ಕೊನೆಗೆ ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ಬಂದಾಗ ಅಲ್ಲಿಯೂ ಬೆಡ್ಗಳು ಖಾಲಿ ಇರಲಿಲ್ಲ. ಪೌರಕಾರ್ಮಿಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮೃತರ ಮಾವ ಉಚ್ಚೆಂಗೆಪ್ಪ ಅವರು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರಿಗೆ ದೂರವಾಣಿ ಮೂಲಕ ಮನವಿ ಮಾಡಿದ್ದಾಗ, ಜಿಲ್ಲಾಧಿಕಾರಿ ಬೆಡ್ ವ್ಯವಸ್ಥೆ ಮಾಡಿಸಿದ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಭಾನುವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ.