ಬಿಜೆಪಿ ಆಡಳಿತಕ್ಕೆ ಬರುವ ಮುನ್ನ ನೀಡಿದ್ದ ಸ್ವಿಸ್ ಬ್ಯಾಂಕ್ನಲ್ಲಿರುವ ಕಪ್ಪು ಹಣ ವಾಪಸ್ ತರಿಸಿ ಪ್ರತಿ ಪ್ರಜೆ ಬ್ಯಾಂಕ್ ಖಾತೆಗೆ ₹ 15 ಲಕ್ಷ ಜಮೆ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಸೇರಿ ಯಾವ ಭರವಸೆಗಳನ್ನೂ ಈಡೇರಿಸಿಲ್ಲ. ಬದಲಿಗೆ ಜಿಎಸ್ಟಿ ಜಾರಿ, ಅಡುಗೆ ಅನಿಲ, ಅಡುಗೆ ಎಣ್ಣೆ, ಆಹಾರ ಧಾನ್ಯದ ದರ ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಬದುಕನ್ನು ಮತ್ತಷ್ಟು ಸಂಕಷ್ಟಕ್ಕೆ ನೂಕಲಾಗಿದೆ ಎಂದು ದೂರಿದರು.