್ಯ ಪತ್ರಿಕಾ ವಿತಕರ ಒಕ್ಕೂಟದ ಗೌರವಾಧ್ಯಕ್ಷ ಸದಾಶಿವಯ್ಯ ಹಿರೇಮಠ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.</p>.<p>ಪತ್ರಿಕೆಗಳ ಪ್ರತಿನಿಧಿಗಳಾದ ಫಲವನಹಳ್ಳಿ ಜೆ.ಹಳದಪ್ಪ, ಸತೀಶ ಹಿರೇಮಠ, ಎನ್.ಜಿ. ವಿನಾಯಕ, ಬಿ.ಇ. ಷಣ್ಮುಖ, ವಿಶಾಲಾ ಷಣ್ಮುಖ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>