<p><strong>ದಾವಣಗೆರೆ:</strong> ಹಿಮೋಫಿಲಿಯಾ ರೋಗಿಗಳ ರಕ್ತ ಪರೀಕ್ಷೆ ಮಾಡುವ ಸೌಲಭ್ಯ ಸರ್ಕಾರಿ ಆಸ್ಪತ್ರೆಗಳಲ್ಲಿ ಇಲ್ಲ. ಈ ಸೌಲಭ್ಯ ಇಲ್ಲದೇ ಇರುವುದರಿಂದ, ಐದು ಸಾವಿರಕ್ಕೂ ಹೆಚ್ಚು ಮಂದಿಅಂಗವಿಕಲರಿಗೆ ಸಿಗುವ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ.</p>.<p>ಕರ್ನಾಟಕ ಹಿಮೋಫಿಲಿಯಾ ಸೊಸೈಟಿ 2019ರ ಸೆಪ್ಟೆಂಬರ್ನಲ್ಲಿ ನಡೆಸಿದ ಸಮೀಕ್ಷೆ ಪ್ರಕಾರ, ರಾಜ್ಯದಲ್ಲಿ 6 ಸಾವಿರಕ್ಕೂ ಹೆಚ್ಚು ಹಿಮೋಫಿಲಿಯಾ ರೋಗಿಗಳಿದ್ದಾರೆ. ಅವರಲ್ಲಿ 588 ಮಂದಿಗಷ್ಟೇ ಅಂಗವಿಕಲರಿಗೆ ನೀಡಲಾಗುವ ಸೌಲಭ್ಯ ಸಿಕ್ಕಿದೆ.</p>.<p>‘ಅಂಗವಿಕಲರ ಕಾಯ್ದೆಯನ್ನು 2016ರಲ್ಲಿ ಪರಿಷ್ಕರಿಸಲಾಗಿದ್ದು, ಹಿಮೋಫಿಲಿಯಾ, ತಲಸೇಮಿಯಾ, ಸಿಕಲ್ ಸೆಲ್ ಡಿಸೀಸ್ (ಕುಡುಗೋಲು ರಕ್ತಹೀನತೆ) ಸೇರಿ 21 ರೋಗಗಳನ್ನು ಕಾಯ್ದೆಯ ವ್ಯಾಪ್ತಿಗೆ ತರಲಾಗಿದೆ. ಅಂದರೆ, ರಕ್ತಕ್ಕೆ ಸಂಬಂಧಿಸಿದ ಈ ರೋಗಗಳನ್ನು ಅಂಗವೈಕಲ್ಯ ಎಂದು ಗುರುತಿಸಲಾಗಿರುವುದರಿಂದ ಅಂಗವಿಕಲರಿಗೆ ಸಿಗುವ ಸೌಲಭ್ಯಗಳು ಈ ರೋಗ ಪೀಡಿತರಿಗೂ ಸಿಗಬೇಕು. ಆದರೆ, ಇಂತಹ ರೋಗಿಗಳನ್ನು ಗುರುತಿಸುವುದು ಸವಾಲಿನ ಕೆಲಸ’ ಎನ್ನುತ್ತಾರೆ ದಾವಣಗೆರೆಯ ಕರ್ನಾಟಕ ಹಿಮೋಫಿಲಿಯಾ ಸೊಸೈಟಿ ಅಧ್ಯಕ್ಷ ಡಾ.ಸುರೇಶ್ ಹನಗವಾಡಿ.</p>.<p>‘ಆರೋಗ್ಯವಂತ ವ್ಯಕ್ತಿಯಲ್ಲಿ ಫ್ಯಾಕ್ಟರ್ 8 ಹಾಗೂ 9 ಪ್ರಮಾಣವು ಶೇ 50ಕ್ಕಿಂತ ಹೆಚ್ಚು ಇರಬೇಕು. ಅದಕ್ಕಿಂತ ಕಡಿಮೆ ಇದ್ದರೆ ಹಿಮೋಫಿಲಿಯಾ ರೋಗಿಗಳೆಂದು ಗುರುತಿಸಲಾಗುತ್ತದೆ. ಈ ಎರಡು ಅಂಶಗಳನ್ನು ರಕ್ತ ಪರೀಕ್ಷೆಯ ಮೂಲಕ ಗುರುತಿಸಬಹುದಾಗಿದೆ. ದಾವಣಗೆರೆಯ ಕರ್ನಾಟಕ ಹಿಮೋಫಿಲಿಯಾ ಸೊಸೈಟಿ ಹಾಗೂ ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆಗಳನ್ನು ಬಿಟ್ಟರೆ ರಾಜ್ಯದ ಯಾವ ಸರ್ಕಾರಿ ಆಸ್ಪತ್ರೆಗಳಲ್ಲೂ ಈ ಸೌಲಭ್ಯವಿಲ್ಲ’ ಎಂದು ಸುರೇಶ್ ಬೇಸರ ವ್ಯಕ್ತಪಡಿಸಿದರು.</p>.