ಚನ್ನಗಿರಿ: ‘ನಮ್ಮ ಸ್ನೇಹಿತರ ಬಳಗದ ಯಾರೂ ರಾಜೀನಾಮೆ ನೀಡುವುದಿಲ್ಲ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುವ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಅವರು ರಾಜೀನಾಮೆ ನೀಡುತ್ತೇನೆ ಎಂದಿರುವುದು ವೈಯುಕ್ತಿಕ ವಿಚಾರ’ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಹೇಳಿದರು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೋಮವಾರ ಸಾಬೂನು ಮತ್ತು ಮಾರ್ಜಕ ನಿಗಮದಿಂದ ನಿರ್ಮಿಸಿದ ಆಮ್ಲಜನಕ ಉತ್ಪಾದನಾ ಘಟಕವನ್ನು ಲೋಕಾರ್ಪಣೆಗೊಳಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.
‘ಖಾಸಗಿ ಶಾಲೆಗಳನ್ನು ಕೋವಿಡ್ ಸಂದರ್ಭದಲ್ಲಿ ತೆರೆಯುವುದು ಸೂಕ್ತವಲ್ಲ. ಯಾವುದೇ ಕಾರಣಕ್ಕೂ ಖಾಸಗಿ ಶಾಲೆ ತೆರೆಯಬಾರದು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ’ ಎಂದು ಅವರು ಪಶ್ನೆಯೊಂದಕ್ಕೆ ಉತ್ತರಿಸಿದರು.