<p><strong>ದಾವಣಗೆರೆ: </strong>ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಸಾಫ್ಟ್ವೇರ್ ಎಂಜಿನಿಯರ್ ಕುಟುಂಬದವರಿಗೆ ಬರಬೇಕಿದ್ದ ಪರಿಹಾರದ ಬಾಕಿ ಮೊತ್ತವನ್ನು ಪಾವತಿಸದ ಕಾರಣ ವಾಯವ್ಯ ಕರ್ನಾಟಕ ಸಾರಿಗೆಯ ಹಾವೇರಿ ಡಿಪೋದ 4 ಬಸ್ಗಳನ್ನು ನ್ಯಾಯಾಲಯದ ಆದೇಶದಂತೆ ನಗರದಲ್ಲಿ ಸೋಮವಾರ ವಶಕ್ಕೆ ಪಡೆಯಲಾಯಿತು.</p>.<p>ತುಮಕೂರು ಸಮೀಪದ ಟೋಲ್ಗೇಟ್ ಬಳಿ 2013ರ ನವೆಂಬರ್ 6ರಂದು ಬಸ್ ಡಿಕ್ಕಿಯಾಗಿ ಸಾಫ್ಟ್ವೇರ್ ಎಂಜಿನಿಯರ್ ಸಂಜೀವ್ ಎಂ. ಪಾಟೀಲ್ ಮೃತಪಟ್ಟಿದ್ದರು. ಪ್ರಕರಣದ ಬಗ್ಗೆ ಜಿಲ್ಲಾ ನ್ಯಾಯಾಲಯ ಮತ್ತು ಹೈಕೋರ್ಟ್ನಲ್ಲಿ ವಿಚಾರಣೆ ನಡೆದು ₹2.15 ಕೋಟಿ ಪರಿಹಾರ ನೀಡುವಂತೆ ಆದೇಶ ನೀಡಲಾಗಿತ್ತು. ಆ ಮೊತ್ತವು 2017ರ ಹೊತ್ತಿಗೆ ಬಡ್ಡಿ ಸೇರಿ ₹2.82 ಕೋಟಿ ಆಗಿತ್ತು. ಈವರೆಗೆ ₹1.72 ಕೋಟಿಗಳನ್ನು ಸಂಸ್ಥೆ ಪಾವತಿಸಿದೆ. ಬಡ್ಡಿ ಸೇರಿ ಬಾಕಿ ಮೊತ್ತವನ್ನು ಪಾವತಿಸಬೇಕಾಗಿದೆ.</p>.<p>ನ್ಯಾಯಾಲಯದ ಅಮೀನರಾದ ಮಂಜುನಾಥ್, ರಾಜಕುಮಾರ್, ಗುರುಮೂರ್ತಿ, ವಕೀಲ ಎ.ಎಂ. ಹೆಗಡೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಸಾಫ್ಟ್ವೇರ್ ಎಂಜಿನಿಯರ್ ಕುಟುಂಬದವರಿಗೆ ಬರಬೇಕಿದ್ದ ಪರಿಹಾರದ ಬಾಕಿ ಮೊತ್ತವನ್ನು ಪಾವತಿಸದ ಕಾರಣ ವಾಯವ್ಯ ಕರ್ನಾಟಕ ಸಾರಿಗೆಯ ಹಾವೇರಿ ಡಿಪೋದ 4 ಬಸ್ಗಳನ್ನು ನ್ಯಾಯಾಲಯದ ಆದೇಶದಂತೆ ನಗರದಲ್ಲಿ ಸೋಮವಾರ ವಶಕ್ಕೆ ಪಡೆಯಲಾಯಿತು.</p>.<p>ತುಮಕೂರು ಸಮೀಪದ ಟೋಲ್ಗೇಟ್ ಬಳಿ 2013ರ ನವೆಂಬರ್ 6ರಂದು ಬಸ್ ಡಿಕ್ಕಿಯಾಗಿ ಸಾಫ್ಟ್ವೇರ್ ಎಂಜಿನಿಯರ್ ಸಂಜೀವ್ ಎಂ. ಪಾಟೀಲ್ ಮೃತಪಟ್ಟಿದ್ದರು. ಪ್ರಕರಣದ ಬಗ್ಗೆ ಜಿಲ್ಲಾ ನ್ಯಾಯಾಲಯ ಮತ್ತು ಹೈಕೋರ್ಟ್ನಲ್ಲಿ ವಿಚಾರಣೆ ನಡೆದು ₹2.15 ಕೋಟಿ ಪರಿಹಾರ ನೀಡುವಂತೆ ಆದೇಶ ನೀಡಲಾಗಿತ್ತು. ಆ ಮೊತ್ತವು 2017ರ ಹೊತ್ತಿಗೆ ಬಡ್ಡಿ ಸೇರಿ ₹2.82 ಕೋಟಿ ಆಗಿತ್ತು. ಈವರೆಗೆ ₹1.72 ಕೋಟಿಗಳನ್ನು ಸಂಸ್ಥೆ ಪಾವತಿಸಿದೆ. ಬಡ್ಡಿ ಸೇರಿ ಬಾಕಿ ಮೊತ್ತವನ್ನು ಪಾವತಿಸಬೇಕಾಗಿದೆ.</p>.<p>ನ್ಯಾಯಾಲಯದ ಅಮೀನರಾದ ಮಂಜುನಾಥ್, ರಾಜಕುಮಾರ್, ಗುರುಮೂರ್ತಿ, ವಕೀಲ ಎ.ಎಂ. ಹೆಗಡೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>