<p>‘ಹಿಮೋಫಿಲಿಯಾದಲ್ಲಿ ಅಂಗವೈಕಲ್ಯ ಪ್ರಮಾಣವನ್ನು ಗುರುತಿಸಲು ಮೂರು ಹಂತಗಳಲ್ಲಿ ಪರೀಕ್ಷೆ ಮಾಡಿಸಬೇಕಾಗುತ್ತದೆ. ಈ ಎಲ್ಲಾ ಪರೀಕ್ಷೆಗಳನ್ನು ಹಲವು ಖಾಸಗಿ ಆಸ್ಪತ್ರೆಗಳಲ್ಲಿ ಮಾಡಲಾಗುತ್ತದೆ. ಆದರೆ, ಇದಕ್ಕೆ ದುಬಾರಿ ವೆಚ್ಚ ತಗಲುತ್ತದೆ. ಆರಂಭಿಕ ಹಂತವನ್ನು ಪರೀಕ್ಷಿಸಲು ₹ 3 ಸಾವಿರದಿಂದ ₹ 4 ಸಾವಿರ ಬೇಕು. ಅಲ್ಲದೇ ಮುಂದುವರಿದ ಪರೀಕ್ಷೆ ಅಂದರೆ ಪ್ಲೇಟ್ಲೆಟ್ ಗುಣಮಟ್ಟ, ವಾನ್ ವಿಲಿಬ್ರಾಂಡ್ಸ್ ಡಿಸೀಸ್ಗಳನ್ನು ಪರೀಕ್ಷಿಸಲು ₹ 10 ಸಾವಿರ ಬೇಕು. ಕಡುಬಡವರು ಇದನ್ನು ಭರಿಸುವುದು ಕಷ್ಟ. ಇದರಿಂದಾಗಿ ಅವರು ಅಂಗವಿಕಲರಿಗೆ ದೊರೆಯುವ ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ’ ಎಂಬುದು ಅವರ ಅಭಿಪ್ರಾಯ.</p>.<p>ಹಿಮೋಫಿಲಿಯಾ ರೋಗಿಗಳಿಗೆ ಅಂಗವಿಕಲ ಕಾರ್ಡ್ಗಳನ್ನು ನೀಡುವ ಸಂಬಂಧ ನೋಂದಣಿ ಕಾರ್ಯ ಆರಂಭವಾಗಿದ್ದು, ಅರ್ಹರಿಗೆ ಸೌಲಭ್ಯ ತಲುಪಿಸುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.</p>.<p>ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೀದರ್ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಯಾರಿಗೂ ಸೌಲಭ್ಯ ಸಿಕ್ಕಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಹಿಮೋಫಿಲಿಯಾ ರೋಗಿಗಳ ರಕ್ತ ಪರೀಕ್ಷೆ ಮಾಡುವ ಸೌಲಭ್ಯ ಸರ್ಕಾರಿ ಆಸ್ಪತ್ರೆಗಳಲ್ಲಿ ಇಲ್ಲ. ಈ ಸೌಲಭ್ಯ ಇಲ್ಲದೇ ಇರುವುದರಿಂದ, ಐದು ಸಾವಿರಕ್ಕೂ ಹೆಚ್ಚು ಮಂದಿಅಂಗವಿಕಲರಿಗೆ ಸಿಗುವ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ.</p>.<p>ಕರ್ನಾಟಕ ಹಿಮೋಫಿಲಿಯಾ ಸೊಸೈಟಿ 2019ರ ಸೆಪ್ಟೆಂಬರ್ನಲ್ಲಿ ನಡೆಸಿದ ಸಮೀಕ್ಷೆ ಪ್ರಕಾರ, ರಾಜ್ಯದಲ್ಲಿ 6 ಸಾವಿರಕ್ಕೂ ಹೆಚ್ಚು ಹಿಮೋಫಿಲಿಯಾ ರೋಗಿಗಳಿದ್ದಾರೆ. ಅವರಲ್ಲಿ 588 ಮಂದಿಗಷ್ಟೇ ಅಂಗವಿಕಲರಿಗೆ ನೀಡಲಾಗುವ ಸೌಲಭ್ಯ ಸಿಕ್ಕಿದೆ.</p>.<p>‘ಅಂಗವಿಕಲರ ಕಾಯ್ದೆಯನ್ನು 2016ರಲ್ಲಿ ಪರಿಷ್ಕರಿಸಲಾಗಿದ್ದು, ಹಿಮೋಫಿಲಿಯಾ, ತಲಸೇಮಿಯಾ, ಸಿಕಲ್ ಸೆಲ್ ಡಿಸೀಸ್ (ಕುಡುಗೋಲು ರಕ್ತಹೀನತೆ) ಸೇರಿ 21 ರೋಗಗಳನ್ನು ಕಾಯ್ದೆಯ ವ್ಯಾಪ್ತಿಗೆ ತರಲಾಗಿದೆ. ಅಂದರೆ, ರಕ್ತಕ್ಕೆ ಸಂಬಂಧಿಸಿದ ಈ ರೋಗಗಳನ್ನು ಅಂಗವೈಕಲ್ಯ ಎಂದು ಗುರುತಿಸಲಾಗಿರುವುದರಿಂದ ಅಂಗವಿಕಲರಿಗೆ ಸಿಗುವ ಸೌಲಭ್ಯಗಳು ಈ ರೋಗ ಪೀಡಿತರಿಗೂ ಸಿಗಬೇಕು. ಆದರೆ, ಇಂತಹ ರೋಗಿಗಳನ್ನು ಗುರುತಿಸುವುದು ಸವಾಲಿನ ಕೆಲಸ’ ಎನ್ನುತ್ತಾರೆ ದಾವಣಗೆರೆಯ ಕರ್ನಾಟಕ ಹಿಮೋಫಿಲಿಯಾ ಸೊಸೈಟಿ ಅಧ್ಯಕ್ಷ ಡಾ.