<p><strong>ಹರಪನಹಳ್ಳಿ: ‘</strong>ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ಅಸಮಾಧಾನ ಎಂದಿಗೂ ಆಗಲ್ಲ. ಸಚಿವನಾಗುವ ಆಸೆ ಇದೆ. ಪ್ರಯತ್ನ ಮುಂದುವರಿಸುವೆ’ ಎಂದು ಶಾಸಕ ಜಿ. ಕರುಣಾಕರ ರೆಡ್ಡಿ ಹೇಳಿದರು.</p>.<p>ಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬುಧವಾರ ಭೂಮಿಪೂಜೆ ನೆರವೇರಿಸಿದ ಬಳಿಕ ಅವರು ಮಾತನಾಡಿದರು.</p>.<p>ಸಚಿವ ಸ್ಥಾನ ಕಲ್ಪಿಸುವಲ್ಲಿ ಬಳ್ಳಾರಿ ಜಿಲ್ಲೆ ಕಡೆಗಣಿಸಲಾಗಿದೆ ಎಂಬ ಪ್ರಶ್ನೆಗೆ, ‘ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಹೈಕಮಾಂಡ್ ಅವರನ್ನೇ ಕೇಳಬೇಕು’ ಎಂದರು.</p>.<p>‘ವಿಜಯನಗರ ಜಿಲ್ಲೆ ಪೂರ್ಣ ಪ್ರಮಾಣದಲ್ಲಿ ಅಸ್ತಿತ್ವಕ್ಕೆ ಬಂದಿಲ್ಲ. ಹಾಗಾಗಿ ಜಿಲ್ಲಾ ಉಸ್ತುವಾರಿ ಒಬ್ಬ ಸಚಿವರಿಗೆ ಕೊಟ್ಟಿದ್ದಾರೆ. ಯಾವಾಗಲು ಆಶಾ ಜೀವಿಗಳಾಗಿರಬೇಕು ಎನ್ನುವ ನಂಬಿಕೆಯಲ್ಲಿದ್ದೇನೆ. ಸಚಿವ ಸ್ಥಾನ ಕೊಡುವುದು ಬಿಡುವುದು ವರಿಷ್ಠರಿಗೆ ಬಿಟ್ಟದ್ದು’ ಎಂದು ತಿಳಿಸಿದರು.</p>.<p>ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಸತ್ತೂರು ಹಾಲೇಶ್, ಬಾಗಳಿ ಕೊಟ್ರೇಶ್, ಇಜಂತಕರ್ ಮಂಜುನಾಥ್, ರಾಘವೇಂದ್ರ ಶೆಟ್ಟಿ, ಯು.ಪಿ.ನಾಗರಾಜ್, ಮಂಜನಾಯ್ಕ, ಎಂ.ಮಲ್ಲೇಶ್, ಸಂತೋಷ್, ಆರ್. ಲೋಕೇಶ್, ನಿಟ್ಟೂರು ಸಣ್ಣಹಾಲಪ್ಪ, ಶಿರಗಾನಹಳ್ಳಿ ವಿಶ್ವನಾಥ್, ರಂಗಾಪುರ ಬಸವರಾಜ್, ವಿನಾಯಕ, ಉದಯ, ಕರೇಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಪನಹಳ್ಳಿ: ‘</strong>ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ಅಸಮಾಧಾನ ಎಂದಿಗೂ ಆಗಲ್ಲ. ಸಚಿವನಾಗುವ ಆಸೆ ಇದೆ. ಪ್ರಯತ್ನ ಮುಂದುವರಿಸುವೆ’ ಎಂದು ಶಾಸಕ ಜಿ. ಕರುಣಾಕರ ರೆಡ್ಡಿ ಹೇಳಿದರು.</p>.<p>ಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬುಧವಾರ ಭೂಮಿಪೂಜೆ ನೆರವೇರಿಸಿದ ಬಳಿಕ ಅವರು ಮಾತನಾಡಿದರು.</p>.<p>ಸಚಿವ ಸ್ಥಾನ ಕಲ್ಪಿಸುವಲ್ಲಿ ಬಳ್ಳಾರಿ ಜಿಲ್ಲೆ ಕಡೆಗಣಿಸಲಾಗಿದೆ ಎಂಬ ಪ್ರಶ್ನೆಗೆ, ‘ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಹೈಕಮಾಂಡ್ ಅವರನ್ನೇ ಕೇಳಬೇಕು’ ಎಂದರು.</p>.<p>‘ವಿಜಯನಗರ ಜಿಲ್ಲೆ ಪೂರ್ಣ ಪ್ರಮಾಣದಲ್ಲಿ ಅಸ್ತಿತ್ವಕ್ಕೆ ಬಂದಿಲ್ಲ. ಹಾಗಾಗಿ ಜಿಲ್ಲಾ ಉಸ್ತುವಾರಿ ಒಬ್ಬ ಸಚಿವರಿಗೆ ಕೊಟ್ಟಿದ್ದಾರೆ. ಯಾವಾಗಲು ಆಶಾ ಜೀವಿಗಳಾಗಿರಬೇಕು ಎನ್ನುವ ನಂಬಿಕೆಯಲ್ಲಿದ್ದೇನೆ. ಸಚಿವ ಸ್ಥಾನ ಕೊಡುವುದು ಬಿಡುವುದು ವರಿಷ್ಠರಿಗೆ ಬಿಟ್ಟದ್ದು’ ಎಂದು ತಿಳಿಸಿದರು.</p>.<p>ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಸತ್ತೂರು ಹಾಲೇಶ್, ಬಾಗಳಿ ಕೊಟ್ರೇಶ್, ಇಜಂತಕರ್ ಮಂಜುನಾಥ್, ರಾಘವೇಂದ್ರ ಶೆಟ್ಟಿ, ಯು.ಪಿ.ನಾಗರಾಜ್, ಮಂಜನಾಯ್ಕ, ಎಂ.ಮಲ್ಲೇಶ್, ಸಂತೋಷ್, ಆರ್. ಲೋಕೇಶ್, ನಿಟ್ಟೂರು ಸಣ್ಣಹಾಲಪ್ಪ, ಶಿರಗಾನಹಳ್ಳಿ ವಿಶ್ವನಾಥ್, ರಂಗಾಪುರ ಬಸವರಾಜ್, ವಿನಾಯಕ, ಉದಯ, ಕರೇಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>