ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತಗಳು, ತಳ ಸಮುದಾಯದ ಪರವಾಗಿದ್ದು, ಕಾಂಗ್ರೆಸ್ ತಳಸಮುದಾಯದ ಶ್ರೇಯೋಭಿವೃದ್ಧಿಗೆ ಹಲವು ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತರುವುದಾಗಿ ಪ್ರಣಾಳಿಕೆಯಲ್ಲಿ ಹೇಳಿದೆ. ಯುಪಿಎ ಸರ್ಕಾರವು ರಾಷ್ಟ್ರೀಯ ಅಲೆಮಾರಿ ಆಯೋಗವನ್ನು ರಚಿಸಿದೆ. ಕಾಂಗ್ರೆಸ್ ಬೆಂಬಲಿಸಲು ರಾಜ್ಯಮಟ್ಟದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.