ಸುರೇಶ್ ಹನಗವಾಡಿ.</p>.<p>‘ಆರೋಗ್ಯವಂತ ವ್ಯಕ್ತಿಯಲ್ಲಿ ಫ್ಯಾಕ್ಟರ್ 8 ಹಾಗೂ 9 ಪ್ರಮಾಣವು ಶೇ 50ಕ್ಕಿಂತ ಹೆಚ್ಚು ಇರಬೇಕು. ಅದಕ್ಕಿಂತ ಕಡಿಮೆ ಇದ್ದರೆ ಹಿಮೋಫಿಲಿಯಾ ರೋಗಿಗಳೆಂದು ಗುರುತಿಸಲಾಗುತ್ತದೆ. ಈ ಎರಡು ಅಂಶಗಳನ್ನು ರಕ್ತ ಪರೀಕ್ಷೆಯ ಮೂಲಕ ಗುರುತಿಸಬಹುದಾಗಿದೆ. ದಾವಣಗೆರೆಯ ಕರ್ನಾಟಕ ಹಿಮೋಫಿಲಿಯಾ ಸೊಸೈಟಿ ಹಾಗೂ ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆಗಳನ್ನು ಬಿಟ್ಟರೆ ರಾಜ್ಯದ ಯಾವ ಸರ್ಕಾರಿ ಆಸ್ಪತ್ರೆಗಳಲ್ಲೂ ಈ ಸೌಲಭ್ಯವಿಲ್ಲ’ ಎಂದು ಸುರೇಶ್ ಬೇಸರ ವ್ಯಕ್ತಪಡಿಸಿದರು.</p>.<p>‘ಹಿಮೋಫಿಲಿಯಾದಲ್ಲಿ ಅಂಗವೈಕಲ್ಯ ಪ್ರಮಾಣವನ್ನು ಗುರುತಿಸಲು ಮೂರು ಹಂತಗಳಲ್ಲಿ ಪರೀಕ್ಷೆ ಮಾಡಿಸಬೇಕಾಗುತ್ತದೆ. ಈ ಎಲ್ಲಾ ಪರೀಕ್ಷೆಗಳನ್ನು ಹಲವು ಖಾಸಗಿ ಆಸ್ಪತ್ರೆಗಳಲ್ಲಿ ಮಾಡಲಾಗುತ್ತದೆ. ಆದರೆ, ಇದಕ್ಕೆ ದುಬಾರಿ ವೆಚ್ಚ ತಗಲುತ್ತದೆ. ಆರಂಭಿಕ ಹಂತವನ್ನು ಪರೀಕ್ಷಿಸಲು ₹ 3 ಸಾವಿರದಿಂದ ₹ 4 ಸಾವಿರ ಬೇಕು. ಅಲ್ಲದೇ ಮುಂದುವರಿದ ಪರೀಕ್ಷೆ ಅಂದರೆ ಪ್ಲೇಟ್ಲೆಟ್ ಗುಣಮಟ್ಟ, ವಾನ್ ವಿಲಿಬ್ರಾಂಡ್ಸ್ ಡಿಸೀಸ್ಗಳನ್ನು ಪರೀಕ್ಷಿಸಲು ₹ 10 ಸಾವಿರ ಬೇಕು. ಕಡುಬಡವರು ಇದನ್ನು ಭರಿಸುವುದು ಕಷ್ಟ. ಇದರಿಂದಾಗಿ ಅವರು ಅಂಗವಿಕಲರಿಗೆ ದೊರೆಯುವ ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ’ ಎಂಬುದು ಅವರ ಅಭಿಪ್ರಾಯ.</p>.<p>ಹಿಮೋಫಿಲಿಯಾ ರೋಗಿಗಳಿಗೆ ಅಂಗವಿಕಲ ಕಾರ್ಡ್ಗಳನ್ನು ನೀಡುವ ಸಂಬಂಧ ನೋಂದಣಿ ಕಾರ್ಯ ಆರಂಭವಾಗಿದ್ದು, ಅರ್ಹರಿಗೆ ಸೌಲಭ್ಯ ತಲುಪಿಸುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.</p>.<p>ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೀದರ್ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಯಾರಿಗೂ ಸೌಲಭ್ಯ ಸಿಕ್ಕಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>