<p><strong>ಹೊನ್ನಾಳಿ</strong>: ‘ಹೊನ್ನಾಳಿ ಹಾಗೂ ನ್ಯಾಮತಿ ತಾಲ್ಲೂಕಿನ ಯಾವುದೇ ಗ್ರಾಮದಲ್ಲೂ ಇನ್ನು ಮುಂದೆ ಹೋಂ ಐಸೋಲೇಷನ್ಗೆ ಅವಕಾಶ ಕೊಡಬೇಡಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ' ಎಂದುಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು.</p>.<p>ಹೊನ್ನಾಳಿ ನಗರದ ಅಂಬೇಡ್ಕರ್ ಭವನಕ್ಕೆ ಗುರುವಾರ ಭೇಟಿ ನೀಡಿ ಸೋಂಕಿತರ ಆರೋಗ್ಯ ವಿಚಾರಿಸಿ ಮಾತನಾಡಿದರು.</p>.<p>‘ಸೋಂಕಿತ ವ್ಯಕ್ತಿ ಹೋಂ ಐಸೋಲೇಷನ್ನಲ್ಲಿ ಇದ್ದರೆ ಸೋಂಕು ಕುಟುಂಬಸ್ಥರಿಗೂ ಹರಡುವ ಅಪಾಯವಿದೆ. ಆದ್ದರಿಂದ ಹೋಂ ಐಸೋಲೇಷನ್ ಬೇಡವೆಂದು ತೀರ್ಮಾನಿಸಲಾಗಿದೆ. ಅದರ ಬದಲು ಆರೈಕೆ ಕೇಂದ್ರಕ್ಕೆ ಬನ್ನಿ, ನಾವು ನಿಮ್ಮ ಜೊತೆ ಇರುತ್ತೇವೆ’ ಎಂದು ಮನವಿ ಮಾಡಿದರು.</p>.<p>‘ಕೋವಿಡ್ ಎರಡನೇ ಅಲೆಯ ಸೋಂಕು ಇನ್ನೂ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿಲ್ಲ. ಆದರೂ ತಜ್ಞರು ಪ್ರಕಾರ ಮೂರನೇ ಅಲೆ ಬಗ್ಗೆ ಎಚ್ಚರಿಸಿರುವ ಕಾರಣ ಅದನ್ನು ಸಮರ್ಥವಾಗಿ ಎದುರಿಸುವ ಅಧಿಕಾರಿಗಳ ತಂಡ ನಮ್ಮ ಜೊತೆ ಇದೆ. ಈ ನಿಟ್ಟಿನಲ್ಲಿ ಈಗಾಗಲೇ ಒಂದು ಸುತ್ತಿನ ಚರ್ಚೆ ಸಹ ಅಧಿಕಾರಿಗಳ ಜೊತೆ ಮಾಡಿದ್ದೇನೆ’ ಎಂದರು.</p>.<p>‘ಮಾದನಬಾವಿ, ಕಿತ್ತೂರು ರಾಣಿ ಚನ್ನಮ್ಮ, ಅರಬಗಟ್ಟೆ ಹಾಗೂ ಸಿಂಗಟಗೆರೆ ಸಮೀಪ ಇರುವ ಕೋವಿಡ್ ಕೇಂದ್ರಗಳಲ್ಲಿ ಒಟ್ಟು 1500 ಬೆಡ್ಗಳ ಆರೈಕೆ ಕೇಂದ್ರ ಸಿದ್ಧವಾಗಿದೆ. ವೈದ್ಯಕೀಯ ಸಿಬ್ಬಂದಿಯನ್ನು ಹೆಚ್ಚಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗೆ ತಿಳಿಸಿದ್ದು, ಸದ್ಯದಲ್ಲಿಯೇ ಹೆಚ್ಚುವರಿ ಸಿಬ್ಬಂದಿಯನ್ನು ನೇಮಕ ಮಾಡುತ್ತೇವೆ’ ಎಂದು ತಿಳಿಸಿದರು.</p>.<p>ಎರಡು ದಿನಗಳಿಂದ ಮಾದನಬಾವಿ ಹಾಗೂ ಎಚ್. ಕಡದಕಟ್ಟೆಯಲ್ಲಿನ ಕೋವಿಡ್ ಕೇಂದ್ರಗಳಿಂದ 73 ಜನ ಸೋಂಕಿತರು ಗುಣಮುಖರಾಗಿದ್ದು, ಅವರಿಗೆ ಶಾಸಕರು ಹೂ ಮಳೆ ಸುರಿಸಿ ಬೀಳ್ಕೊಟ್ಟರು.</p>.<p>ತಾಲ್ಲೂಕಿನ ಮಾದನಬಾವಿಯಲ್ಲಿರುವ ಕೋವಿಡ್ ಕೇಂದ್ರಕ್ಕೆ ಬೆಳಿಗ್ಗೆಯೇ ತೆರಳಿದ ಶಾಸಕರು ಕೊರೊನಾ ಸೋಂಕಿತರಿಗೆ ಯೋಗಾಭ್ಯಾಸ ಮಾಡಿಸಿದರು.</p>.<p>ಪುರಸಭೆ ಅಧ್ಯಕ್ಷರು, ಸದಸ್ಯರು ಹಾಗೂ ತಹಶೀಲ್ದಾರ್ ಬಸನಗೌಡ ಕೋಟೂರ, ಪಿಎಸ್ಐ ಬಸವನಗೌಡ ಬಿರಾದಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾಳಿ</strong>: ‘ಹೊನ್ನಾಳಿ ಹಾಗೂ ನ್ಯಾಮತಿ ತಾಲ್ಲೂಕಿನ ಯಾವುದೇ ಗ್ರಾಮದಲ್ಲೂ ಇನ್ನು ಮುಂದೆ ಹೋಂ ಐಸೋಲೇಷನ್ಗೆ ಅವಕಾಶ ಕೊಡಬೇಡಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ' ಎಂದುಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು.</p>.<p>ಹೊನ್ನಾಳಿ ನಗರದ ಅಂಬೇಡ್ಕರ್ ಭವನಕ್ಕೆ ಗುರುವಾರ ಭೇಟಿ ನೀಡಿ ಸೋಂಕಿತರ ಆರೋಗ್ಯ ವಿಚಾರಿಸಿ ಮಾತನಾಡಿದರು.</p>.<p>‘ಸೋಂಕಿತ ವ್ಯಕ್ತಿ ಹೋಂ ಐಸೋಲೇಷನ್ನಲ್ಲಿ ಇದ್ದರೆ ಸೋಂಕು ಕುಟುಂಬಸ್ಥರಿಗೂ ಹರಡುವ ಅಪಾಯವಿದೆ. ಆದ್ದರಿಂದ ಹೋಂ ಐಸೋಲೇಷನ್ ಬೇಡವೆಂದು ತೀರ್ಮಾನಿಸಲಾಗಿದೆ. ಅದರ ಬದಲು ಆರೈಕೆ ಕೇಂದ್ರಕ್ಕೆ ಬನ್ನಿ, ನಾವು ನಿಮ್ಮ ಜೊತೆ ಇರುತ್ತೇವೆ’ ಎಂದು ಮನವಿ ಮಾಡಿದರು.</p>.<p>‘ಕೋವಿಡ್ ಎರಡನೇ ಅಲೆಯ ಸೋಂಕು ಇನ್ನೂ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿಲ್ಲ. ಆದರೂ ತಜ್ಞರು ಪ್ರಕಾರ ಮೂರನೇ ಅಲೆ ಬಗ್ಗೆ ಎಚ್ಚರಿಸಿರುವ ಕಾರಣ ಅದನ್ನು ಸಮರ್ಥವಾಗಿ ಎದುರಿಸುವ ಅಧಿಕಾರಿಗಳ ತಂಡ ನಮ್ಮ ಜೊತೆ ಇದೆ. ಈ ನಿಟ್ಟಿನಲ್ಲಿ ಈಗಾಗಲೇ ಒಂದು ಸುತ್ತಿನ ಚರ್ಚೆ ಸಹ ಅಧಿಕಾರಿಗಳ ಜೊತೆ ಮಾಡಿದ್ದೇನೆ’ ಎಂದರು.</p>.<p>‘ಮಾದನಬಾವಿ, ಕಿತ್ತೂರು ರಾಣಿ ಚನ್ನಮ್ಮ, ಅರಬಗಟ್ಟೆ ಹಾಗೂ ಸಿಂಗಟಗೆರೆ ಸಮೀಪ ಇರುವ ಕೋವಿಡ್ ಕೇಂದ್ರಗಳಲ್ಲಿ ಒಟ್ಟು 1500 ಬೆಡ್ಗಳ ಆರೈಕೆ ಕೇಂದ್ರ ಸಿದ್ಧವಾಗಿದೆ. ವೈದ್ಯಕೀಯ ಸಿಬ್ಬಂದಿಯನ್ನು ಹೆಚ್ಚಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗೆ ತಿಳಿಸಿದ್ದು, ಸದ್ಯದಲ್ಲಿಯೇ ಹೆಚ್ಚುವರಿ ಸಿಬ್ಬಂದಿಯನ್ನು ನೇಮಕ ಮಾಡುತ್ತೇವೆ’ ಎಂದು ತಿಳಿಸಿದರು.</p>.<p>ಎರಡು ದಿನಗಳಿಂದ ಮಾದನಬಾವಿ ಹಾಗೂ ಎಚ್. ಕಡದಕಟ್ಟೆಯಲ್ಲಿನ ಕೋವಿಡ್ ಕೇಂದ್ರಗಳಿಂದ 73 ಜನ ಸೋಂಕಿತರು ಗುಣಮುಖರಾಗಿದ್ದು, ಅವರಿಗೆ ಶಾಸಕರು ಹೂ ಮಳೆ ಸುರಿಸಿ ಬೀಳ್ಕೊಟ್ಟರು.</p>.<p>ತಾಲ್ಲೂಕಿನ ಮಾದನಬಾವಿಯಲ್ಲಿರುವ ಕೋವಿಡ್ ಕೇಂದ್ರಕ್ಕೆ ಬೆಳಿಗ್ಗೆಯೇ ತೆರಳಿದ ಶಾಸಕರು ಕೊರೊನಾ ಸೋಂಕಿತರಿಗೆ ಯೋಗಾಭ್ಯಾಸ ಮಾಡಿಸಿದರು.</p>.<p>ಪುರಸಭೆ ಅಧ್ಯಕ್ಷರು, ಸದಸ್ಯರು ಹಾಗೂ ತಹಶೀಲ್ದಾರ್ ಬಸನಗೌಡ ಕೋಟೂರ, ಪಿಎಸ್ಐ ಬಸವನಗೌಡ ಬಿರಾದಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>