ಹರಿಹರ ಪಂಚಮಸಾಲಿ ಗುರು ಪೀಠದ ವಚನಾನಂದ ಸ್ವಾಮೀಜಿ ಮಾತನಾಡಿ, ‘ವೀರಶೈವ– ಲಿಂಗಾಯತ ಸಮುದಾಯದಲ್ಲಿ ಕೆಲವರು 2ಎ, 3ಎ, 3ಬಿ ಮೀಸಲಾತಿ ಪಡೆಯುತ್ತಿದ್ದು, ಇದು ಒಂದು ಕಣ್ಣಿಗೆ ಬೆಣ್ಣೆ ಇನ್ನೊಂದು ಕಣ್ಣಿಗೆ ಸುಣ್ಣ ಎನ್ನುವಂತಾಗಿದೆ. ರಾಜ್ಯದಲ್ಲಿರುವ ಎಲ್ಲಾ ವೀರಶೈವ ಲಿಂಗಾಯತ ಸಮುದಾಯಕ್ಕೆ ಒಂದೇ ರೀತಿಯ ಮೀಸಲಾತಿ ಇರಬೇಕು’ ಎಂದು ಅಭಿಪ್ರಾಯಪಟ್ಟರು.