ವಿಷಯ ತಿಳಿದ ತಹಶೀಲ್ದಾರ್ ರಾಮಚಂದ್ರಪ್ಪ, ಸಿಪಿಐ ಶಿವಪ್ರಸಾದ್, ನೋಡಲ್ ಅಧಿಕಾರಿ ಲೋಕೇಶ್, ರಾಜಸ್ವ ನಿರೀಕ್ಷಕ ಸಮೀರ್ ಅಹ್ಮದ್, ಹೇಮಂತ್ ಬಂದು ಪರಿಸ್ಥಿತಿ ಅವಲೋಕಿಸಿದರು. ಮತದಾನ ಕೇಂದ್ರಕ್ಕೆ ಬಂದು ಸಮಸ್ಯೆ ಕುರಿತು ಗ್ರಾಮದ ಮುಖಂಡರೊಡನೆ ಚರ್ಚಿಸಿ ಮತದಾನ ಮಾಡುವಂತೆ ಗ್ರಾಮಸ್ಥರ ಮನವೊಲಿಸಿದರು. ಬಳಿಕ ಮತದಾನ ನಡೆಯಿತು.