ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ: 16ರವರೆಗೆ ರಾತ್ರಿ ಕರ್ಫ್ಯೂ ಜಾರಿ

Last Updated 8 ಆಗಸ್ಟ್ 2021, 4:25 IST
ಅಕ್ಷರ ಗಾತ್ರ

ದಾವಣಗೆರೆ:ಕೋವಿಡ್ ನಿಯಂತ್ರಣ ಮಾಡಲು ಮುಂಬರುವ ಹಬ್ಬಗಳ ಸಂದರ್ಭದಲ್ಲಿ ಜನಜಂಗುಳಿ ತಪ್ಪಿಸುವ ನಿಟ್ಟಿನಲ್ಲಿಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಪ್ರತಿದಿನ ರಾತ್ರಿ 9ರಿಂದ ಬೆಳಿಗ್ಗೆ 5ಗಂಟೆಯವರೆಗೆ ರಾತ್ರಿ ಕರ್ಫ್ಯೂ ಜಾರಿಗೊಳಿಸಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶ ಹೊರಡಿಸಿದ್ದಾರೆ.

ಜುಲೈ 3 ಹಾಗೂ 18ರಂದು ರಾಜ್ಯ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಗಳನ್ವಯಕರ್ಫ್ಯೂ ಜಾರಿಗೊಳಿಸಿದ್ದು, ಈ ಅವಧಿಯಲ್ಲಿ ಅನುಮತಿ ನೀಡಿದ ಚಟುವಟಿಕೆಗೆ ಮಾತ್ರ ಅವಕಾಶವಿರುತ್ತದೆ. ಈ ಆದೇಶವು ಆಗಸ್ಟ್‌ 16ರವರೆಗೆ ಅನ್ವಯವಾಗಲಿದೆ.

ದೇವಾಲಯ ಪ್ರವೇಶಕ್ಕೆ ನಿರ್ಬಂಧ:ಕೋವಿಡ್ ಮೂರನೇ ಅಲೆಯನ್ನು ನಿರ್ವಹಿಸುವ ನಿಟ್ಟಿನಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಆಗಸ್ಟ್ 31ರವರೆಗೆ ಜಿಲ್ಲೆಯ ಎಲ್ಲಾ ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಿದ್ದು, ಶನಿವಾರ ಮತ್ತು ಭಾನುವಾರ ಭಕ್ತರಿಗೆ ದೇಗುಲ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

‘ದೇವಾಲಯಗಳಲ್ಲಿ ಜಾತ್ರೆ, ಮೆರವಣಿಗೆ, ದೇವಾಲಯಗಳಲ್ಲಿ ಉತ್ಸವ, ಸೇವೆ, ಮಡಿ, ಪ್ರಸಾದ, ದಾಸೋಹಗಳನ್ನು ನಿಷೇಧಿಸಿದೆ. ಶನಿವಾರ ಮತ್ತು ಭಾನುವಾರ ಅರ್ಚಕರು ಸಾಂಪ್ರಾದಾಯಿಕ ಪೂಜೆಗೆ ಮಾತ್ರ ಅವಕಾಶ ಕಲ್ಪಿಸಿದ್ದು, ಆಗಸ್ಟ್ 31ರವರೆಗೆ ಈ ಆದೇಶ ಜಾರಿಯಲ್ಲಿರುತ್ತದೆ’ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT